AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಮೆಟಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ: ನಾಲ್ವರು ಕಾರ್ಮಿಕರ ಸಾವು, ಮಾಲೀಕ ಸೇರಿ ಐವರ ಬಂಧನ

ಅಸ್ಸಾಂನ ಕಚಾರ್ ಜಿಲ್ಲೆಯ ಲೋಹ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟ(Blast)ದಲ್ಲಿ ನಾಲ್ವರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರ್ಖಾನೆಯ ಮಾಲೀಕ ಹಾಗೂ ಮಂಡಳಿಯ ನಾಲ್ವರು ಸದಸ್ಯರು ಸೇರಿ ಐವರನ್ನು ಬಂಧಿಸಿದ್ದಾರೆ. ಕಾರ್ಖಾನೆಯ ಒಳಗೆ ಕೆಲಸ ನಡೆಯುತ್ತಿದ್ದಾಗ ಏಕಾಏಕಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕರಗಿದ ಬಿಸಿ ಲೋಹವು ಸುತ್ತಲೂ ಸಿಡಿದು ಹತ್ತಿರದಲ್ಲಿದ್ದ ಕಾರ್ಮಿಕರ ಮೇಲೆ ಬಿದ್ದಿದೆ

ಅಸ್ಸಾಂ ಮೆಟಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ: ನಾಲ್ವರು ಕಾರ್ಮಿಕರ ಸಾವು, ಮಾಲೀಕ ಸೇರಿ ಐವರ ಬಂಧನ
ಅಸ್ಸಾಂ ಫ್ಯಾಕ್ಟರಿ
ನಯನಾ ರಾಜೀವ್
|

Updated on:Jul 28, 2026 | 9:47 AM

Share

ಕಚಾರ್,ಜುಲೈ 28: ಅಸ್ಸಾಂನ ಕಚಾರ್ ಜಿಲ್ಲೆಯ ಲೋಹ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟ(Blast)ದಲ್ಲಿ ನಾಲ್ವರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರ್ಖಾನೆಯ ಮಾಲೀಕ ಹಾಗೂ ಮಂಡಳಿಯ ನಾಲ್ವರು ಸದಸ್ಯರು ಸೇರಿ ಐವರನ್ನು ಬಂಧಿಸಿದ್ದಾರೆ.

ಕಾರ್ಖಾನೆಯ ಒಳಗೆ ಕೆಲಸ ನಡೆಯುತ್ತಿದ್ದಾಗ ಏಕಾಏಕಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕರಗಿದ ಬಿಸಿ ಲೋಹವು ಸುತ್ತಲೂ ಸಿಡಿದು ಹತ್ತಿರದಲ್ಲಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಹಾಗೂ ಚಿಕಿತ್ಸೆ ವೇಳೆ ಮೃತಪಟ್ಟರೆ, ಗಾಯಗೊಂಡ ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ನಂತರ ಗುವಾಹಟಿಯಲ್ಲಿ ತಲೆಮರೆಸಿಕೊಂಡಿದ್ದ ಕಾರ್ಖಾನೆಯ ಮಾಲೀಕನನ್ನು ಸೋಮವಾರ ಬಂಧಿಸಲಾಗಿದ್ದು, ಉಳಿದ ನಾಲ್ವರನ್ನು ಕಚಾರ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಕಠಿಣ ನಿಬಂಧನೆಗಳಡಿ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಚಲಿಸುತ್ತಿದ್ದ ಟ್ರಕ್ ಟೈರ್ ಸ್ಫೋಟ, ಮನೆಯೊಳಗೆ ನುಗ್ಗಿದ ಲಾರಿಗೆ, ಒಂದೇ ಕುಟುಂಬದ ಮೂವರು ಬಲಿ

ಪ್ರತಿಭಟನೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ಸಾರ್ವಜನಿಕರ ಆಕ್ರೋಶ: ಕಾರ್ಖಾನೆಯಲ್ಲಿ ಯಾವುದೇ ಸುರಕ್ಷತಾ ಮಾನದಂಡಗಳನ್ನು ಪಾಲಿಸುತ್ತಿರಲಿಲ್ಲ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಘಟಕದ ಹೊರಗೆ ಭಾರಿ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಪೋಸ್ಟ್

ತನಿಖೆಗೆ ಆದೇಶ: ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಸಚಿವ ಕೌಶಿಕ್ ರೈ, ಘಟನೆಯ ಕುರಿತು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಫೋಟದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಲಾ 5 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಕೈಗಾರಿಕಾ ಘಟಕಗಳ ಸುರಕ್ಷತಾ ತಪಾಸಣೆ ನಡೆಸಲು ಸೂಚಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:39 am, Tue, 28 July 26

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ