AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 14 ಸರ್ಕಾರಿ ವೈದ್ಯರು ರಾಜೀನಾಮೆ

ಜಂಟಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ 14 ವೈದ್ಯರಲ್ಲಿ 11 ಮಂದಿ ಬುಧವಾರ ಸಂಜೆ ಉನ್ನಾವ್ ನ ಮುಖ್ಯ ವೈದ್ಯಾಧಿಕಾರಿ ಕಚೇರಿಗೆ ಭೇಟಿ ನೀಡಿ ಪತ್ರವನ್ನು ತಮ್ಮ ಡೆಪ್ಯುಟಿ ವೈದ್ಯಾಧಿಕಾರಿಗೆ ಹಸ್ತಾಂತರಿಸಿದರು

ಉತ್ತರ ಪ್ರದೇಶದಲ್ಲಿ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 14 ಸರ್ಕಾರಿ ವೈದ್ಯರು ರಾಜೀನಾಮೆ
ಸಾಂಕೇತಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:May 13, 2021 | 6:21 PM

Share

ಲಕ್ನೊ: ಉತ್ತರ ಪ್ರದೇಶದ ರಾಜಧಾನಿ ಲಕ್ನೊದಿಂದ 40ಕಿಮಿ ದೂರದಲ್ಲಿರುವ ಉನ್ನಾವ್ ಜಿಲ್ಲೆಯ ಗ್ರಾಮೀಣ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 14 ಸರ್ಕಾರಿ ವೈದ್ಯರು ಗುರುವಾರ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಕೊವಿಡ್ ಪ್ರಕರಣ ಹೆಚ್ಚಳಕ್ಕೆ ನಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಆರೋಪಿಸಿ ವೈದ್ಯರು ರಾಜೀನಾಮೆ ನೀಡಿದ್ದಾರೆ.  ಉನ್ನಾವ್ ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉಸ್ತುವಾರಿಯನ್ನು ವೈದ್ಯರು ವಹಿಸಿಕೊಂಡಿದ್ದಾರೆ. ಈ ಎರಡೂ ಸ್ಥಳಗಳು ಗ್ರಾಮೀಣ ಆಸ್ಪತ್ರೆಗಳಾಗಿವೆ. ಇವು ಹಳ್ಳಿಯ ಜನರಿಗೆ ಆರೋಗ್ಯ ವ್ಯವಸ್ಥೆ ಒದಗಿಸುತ್ತವೆ.

ಜಂಟಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ 14 ವೈದ್ಯರಲ್ಲಿ 11 ಮಂದಿ ಬುಧವಾರ ಸಂಜೆ ಉನ್ನಾವ್ ನ ಮುಖ್ಯ ವೈದ್ಯಾಧಿಕಾರಿ ಕಚೇರಿಗೆ ಭೇಟಿ ನೀಡಿ ಪತ್ರವನ್ನು ತಮ್ಮ ಡೆಪ್ಯುಟಿ ವೈದ್ಯಾಧಿಕಾರಿಗೆ ಹಸ್ತಾಂತರಿಸಿದರು. ಸಾಂಕ್ರಾಮಿಕ ರೋಗ ನಿಯಂತ್ರಿಸಲು ಶ್ರಮವಹಿಸಿದ್ದರೂ ಕೊವಿಡ್ ಪ್ರಕರಣದ ಹೆಚ್ಚಳಕ್ಕೆ ವೈದ್ಯರನ್ನೇ ದೂಷಿಸಲಾಗಿದೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಉನ್ನಾವ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಇಂದು ಮಧ್ಯಾಹ್ನ ಹೊಸ ಹೇಳಿಕೆ ನೀಡಿದ್ದು ಸಮಸ್ಯೆ ಪರಿಹರಿಸಲಾಗಿದೆ ವೈದ್ಯರು ತಮ್ಮ ರಾಜೀನಾಮೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ನಾವು ನಿನ್ನೆ ಸಂಜೆ ಅವರೊಂದಿಗೆ ಮಾತನಾಡಿದ್ದೆವು ಮತ್ತು ಅವರು ರಾತ್ರಿಯೇ ತಮ್ಮ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಂಡರು. ಅವರು ಇಂದು ನನ್ನೊಂದಿಗೆ ಭೇಟಿಯಾದರು. ನಾನು ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಪರಿಹಾರಗಳನ್ನು ನೀಡಿದ್ದೇನೆ. ನಾವು ಸೌಹಾರ್ದಯುತವಾಗಿ ಮಾತನಾಡಿದ್ದು ಇದು ಆಂತರಿಕ ವಿಷಯವಾಗಿದೆ “ಎಂದು ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ತಂಡಗಳು ಇಡೀ ದಿನ ಮಾಡುತ್ತಿರುವುದು ಸಮಸ್ಯೆಯಾಗಿದೆ, ಆದರೆ ನಾವು ‘ಕೆಲಸ ಮಾಡುತ್ತಿಲ್ಲ’ ಎಂದು ಬಿಂಬಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು , ಇತರ ಅಧಿಕಾರಿಗಳು, ಎಸ್‌ಡಿಎಂ ಮತ್ತು ತಹಶೀಲ್ದಾರ್ ಕೂಡ ನಮ್ಮನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಅವಲೋಕನ ಸಭೆಗಳನ್ನು ನಡೆಸುತ್ತಿದ್ದಾರೆ. ನಮ್ಮ ತಂಡಗಳು ಮಧ್ಯಾಹ್ನ ಹೊರಟು ಕೊವಿಡ್ ಪಾಸಿಟಿವ್ ರೋಗಿಗಳನ್ನು ಪತ್ತೆಹಚ್ಚಿ ಮತ್ತು ಪ್ರತ್ಯೇಕಿಸಿ, ಸ್ಯಾಂಪಲಿಂಗ್ ಮಾಡಿ, ಔಷಧಿಗಳನ್ನು ವಿತರಿಸಿದ ನಂತರ ಎಸ್‌ಡಿಎಂನಿಂದ ಅವಲೋಕನ ಸಭೆಗಳಿಗೆ ಬರಲು  ಕರೆಯುತ್ತಾರೆ. ಸುಮಾರು30 ಕಿ.ಮೀ ಪ್ರಯಾಣಿಸಲು ನಾವು ಬದ್ಧರಾಗಿದ್ದೇವೆ. ನಾವು ಕೆಲಸ ಮಾಡಿದ್ದೇವೆ ಎಂದು ನಾವು ಸಾಬೀತುಪಡಿಸಬೇಕು. ನಾವು ಕೆಲಸ ಮಾಡದ ಕಾರಣ ಕೋವಿಡ್ ಸೋಂಕು ಹರಡುತ್ತಿದೆ ಎಂದು ದೂರಲಾಗಿದ ಎಂದು ವೈದ್ಯರಲ್ಲಿ ಒಬ್ಬರಾದ ಡಾ.ಶರದ್ ವೈಶ್ಯ ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Unnao: ಉತ್ತರ ಪ್ರದೇಶದ ಉನ್ನಾವ್​ನ ಗಂಗಾ ನದಿ ತೀರದಲ್ಲಿ ಹೂತಿಟ್ಟ ಮೃತದೇಹಗಳು ಪತ್ತೆ

Published On - 6:20 pm, Thu, 13 May 21

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ