AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ

Nanded Violence: ಮಹಾರಾಷ್ಟ್ರದ ಎಲ್ಲೆಡೆ ಕೊರೊನಾ ವೈರಸ್ ಪ್ರಸರಣ ಮಿತಿಮೀರಿದೆ. ಹಾಗಾಗಿ ಸಿಖ್​ರ ಹಬ್ಬವಾದ ಹೋಲಾ ಮೊಹಲ್ಲಾದ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ. ನಾವಿದನ್ನು ಗುರುದ್ವಾರ ಸಮಿತಿಗೆ ತಿಳಿಸಿದ್ದೆವು. ನಿಮ್ಮ ಆದೇಶವನ್ನು ಪಾಲಿಸುವುದಾಗಿ ಅವರೂ ಹೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹೋಲಾ ಮೊಹಲ್ಲಾ ಮೆರವಣಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಸಿಖ್​ ಯುವಕರು; ಕತ್ತಿ ಹಿಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ವಾಹನಗಳೆಲ್ಲ ಪುಡಿಪುಡಿ
ನಾಂದೇಡ್​ನಲ್ಲಿ ನಡೆದ ಹಿಂಸಾಚಾರ
Lakshmi Hegde
|

Updated on: Mar 30, 2021 | 11:31 AM

Share

ನಾಂದೇಡ್​: ಕೊವಿಡ್​-19 ಸೋಂಕು ಮಿತಿಮೀರುತ್ತಿರುವ ಕಾರಣಕ್ಕೆ ಹೋಲಾ ಮೊಹಲ್ಲಾ ಮೆರವಣಿಗೆ ಅನುಮತಿ ನೀಡದೆ ಇರುವ ಕಾರಣಕ್ಕೆ ಸಿಟ್ಟಿಗೆದ್ದ ಸಿಖ್​ ಗುಂಪೊಂದು ಕತ್ತಿಗಳನ್ನು ಹಿಡಿದು ಗಲಾಟೆ ಸೃಷ್ಟಿಸಿದ್ದಲ್ಲದೆ, ಪೊಲೀಸರ ಮೇಲೆ ಹಲ್ಲೆಯನ್ನೂ ಮಾಡಿದೆ. ಈ ಗಲಾಟೆಯಲ್ಲಿ ನಾಲ್ವರು ಪೊಲೀಸ್​ ಸಿಬ್ಬಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಂದೇಡ್​​ನಲ್ಲಿ ಸೋಮವಾರ ನಡೆದಿದೆ. ಅನೇಕ ವಾಹನಗಳನ್ನೂ ಜಖಂಗೊಳಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಗುಂಪೊಂದು ಕತ್ತಿಗಳನ್ನು ಹಿಡಿದು ಗುರುದ್ವಾರದಿಂದ ಹೊರಬಂದು ಪೊಲೀಸರು ಹಾಕಿದ್ದ ಬ್ಯಾರಿಕೇಡ್​ಗಳನ್ನು ಮುರಿದು, ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಮಹಾರಾಷ್ಟ್ರದ ಎಲ್ಲೆಡೆ ಕೊರೊನಾ ವೈರಸ್ ಪ್ರಸರಣ ಮಿತಿಮೀರಿದೆ. ಹಾಗಾಗಿ ಸಿಖ್​ರ ಹಬ್ಬವಾದ ಹೋಲಾ ಮೊಹಲ್ಲಾದ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ. ನಾವಿದನ್ನು ಗುರುದ್ವಾರ ಸಮಿತಿಗೆ ತಿಳಿಸಿದ್ದೆವು. ನಿಮ್ಮ ಆದೇಶವನ್ನು ಪಾಲಿಸುವುದಾಗಿ ಅವರೂ ಹೇಳಿದ್ದರು. ಗುರುದ್ವಾರದ ಒಳಗೇ ಕಾರ್ಯಕ್ರಮ ನಡೆಸುವುದಾಗಿಯೂ ಭರವಸೆ ನೀಡಿದ್ದರು. ಆದರೆ ಸಂಜೆ 4 ಗಂಟೆ ಹೊತ್ತಿಗೆ ಅವರ ನಿಶಾನ್​ ಸಾಹಿಬ್ ಧ್ವಜವನ್ನು ಗುರುದ್ವಾರದ ಗೇಟ್​ ಬಳಿ ತರುತ್ತಿದ್ದಂತೆ ವರಸೆಯೇ ಬದಲಾಗಿ ಹೋಯಿತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಹಲವರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. 300ಕ್ಕೂ ಹೆಚ್ಚು ಯುವಕರು ಗೇಟ್​ನ್ನು ತೆರೆದು, ನುಗ್ಗಿಬಂದು ಬ್ಯಾರಿಕೇಡ್​​ಗಳನ್ನು ಮುರಿದರು. ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಲು ತೊಡಗಿದರು ಎಂದು ನಾಂದೇಡ್​​ ವಲಯದ ಡಿಐಜಿ ನಿಸಾರ್​ ತಾಂಬೋಲಿ ತಿಳಿಸಿದ್ದಾರೆ.

ಗಾಯಗೊಂಡ ನಾಲ್ವರು ಪೊಲೀಸ್ ಸಿಬ್ಬಂದಿಯಲ್ಲಿ ಓರ್ವ ಕಾನ್​ಸ್ಟೆಬಲ್​ ಸ್ಥಿತಿ ಗಂಭೀರವಾಗಿದೆ. ಸುಮಾರು 6 ಪೊಲೀಸ್​ ವಾಹನಗಳು ಜಖಂಗೊಂಡಿವೆ. ಸುಮಾರು 200 ಜನರ ವಿರುದ್ಧ ಕೊಲೆ ಯತ್ನ ಸೆಕ್ಷನ್​ನಡಿ ಎಫ್​ಐಆರ್​ ದಾಖಲಿಸಲಾಗಿದೆ. ಈ ಹಿಂಸಾಚಾರ ನಡೆಸಿದವರನ್ನು ಎಲ್ಲರನ್ನೂ ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಏನಿದು ಹೋಲಾ ಮೊಹಲ್ಲಾ(ಹೋಲಾ)? ಹೋಲಾ ಮೊಹಲ್ಲಾ ಎಂಬುದು ಸಿಖ್​ರು ಆಚರಿಸುವ ಹಬ್ಬ. ಹೋಳಿ ಹಬ್ಬದ ಮರುದಿನ ಈ ಹಬ್ಬ ಆಚರಿಸಲಾಗುತ್ತದೆ. ಹೋಳಿ ಹಬ್ಬದಲ್ಲಿ ಹಿಂದುಗಳು ಬಣ್ಣಗಳನ್ನು ಪರಸ್ಪರ ಎರಚಿಕೊಂಡು ಸಂಭ್ರಮಿಸಿದರೆ, ಹೋಲಾ ಮೊಹಲ್ಲಾದಲ್ಲಿ ಸಿಖ್​ರು ತಮ್ಮ ಸಮರ ಕೌಶಲಗಳನ್ನು ಪ್ರದರ್ಶಿಸುತ್ತಾರೆ. ಮಹಾರಾಷ್ಟ್ರದ ನಾಂದೇಡ್​ ಸಿಖ್​ರ ಪ್ರಮುಖ ಯಾತ್ರಾಸ್ಥಳವಾಗಿದೆ. ಅಲ್ಲಿ ಪ್ರತಿವರ್ಷವೂ ಹೋಲಾ ಮೊಹಲ್ಲಾವನ್ನು ಅದ್ದೂರಿ, ಸಂಭ್ರಮದಿಂದ ಆಚರಿಸಲಾಗುತ್ತದೆ.

ಇದನ್ನೂ ಓದಿ: ಕಾಯಕ ಯೋಗಿ ಹುಟ್ಟುಹಬ್ಬ ಆಚರಣೆಗೆ ಕೊರೊನಾ ಅಡ್ಡಿ.. ಸರಳ ಆಚರಣೆಗೆ ಸಿದ್ಧತೆ

BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್