AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ತಮಿಳುನಾಡು ವಿದ್ಯಾರ್ಥಿಗಳಿಗೆ 2 ಜಿಬಿ ಡಾಟಾ ಉಚಿತ

ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ಉಚಿತವಾಗಿ 2 ಜಿಬಿ ಡಾಟಾ ನೀಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ತಮಿಳುನಾಡು ವಿದ್ಯಾರ್ಥಿಗಳಿಗೆ 2 ಜಿಬಿ ಡಾಟಾ ಉಚಿತ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on: Jan 10, 2021 | 11:22 AM

Share

ತಮಿಳುನಾಡು: ಏಪ್ರಿಲ್‌ನಲ್ಲಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ಉಚಿತವಾಗಿ 2 ಜಿಬಿ ಡಾಟಾ ನೀಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. 4 ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್ ನೀಡಲಾಗುತ್ತದೆ ಎಂದು ಘೋಷಿಸಿದೆ.

ಮಹಾಮಾರಿ ಕೊರೊನಾದಿಂದಾಗಿ ರಾಜ್ಯಾದ್ಯಂತ ಲಾಕ್​ಡೌನ್ ವಿಧಿಸಲಾಗಿತ್ತು. ಈ ವೇಳೆ ಜನ ಕೆಲಸ ಕಳೆದುಕೊಂಡು ಬಹಳಷ್ಟು ಸಂಕಷ್ಟಗಳನ್ನು ಎದುರಿಸಿದ್ದರು. ಸದ್ಯ ನಿಧಾನವಾಗಿ ಆ  ಸಂಕಷ್ಟಗಳಿಂದ ಹೊರಬರುತ್ತಿದ್ದಾರೆ. ಆದರೂ ಜನರಲ್ಲಿ ಸಮಸ್ಯೆಗಳು ಕಡಿಮೆಯಾಗಿಲ್ಲ. ಇದರ ನಡುವೆ ತಮ್ಮ ಮಕ್ಕಳ ಭವಿಷ್ಯ ಪೋಷಕರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಇದರ ಜೊತೆಗೆ ಏಪ್ರಿಲ್‌ನಲ್ಲಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಆನ್‌ಲೈನ್ ಅಧ್ಯಯನವನ್ನು ಮುಂದುವರಿಸಲು ಅನುಕೂಲವಾಗುವಂತೆ ತಮಿಳುನಾಡು ಸರ್ಕಾರ  ಉಚಿತ ಇಂಟರ್‌ನೆಟ್ ನೀಡಲು ಮುಂದಾಗಿದೆ.

ಈ ಯೋಜನೆಯ ಪ್ರಕಾರ, ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಚಿತವಾಗಿ 2 ಜಿಬಿ ಡಾಟಾ ನೀಡಲಾಗುವುದು. ಇದರಿಂದ ಅವರು ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಮತ್ತು ಆನ್‌ಲೈನ್ ಅಧ್ಯಯನಕ್ಕೆ ಅಗತ್ಯವಾಗಿರುವಂಥದ್ದನ್ನು  ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. 4 ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಈ ಸೇವೆ ಲಭಿಸಲಿದೆ.

ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್​ಲೈನ್​ ಕ್ಲಾಸ್​ ವೇಳೆ ಬ್ಲೂ ಫಿಲಂ​ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?