AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ

ಗಾಯಗೊಂಡ ಕೆಲಸಗಾರನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಸ್ಫೋಟದ ನಂತರ ಭಯಂಕರ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ನಂದಿಸಲಾಗಿದೆ.

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ
ಕೆಮಿಕಲ್​ ಕಾರ್ಖಾನೆಯಲ್ಲಿ ದಟ್ಟನೆಯ ಹೊಗೆ ಆವರಿಸಿರುವುದು
Lakshmi Hegde
|

Updated on: Mar 20, 2021 | 3:29 PM

Share

ಮುಂಬೈ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅವಳಿ ಸ್ಫೋಟವುಂಟಾಗಿ ನಾಲ್ವರು ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ 9.15ರ ಹೊತ್ತಿಗೆ ದುರಂತ ನಡೆದಿದ್ದು, ಕಾರ್ಖಾನೆಯಲ್ಲಿ ಸಿಲುಕಿದ್ದ 40 ಜನರನ್ನು ಸುರಕ್ಷಿತವಾಗಿ ಹೊರಕರೆತರಲಾಗಿದೆ.

ಲೋಟೆ-ಪರಶುರಾಮ್ ಎಂಐಡಿಸಿ ಸಂಕೀರ್ಣದಲ್ಲಿರುವ ಘರ್ದಾ ಕೆಮಿಕಲ್​ ಲಿಮಿಟೆಡ್​ನಲ್ಲಿ ಎರಡು ಬಾರಿ ಸ್ಫೋಟವಾಗಿದೆ. ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಒಳಗೆ ಸಿಲುಕಿದ್ದ ಉದ್ಯೋಗಿಗಳ ರಕ್ಷಣೆಯನ್ನೂ ಮಾಡಿದ್ದಾರೆ. ಆದರೂ ನಾಲ್ವರು ಮೃತಪಟ್ಟಿದ್ದು, ಇನ್ನೊಬ್ಬಾತ ಗಂಭೀರವಾಗಿ ಗಾಯಗೊಂಡಿದ್ದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಕೆಲಸಗಾರನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಸ್ಫೋಟದ ನಂತರ ಭಯಂಕರ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ನಂದಿಸಲಾಗಿದೆ. ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇಂಥ ಸ್ಫೋಟಗಳು, ವಿಷಾನಿಲ ಸೋರಿಕೆ ದುರಂತಗಳು ಆಗಾಗ ಮರುಕಳಿಸುತ್ತಿರುತ್ತವೆ. ಕಳೆದ ವರ್ಷ ಮೇ ತಿಂಗಳಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿರುವ ಎಲ್​ಜಿ ಪಾಲಿಮರ್ಸ್​​ನಲ್ಲಿ ವಿಷ ಅನಿಲ ಸೋರಿಕೆಯಾಗಿ ಸುಮಾರು 11 ಮಂದಿ ಮೃತಪಟ್ಟಿದ್ದರು. ನೂರಾರು ಮಂದಿಯನ್ನು ಆಸ್ಪತ್ರೆಗೆ ದಾಖಲುಮಾಡಲಾಗಿತ್ತು. ಅಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ.ಪರಿಹಾರ ನೀಡಿದ್ದರು.

ಇದನ್ನೂ ಓದಿ: Ripped Jeans;ತೀರತ್​ ಸಿಂಗ್ ರಾವತ್ ಅವರಿಗೊಂದು ಪತ್ರ: ಹೆಣ್ಣುಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸಮಾನತೆಯ ಬಗ್ಗೆ ಯೋಚಿಸಬೇಕೆನ್ನಿಸುತ್ತಿಲ್ಲವೆ?

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!