AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ

Nanded Violence: ಮಹಾರಾಷ್ಟ್ರದ ಎಲ್ಲೆಡೆ ಕೊರೊನಾ ವೈರಸ್ ಪ್ರಸರಣ ಮಿತಿಮೀರಿದೆ. ಹಾಗಾಗಿ ಸಿಖ್​ರ ಹಬ್ಬವಾದ ಹೋಲಾ ಮೊಹಲ್ಲಾದ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ. ನಾವಿದನ್ನು ಗುರುದ್ವಾರ ಸಮಿತಿಗೆ ತಿಳಿಸಿದ್ದೆವು. ನಿಮ್ಮ ಆದೇಶವನ್ನು ಪಾಲಿಸುವುದಾಗಿ ಅವರೂ ಹೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ
ನಾಂದೇಡ್​ನಲ್ಲಿ ನಡೆದ ಹಿಂಸಾಚಾರ
Lakshmi Hegde
|

Updated on: Mar 30, 2021 | 11:31 AM

Share

ನಾಂದೇಡ್​: ಕೊವಿಡ್​-19 ಸೋಂಕು ಮಿತಿಮೀರುತ್ತಿರುವ ಕಾರಣಕ್ಕೆ ಹೋಲಾ ಮೊಹಲ್ಲಾ ಮೆರವಣಿಗೆ ಅನುಮತಿ ನೀಡದೆ ಇರುವ ಕಾರಣಕ್ಕೆ ಸಿಟ್ಟಿಗೆದ್ದ ಸಿಖ್​ ಗುಂಪೊಂದು ಕತ್ತಿಗಳನ್ನು ಹಿಡಿದು ಗಲಾಟೆ ಸೃಷ್ಟಿಸಿದ್ದಲ್ಲದೆ, ಪೊಲೀಸರ ಮೇಲೆ ಹಲ್ಲೆಯನ್ನೂ ಮಾಡಿದೆ. ಈ ಗಲಾಟೆಯಲ್ಲಿ ನಾಲ್ವರು ಪೊಲೀಸ್​ ಸಿಬ್ಬಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಂದೇಡ್​​ನಲ್ಲಿ ಸೋಮವಾರ ನಡೆದಿದೆ. ಅನೇಕ ವಾಹನಗಳನ್ನೂ ಜಖಂಗೊಳಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಪೊಂದು ಕತ್ತಿಗಳನ್ನು ಹಿಡಿದು ಗುರುದ್ವಾರದಿಂದ ಹೊರಬಂದು ಪೊಲೀಸರು ಹಾಕಿದ್ದ ಬ್ಯಾರಿಕೇಡ್​ಗಳನ್ನು ಮುರಿದು, ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಮಹಾರಾಷ್ಟ್ರದ ಎಲ್ಲೆಡೆ ಕೊರೊನಾ ವೈರಸ್ ಪ್ರಸರಣ ಮಿತಿಮೀರಿದೆ. ಹಾಗಾಗಿ ಸಿಖ್​ರ ಹಬ್ಬವಾದ ಹೋಲಾ ಮೊಹಲ್ಲಾದ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ. ನಾವಿದನ್ನು ಗುರುದ್ವಾರ ಸಮಿತಿಗೆ ತಿಳಿಸಿದ್ದೆವು. ನಿಮ್ಮ ಆದೇಶವನ್ನು ಪಾಲಿಸುವುದಾಗಿ ಅವರೂ ಹೇಳಿದ್ದರು. ಗುರುದ್ವಾರದ ಒಳಗೇ ಕಾರ್ಯಕ್ರಮ ನಡೆಸುವುದಾಗಿಯೂ ಭರವಸೆ ನೀಡಿದ್ದರು. ಆದರೆ ಸಂಜೆ 4 ಗಂಟೆ ಹೊತ್ತಿಗೆ ಅವರ ನಿಶಾನ್​ ಸಾಹಿಬ್ ಧ್ವಜವನ್ನು ಗುರುದ್ವಾರದ ಗೇಟ್​ ಬಳಿ ತರುತ್ತಿದ್ದಂತೆ ವರಸೆಯೇ ಬದಲಾಗಿ ಹೋಯಿತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಹಲವರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. 300ಕ್ಕೂ ಹೆಚ್ಚು ಯುವಕರು ಗೇಟ್​ನ್ನು ತೆರೆದು, ನುಗ್ಗಿಬಂದು ಬ್ಯಾರಿಕೇಡ್​​ಗಳನ್ನು ಮುರಿದರು. ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಲು ತೊಡಗಿದರು ಎಂದು ನಾಂದೇಡ್​​ ವಲಯದ ಡಿಐಜಿ ನಿಸಾರ್​ ತಾಂಬೋಲಿ ತಿಳಿಸಿದ್ದಾರೆ.

ಗಾಯಗೊಂಡ ನಾಲ್ವರು ಪೊಲೀಸ್ ಸಿಬ್ಬಂದಿಯಲ್ಲಿ ಓರ್ವ ಕಾನ್​ಸ್ಟೆಬಲ್​ ಸ್ಥಿತಿ ಗಂಭೀರವಾಗಿದೆ. ಸುಮಾರು 6 ಪೊಲೀಸ್​ ವಾಹನಗಳು ಜಖಂಗೊಂಡಿವೆ. ಸುಮಾರು 200 ಜನರ ವಿರುದ್ಧ ಕೊಲೆ ಯತ್ನ ಸೆಕ್ಷನ್​ನಡಿ ಎಫ್​ಐಆರ್​ ದಾಖಲಿಸಲಾಗಿದೆ. ಈ ಹಿಂಸಾಚಾರ ನಡೆಸಿದವರನ್ನು ಎಲ್ಲರನ್ನೂ ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಏನಿದು ಹೋಲಾ ಮೊಹಲ್ಲಾ(ಹೋಲಾ)? ಹೋಲಾ ಮೊಹಲ್ಲಾ ಎಂಬುದು ಸಿಖ್​ರು ಆಚರಿಸುವ ಹಬ್ಬ. ಹೋಳಿ ಹಬ್ಬದ ಮರುದಿನ ಈ ಹಬ್ಬ ಆಚರಿಸಲಾಗುತ್ತದೆ. ಹೋಳಿ ಹಬ್ಬದಲ್ಲಿ ಹಿಂದುಗಳು ಬಣ್ಣಗಳನ್ನು ಪರಸ್ಪರ ಎರಚಿಕೊಂಡು ಸಂಭ್ರಮಿಸಿದರೆ, ಹೋಲಾ ಮೊಹಲ್ಲಾದಲ್ಲಿ ಸಿಖ್​ರು ತಮ್ಮ ಸಮರ ಕೌಶಲಗಳನ್ನು ಪ್ರದರ್ಶಿಸುತ್ತಾರೆ. ಮಹಾರಾಷ್ಟ್ರದ ನಾಂದೇಡ್​ ಸಿಖ್​ರ ಪ್ರಮುಖ ಯಾತ್ರಾಸ್ಥಳವಾಗಿದೆ. ಅಲ್ಲಿ ಪ್ರತಿವರ್ಷವೂ ಹೋಲಾ ಮೊಹಲ್ಲಾವನ್ನು ಅದ್ದೂರಿ, ಸಂಭ್ರಮದಿಂದ ಆಚರಿಸಲಾಗುತ್ತದೆ.

ಇದನ್ನೂ ಓದಿ: ಕಾಯಕ ಯೋಗಿ ಹುಟ್ಟುಹಬ್ಬ ಆಚರಣೆಗೆ ಕೊರೊನಾ ಅಡ್ಡಿ.. ಸರಳ ಆಚರಣೆಗೆ ಸಿದ್ಧತೆ

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ