AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಕೋವಿಡ್-19 ಲಸಿಕೆ ಉಚಿತ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ

ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಹೇಳಿರುವ ಪಿಣರಾಯಿ ವಿಜಯನ್, ಇದು ಸರ್ಕಾರದ ನಿಲುವು ಎಂದು ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್-19 ಲಸಿಕೆ ಉಚಿತ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ
ಪಿಣರಾಯಿ ವಿಜಯನ್
ರಶ್ಮಿ ಕಲ್ಲಕಟ್ಟ
| Edited By: |

Updated on: Dec 13, 2020 | 12:47 PM

Share

ತಿರುವನಂತಪುರಂ: ಕೇರಳದಲ್ಲಿ ಎಲ್ಲರಿಗೂ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಣ್ಣೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪಿಣರಾಯಿ ವಿಜಯನ್ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು. ಇದು ಸರ್ಕಾರದ ನಿಲುವು ಎಂದು ಹೇಳಿದ್ದಾರೆ. ತಮಿಳುನಾಡು ಮತ್ತು ಮಧ್ಯಪ್ರದೇಶ ಈಗಾಗಲೇ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ಘೋಷಿಸಿವೆ.

ಭಾರತ್ ಬಯೋಟೆಕ್, ಸೆರಂ ಇನ್ಸಿಟ್ಯೂಟ್ ಆಫ್ ಇಂಡಿಯಾ ಮತ್ತು ಫೈಜರ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಗಳು ಭಾರತದ ಔಷಧ ನಿಯಂತ್ರಣ ಸಂಸ್ಥೆಯ ಪರಿಗಣನೆಯಲ್ಲಿದೆ. ದೇಶದಲ್ಲಿ 5 ಲಸಿಕೆಗಳು ಕ್ಲಿನಿಕಲ್ ಟ್ರಯಲ್​ನ ವಿವಿಧ ಹಂತದಲ್ಲಿವೆ.

ಆದಾಗ್ಯೂ, ಕೇಂದ್ರ ಸರ್ಕಾರ ಕೇರಳಕ್ಕೆ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಿದೆ ಎಂಬುದು ತಿಳಿದಿಲ್ಲ ಎಂದು ಪಿಣರಾಯಿ ಹೇಳಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿರುವುದು ಸಮಾಧಾನದ ಸಂಗತಿ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಎರಡನೇ ಹಂತದ ಮತದಾನ ಮುಗಿಸಿದೆ. ಈ ವೇಳೆ ಕೋವಿಡ್ ಪ್ರಕರಣಗಳ ಎಷ್ಟು ಜಾಸ್ತಿಯಾಗಿವೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಶನಿವಾರ 5,949 ಹೊಸ ಪ್ರಕರಣಗಳು ವರದಿಯಾಗಿದ್ದು 32 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 6.64 ಲಕ್ಷ ಮಂದಿಗೆ ಸೋಂಕು ತಗಲಿದ್ದು ಸಾವಿನ ಸಂಖ್ಯೆ 2,594 ತಲುಪಿದೆ.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ