AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಗೆದ್ದರೆ ಅಯೋಧ್ಯೆಗೆ ಉಚಿತ ಯಾತ್ರೆ ನಡೆಸುತ್ತೇವೆ: ಅರವಿಂದ್ ಕೇಜ್ರಿವಾಲ್​ ಘೋಷಣೆ

Goa Assembly Election 2022: ಗೋವಾ ಚುನಾವಣೆ ಮೇಲೆ ಬರೀ ಆಪ್​ ಅಷ್ಟೇ ಅಲ್ಲ ಟಿಎಂಸಿ ಕೂಡ ಕಣ್ಣಿಟ್ಟಿದೆ. ಆದರೆ ಮಮತಾ ಬ್ಯಾನರ್ಜಿ ಧ್ಯೇಯ ಇಲ್ಲಿ ಬಿಜೆಪಿಯನ್ನು ಸೋಲಿಸುವುದು ಆಗಿದೆಯೇ ಹೊರತು ಅಧಿಕಾರ ಹಿಡಿಯುವುದಲ್ಲ.

ಗೋವಾದಲ್ಲಿ ಗೆದ್ದರೆ ಅಯೋಧ್ಯೆಗೆ ಉಚಿತ ಯಾತ್ರೆ ನಡೆಸುತ್ತೇವೆ: ಅರವಿಂದ್ ಕೇಜ್ರಿವಾಲ್​ ಘೋಷಣೆ
ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on: Nov 02, 2021 | 2:32 PM

Share

ಪಣಜಿ: ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ನಿಮಿತ್ತ ಅಲ್ಲಿಗೆ ಭೇಟಿ ಕೊಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ (​Arvind Kejriwal) ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದೆ. ಇವೆರಡರಲ್ಲಿ ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು.

ಗೋವಾದಲ್ಲಿ ರ್ಯಾಲಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್​, ತಾವು ಗೋವಾ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚನೆ ಮಾಡಿದರೆ ಹಿಂದುಗಳಿಗೆ ಅಯೋಧ್ಯೆಗೆ, ಕ್ರಿಶ್ಚಿಯನ್ನರಿಗೆ ವೆಲಕಣ್ಣಿ ಚರ್ಚ್​ಗೆ ಮತ್ತು ಮುಸ್ಲಿಮರಿಗೆ ಅಜ್ಮೇರ್​ ಶರೀಫ್​ಗೆ ಉಚಿತ ಯಾತ್ರೆ ನಡೆಸುತ್ತೇವೆ. ಅಲ್ಲದೆ ಸಾಯಿಬಾಬಾ ಅನುಯಾಯಿಗಳಿಗೆ ಶಿರಡಿ ದೇವಸ್ಥಾನಕ್ಕೆ ಪ್ರವಾಸವನ್ನೂ ಉಚಿತವಾಗಿ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ಹಿಂದೆ ಗೋವಾಕ್ಕೆ ಆಗಮಿಸಿದ್ದ ಅರವಿಂದ್​ ಕೇಜ್ರಿವಾಲ್​ 2022ರ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಹೇಳಿದ್ದರು. ಹಾಗೇ, ತಾವು ಸರ್ಕಾರ ರಚನೆ ಮಾಡಿದರೆ ಇಲ್ಲಿನ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು..ಪ್ರತಿಯೊಬ್ಬ ಯುವಕನಿಗೂ ಉದ್ಯೋಗ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ಕಳೆದ ಕೆಲವು ತಿಂಗಳುಗಳಿಂದ ಗೋವಾದಲ್ಲಿ ಆಪ್​ ಪಕ್ಷವನ್ನು ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚುತ್ತಿದೆ. ಅಲ್ಲಿನ ಪ್ರಮುಖ ಮಾಸ್​ ಲೀಡರ್​ಗಳಾದ ದಯಾನಂದ್​ ನರ್ವೇಕರ್​, ಬಾಬು ನಾನೋಸ್ಕರ್​, ಸತ್ಯವಿಜಯ್​ ನಾಯ್ಕ್​, ರಾಜದೀಪ್​ ನಾಯ್ಕ್​, ಗಣಪತ್​ ಗಾಂವಕರ್​, ಡೊಮಿನಿಕ್​ ಗಾಂವ್ಕರ್​, ರಿತೇಶ್​ ಛೋಡಂಕರ್​ ಮತ್ತು ಅಮಿತ್​ ಪಾಲೇಕರ್​ ಎಂಬುವರು ಆಪ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  ಗೋವಾ ಚುನಾವಣೆ ಮೇಲೆ ಬರೀ ಆಪ್​ ಅಷ್ಟೇ ಅಲ್ಲ ಟಿಎಂಸಿ ಕೂಡ ಕಣ್ಣಿಟ್ಟಿದೆ. ಆದರೆ ಮಮತಾ ಬ್ಯಾನರ್ಜಿ ಧ್ಯೇಯ ಇಲ್ಲಿ ಬಿಜೆಪಿಯನ್ನು ಸೋಲಿಸುವುದು ಆಗಿದೆಯೇ ಹೊರತು ಅಧಿಕಾರ ಹಿಡಿಯುವುದಲ್ಲ. 2022ರಲ್ಲಿ ಗೋವಾದಲ್ಲಷ್ಟೇ ಅಲ್ಲದೆ, ಪಂಜಾಬ್​, ಉತ್ತರ ಪ್ರದೇಶ, ಉತ್ತರಾಖಂಡ್​ ಮತ್ತು ಮಣಿಪುರಗಳಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

Chest Pain: ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿ ಎದೆ ನೋವಿನಿಂದ ಕುಸಿದು ಬಿದ್ದು ಸಾವು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ