AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಅಜ್ಮೀರ್‌ನಲ್ಲಿ ಟ್ಯಾಂಕರ್-ಟ್ರಕ್ ಡಿಕ್ಕಿ; 4 ಮಂದಿ ಸಜೀವ ದಹನ

ಅಕ್ಕಪಕ್ಕದ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಟ್ಯಾಂಕರ್ ಮತ್ತು ಟ್ರೇಲರ್‌ಗೆ ಬೆಂಕಿ ಹೊತ್ತಿಕೊಂಡ ನಂತರ ರಸ್ತೆಯನ್ನು ನಿರ್ಬಂಧಿಸಲಾಗಿದೆ.

ರಾಜಸ್ಥಾನದ ಅಜ್ಮೀರ್‌ನಲ್ಲಿ ಟ್ಯಾಂಕರ್-ಟ್ರಕ್ ಡಿಕ್ಕಿ; 4 ಮಂದಿ ಸಜೀವ ದಹನ
ಹೊತ್ತಿ ಉರಿದ ಟ್ಯಾಂಕರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 17, 2023 | 2:33 PM

Share

ರಾಜಸ್ಥಾನದ ಅಜ್ಮೀರ್(Ajmer) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ(National Highway) ಗುರುವಾರ ರಾತ್ರಿ ಗ್ಯಾಸ್ ಟ್ಯಾಂಕರ್ ಟ್ರಕ್‌ಗೆ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯ ನಂತರ, ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ನಾಲ್ವರು ಸಜೀವ ದಹನವಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್‌ನಲ್ಲಿದ್ದ ಪೆಟ್ರೋಲಿಯಂ ಉತ್ಪನ್ನ ಹೊರೆಚೆಲ್ಲಿದ್ದು ಆ ಮೂಲಕ ಸಾಗುತ್ತಿದ್ದ ಇನ್ನೆರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದೆ.

ಅಕ್ಕಪಕ್ಕದ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಟ್ಯಾಂಕರ್ ಮತ್ತು ಟ್ರೇಲರ್‌ಗೆ ಬೆಂಕಿ ಹೊತ್ತಿಕೊಂಡ ನಂತರ ರಸ್ತೆಯನ್ನು ನಿರ್ಬಂಧಿಸಲಾಗಿದೆ.

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ. ಉಪವಿಭಾಗಾಧಿಕಾರಿ ಮೃದುಲ್ ಸಿಂಗ್, ಸದರ್ ಸರ್ಕಲ್ ಇನ್ಸ್‌ಪೆಕ್ಟರ್ ಚೆನಾರಾಮ್ ಬೇಡಾ, ಸರ್ಕಲ್ ಆಫೀಸರ್ ಮಸೂದ ಈಶ್ವರ್ ಸಿಂಗ್ ಯಾದವ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮುಂಬೈ: ಮಹಿಳೆಯ ಫೋನ್ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಅಗ್ನಿ ಅವಘಡದ ನಂತರ ಅಜ್ಮೀರ್ ಜಿಲ್ಲಾಧಿಕಾರಿ ಅಂಶದೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚುನಾರಾಮ್ ಜಾಟ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ