AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ

Nanded Violence: ಮಹಾರಾಷ್ಟ್ರದ ಎಲ್ಲೆಡೆ ಕೊರೊನಾ ವೈರಸ್ ಪ್ರಸರಣ ಮಿತಿಮೀರಿದೆ. ಹಾಗಾಗಿ ಸಿಖ್​ರ ಹಬ್ಬವಾದ ಹೋಲಾ ಮೊಹಲ್ಲಾದ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ. ನಾವಿದನ್ನು ಗುರುದ್ವಾರ ಸಮಿತಿಗೆ ತಿಳಿಸಿದ್ದೆವು. ನಿಮ್ಮ ಆದೇಶವನ್ನು ಪಾಲಿಸುವುದಾಗಿ ಅವರೂ ಹೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ
ನಾಂದೇಡ್​ನಲ್ಲಿ ನಡೆದ ಹಿಂಸಾಚಾರ
Follow us
Lakshmi Hegde
|

Updated on: Mar 30, 2021 | 11:31 AM

ನಾಂದೇಡ್​: ಕೊವಿಡ್​-19 ಸೋಂಕು ಮಿತಿಮೀರುತ್ತಿರುವ ಕಾರಣಕ್ಕೆ ಹೋಲಾ ಮೊಹಲ್ಲಾ ಮೆರವಣಿಗೆ ಅನುಮತಿ ನೀಡದೆ ಇರುವ ಕಾರಣಕ್ಕೆ ಸಿಟ್ಟಿಗೆದ್ದ ಸಿಖ್​ ಗುಂಪೊಂದು ಕತ್ತಿಗಳನ್ನು ಹಿಡಿದು ಗಲಾಟೆ ಸೃಷ್ಟಿಸಿದ್ದಲ್ಲದೆ, ಪೊಲೀಸರ ಮೇಲೆ ಹಲ್ಲೆಯನ್ನೂ ಮಾಡಿದೆ. ಈ ಗಲಾಟೆಯಲ್ಲಿ ನಾಲ್ವರು ಪೊಲೀಸ್​ ಸಿಬ್ಬಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಂದೇಡ್​​ನಲ್ಲಿ ಸೋಮವಾರ ನಡೆದಿದೆ. ಅನೇಕ ವಾಹನಗಳನ್ನೂ ಜಖಂಗೊಳಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಪೊಂದು ಕತ್ತಿಗಳನ್ನು ಹಿಡಿದು ಗುರುದ್ವಾರದಿಂದ ಹೊರಬಂದು ಪೊಲೀಸರು ಹಾಕಿದ್ದ ಬ್ಯಾರಿಕೇಡ್​ಗಳನ್ನು ಮುರಿದು, ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಮಹಾರಾಷ್ಟ್ರದ ಎಲ್ಲೆಡೆ ಕೊರೊನಾ ವೈರಸ್ ಪ್ರಸರಣ ಮಿತಿಮೀರಿದೆ. ಹಾಗಾಗಿ ಸಿಖ್​ರ ಹಬ್ಬವಾದ ಹೋಲಾ ಮೊಹಲ್ಲಾದ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ. ನಾವಿದನ್ನು ಗುರುದ್ವಾರ ಸಮಿತಿಗೆ ತಿಳಿಸಿದ್ದೆವು. ನಿಮ್ಮ ಆದೇಶವನ್ನು ಪಾಲಿಸುವುದಾಗಿ ಅವರೂ ಹೇಳಿದ್ದರು. ಗುರುದ್ವಾರದ ಒಳಗೇ ಕಾರ್ಯಕ್ರಮ ನಡೆಸುವುದಾಗಿಯೂ ಭರವಸೆ ನೀಡಿದ್ದರು. ಆದರೆ ಸಂಜೆ 4 ಗಂಟೆ ಹೊತ್ತಿಗೆ ಅವರ ನಿಶಾನ್​ ಸಾಹಿಬ್ ಧ್ವಜವನ್ನು ಗುರುದ್ವಾರದ ಗೇಟ್​ ಬಳಿ ತರುತ್ತಿದ್ದಂತೆ ವರಸೆಯೇ ಬದಲಾಗಿ ಹೋಯಿತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಹಲವರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. 300ಕ್ಕೂ ಹೆಚ್ಚು ಯುವಕರು ಗೇಟ್​ನ್ನು ತೆರೆದು, ನುಗ್ಗಿಬಂದು ಬ್ಯಾರಿಕೇಡ್​​ಗಳನ್ನು ಮುರಿದರು. ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಲು ತೊಡಗಿದರು ಎಂದು ನಾಂದೇಡ್​​ ವಲಯದ ಡಿಐಜಿ ನಿಸಾರ್​ ತಾಂಬೋಲಿ ತಿಳಿಸಿದ್ದಾರೆ.

ಗಾಯಗೊಂಡ ನಾಲ್ವರು ಪೊಲೀಸ್ ಸಿಬ್ಬಂದಿಯಲ್ಲಿ ಓರ್ವ ಕಾನ್​ಸ್ಟೆಬಲ್​ ಸ್ಥಿತಿ ಗಂಭೀರವಾಗಿದೆ. ಸುಮಾರು 6 ಪೊಲೀಸ್​ ವಾಹನಗಳು ಜಖಂಗೊಂಡಿವೆ. ಸುಮಾರು 200 ಜನರ ವಿರುದ್ಧ ಕೊಲೆ ಯತ್ನ ಸೆಕ್ಷನ್​ನಡಿ ಎಫ್​ಐಆರ್​ ದಾಖಲಿಸಲಾಗಿದೆ. ಈ ಹಿಂಸಾಚಾರ ನಡೆಸಿದವರನ್ನು ಎಲ್ಲರನ್ನೂ ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಏನಿದು ಹೋಲಾ ಮೊಹಲ್ಲಾ(ಹೋಲಾ)? ಹೋಲಾ ಮೊಹಲ್ಲಾ ಎಂಬುದು ಸಿಖ್​ರು ಆಚರಿಸುವ ಹಬ್ಬ. ಹೋಳಿ ಹಬ್ಬದ ಮರುದಿನ ಈ ಹಬ್ಬ ಆಚರಿಸಲಾಗುತ್ತದೆ. ಹೋಳಿ ಹಬ್ಬದಲ್ಲಿ ಹಿಂದುಗಳು ಬಣ್ಣಗಳನ್ನು ಪರಸ್ಪರ ಎರಚಿಕೊಂಡು ಸಂಭ್ರಮಿಸಿದರೆ, ಹೋಲಾ ಮೊಹಲ್ಲಾದಲ್ಲಿ ಸಿಖ್​ರು ತಮ್ಮ ಸಮರ ಕೌಶಲಗಳನ್ನು ಪ್ರದರ್ಶಿಸುತ್ತಾರೆ. ಮಹಾರಾಷ್ಟ್ರದ ನಾಂದೇಡ್​ ಸಿಖ್​ರ ಪ್ರಮುಖ ಯಾತ್ರಾಸ್ಥಳವಾಗಿದೆ. ಅಲ್ಲಿ ಪ್ರತಿವರ್ಷವೂ ಹೋಲಾ ಮೊಹಲ್ಲಾವನ್ನು ಅದ್ದೂರಿ, ಸಂಭ್ರಮದಿಂದ ಆಚರಿಸಲಾಗುತ್ತದೆ.

ಇದನ್ನೂ ಓದಿ: ಕಾಯಕ ಯೋಗಿ ಹುಟ್ಟುಹಬ್ಬ ಆಚರಣೆಗೆ ಕೊರೊನಾ ಅಡ್ಡಿ.. ಸರಳ ಆಚರಣೆಗೆ ಸಿದ್ಧತೆ

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ