AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಸೂರತ್‌ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ; 15 ಮಂದಿಗೆ ಗಾಯ, ಐವರು ಸಿಲುಕಿರುವ ಶಂಕೆ

ಸೂರತ್‌ನ ಸಚಿನ್ ಪ್ರದೇಶದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು 15 ಮಂದೆಗೆ ಗಾಯಗಳಾಗಿವೆ. ಹಲವಾರು ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಗುಜರಾತ್: ಸೂರತ್‌ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ; 15 ಮಂದಿಗೆ ಗಾಯ, ಐವರು ಸಿಲುಕಿರುವ ಶಂಕೆ
ಕಟ್ಟಡ ಕುಸಿತ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 06, 2024 | 8:09 PM

Share

ದೆಹಲಿ ಜುಲೈ 06: ಶನಿವಾರ ಸೂರತ್‌ನ (Surat) ಸಚಿನ್ ಪ್ರದೇಶದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು(building collapse) ಬಿದ್ದಿದೆ ಎಂದು ಎಎನ್‌ಐ ವರದಿ ಮಾಡಿದೆ. ಈ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 4-5 ಫ್ಲಾಟ್‌ಗಳು ಬಿದ್ದಿವೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ ಆದರೆ ಸುಮಾರು 3-4 ಜನರು ಇನ್ನೂ ಅವಶೇಷಗಳೊಳಗೆ ಸಿಲುಕಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು (ಅವರನ್ನು ರಕ್ಷಿಸಲು) ಕಾರ್ಯನಿರ್ವಹಿಸುತ್ತಿವೆ” ಎಂದು ಸೂರತ್ ಜಿಲ್ಲಾಧಿಕಾರಿ ಸೌರಭ್ ಪಾರ್ಧಿ ಪಿಟಿಐಗೆ ತಿಳಿಸಿದರು.

“2016-17 ರಲ್ಲಿ ನಿರ್ಮಿಸಲಾದ ಪಾಲಿ ಗ್ರಾಮದಲ್ಲಿ ಕಟ್ಟಡವೊಂದು ಕುಸಿದಿದೆ. ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 2-3 ಜನರು ಒಳಗೆ ಸಿಲುಕಿಕೊಂಡಿದ್ದಾರೆ. ತಜ್ಞರು ಇಲ್ಲಿದ್ದಾರೆ ಮತ್ತು ಮುಂದಿನ ಒಂದು ಅಥವಾ ಎರಡು ಗಂಟೆಗಳಲ್ಲಿ ನಾವು ಉಳಿದ ವ್ಯಕ್ತಿಗಳನ್ನು ಹೊರತರಲು ಸಾಧ್ಯವಾಗುತ್ತದೆ ಎಂದು ಭಾವಿಸುತ್ತೇವೆ ಎಂದು ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗಹ್ಲೌತ್  ಹೇಳಿದ್ದಾರೆ .

ಈ ವರ್ಷದ ಮಾರ್ಚ್‌ನಲ್ಲಿ ಮೊರ್ಬಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವೈದ್ಯಕೀಯ ಕಾಲೇಜು ಕಟ್ಟಡದ ಒಂದು ಭಾಗ ಕುಸಿದು ನಾಲ್ವರು ಕಾರ್ಮಿಕರು ಗಾಯಗೊಂಡಿದ್ದರು. ಏಳು ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದ ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಲಾಗಿತ್ತು. ಮಾರ್ಚ್ 9 ರಂದು ರಾತ್ರಿ 8:00 ರ ಸುಮಾರಿಗೆ ಹೊಸ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಮಿಕರು ಮೇಲ್ಛಾವಣಿಯನ್ನು ತುಂಬುವ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ದೆಹಲಿಯಲ್ಲಿ ಜೂನ್ 30 ರಂದು ದೆಹಲಿಯ ಹರ್ಷ್ ವಿಹಾರ್ ಪ್ರದೇಶದಲ್ಲಿ ಹಳೆಯ ಕಟ್ಟಡದ ಟೆರೇಸ್‌ನ ಒಂದು ಭಾಗವು ಕುಸಿದು ಆರು ವರ್ಷದ ಬಾಲಕ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಪಿಟಿಐ ವರದಿಯ ಪ್ರಕಾರ, ಹುಡುಗ ಟೆರೇಸ್ ಮೇಲೆ ಆಡುತ್ತಿದ್ದಾಗ ಘಟನೆ ಸಂಜೆ ಸಂಭವಿಸಿದೆ. ಆತನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಕಟ್ಟಡದ ಮಾಲೀಕ ರಾಮ್‌ಜಿ ಲಾಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.

“ಸಂಜೆ 5 ಗಂಟೆಯ ಸುಮಾರಿಗೆ, ಪ್ರತಾಪ್ ನಗರ ಪ್ರದೇಶದಲ್ಲಿ ಕಟ್ಟಡ ಕುಸಿತದ ಬಗ್ಗೆ ನಮಗೆ ಕರೆ ಬಂದಿತು. ಕರೆ ಮಾಡಿದವರು, ಸಂತೋಷ್ ಕುಮಾರ್ ಅವರು ತಮ್ಮ ಮಗ ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ” ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಜಾಯ್ ಟಿರ್ಕೆ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Sat, 6 July 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ