AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ವಿದ್ಯುತ್, ಶಿಕ್ಷಣ; ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸುನೀತಾ ಕೇಜ್ರಿವಾಲ್ ಚಾಲನೆ

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ದೆಹಲಿ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿದ್ದರು. ಇದೀಗ ಹರಿಯಾಣದ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಉಚಿತ ವಿದ್ಯುತ್, ಶಿಕ್ಷಣ; ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸುನೀತಾ ಕೇಜ್ರಿವಾಲ್ ಚಾಲನೆ
ಸುನೀತಾ ಕೇಜ್ರಿವಾಲ್
ಸುಷ್ಮಾ ಚಕ್ರೆ
|

Updated on: Jul 20, 2024 | 6:44 PM

Share

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಹರ್ಯಾಣದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಒಳಪಡಲಿರುವ ರಾಜ್ಯಕ್ಕೆ ದೆಹಲಿ ಮುಖ್ಯಮಂತ್ರಿಯ ಭರವಸೆಯನ್ನು ಘೋಷಿಸಿದ್ದಾರೆ. ಪತಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವುದರಿಂದ ಅವರ ಪತ್ನಿ ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಹರಿಯಾಣದ ಪಂಚಕುಲದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್ “ಕೇಜ್ರಿವಾಲ್ ಕಿ ಗ್ಯಾರಂಟಿ” ಎಂದು ಘೋಷಿಸಿದರು. ಆಕೆಯೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಇದ್ದರು. ಎಎಪಿ ಉಚಿತ ಮತ್ತು 24 ಗಂಟೆಗಳ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಉಚಿತ ಶಿಕ್ಷಣ, ಎಲ್ಲಾ ತಾಯಂದಿರು ಮತ್ತು ಸಹೋದರಿಯರಿಗೆ ತಿಂಗಳಿಗೆ 1,000 ರೂ., ಪ್ರತಿ ಯುವಕನಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ.

ಇದನ್ನೂ ಓದಿ: ‘ಸಿಎಂಗೆ ಮನೆಯಲ್ಲಿ ಮಾಡಿದ ಅಡುಗೆಯನ್ನೇ ಬಡಿಸಲಾಗಿತ್ತು; ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಎಲ್‌ಜಿ ಪತ್ರ

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಸಿಎಂ ಪ್ರಸ್ತುತ ಅಬಕಾರಿ ನೀತಿ ಸಂಬಂಧಿತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗಾಗಲೇ ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಎಎಪಿ ಹೇಳಿದೆ. ಈ ವರ್ಷದ ಕೊನೆಯಲ್ಲಿ ಹರಿಯಾಣ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪ್ರಬಲವಾಗಿ ಹೋರಾಡಲಿದೆ ಎಂದು ಆಪ್ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ