AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಗೆದ್ದರೆ ಅಯೋಧ್ಯೆಗೆ ಉಚಿತ ಯಾತ್ರೆ ನಡೆಸುತ್ತೇವೆ: ಅರವಿಂದ್ ಕೇಜ್ರಿವಾಲ್​ ಘೋಷಣೆ

Goa Assembly Election 2022: ಗೋವಾ ಚುನಾವಣೆ ಮೇಲೆ ಬರೀ ಆಪ್​ ಅಷ್ಟೇ ಅಲ್ಲ ಟಿಎಂಸಿ ಕೂಡ ಕಣ್ಣಿಟ್ಟಿದೆ. ಆದರೆ ಮಮತಾ ಬ್ಯಾನರ್ಜಿ ಧ್ಯೇಯ ಇಲ್ಲಿ ಬಿಜೆಪಿಯನ್ನು ಸೋಲಿಸುವುದು ಆಗಿದೆಯೇ ಹೊರತು ಅಧಿಕಾರ ಹಿಡಿಯುವುದಲ್ಲ.

ಗೋವಾದಲ್ಲಿ ಗೆದ್ದರೆ ಅಯೋಧ್ಯೆಗೆ ಉಚಿತ ಯಾತ್ರೆ ನಡೆಸುತ್ತೇವೆ: ಅರವಿಂದ್ ಕೇಜ್ರಿವಾಲ್​ ಘೋಷಣೆ
ಅರವಿಂದ್ ಕೇಜ್ರಿವಾಲ್​
TV9 Web
| Updated By: Lakshmi Hegde|

Updated on: Nov 02, 2021 | 2:32 PM

Share

ಪಣಜಿ: ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ನಿಮಿತ್ತ ಅಲ್ಲಿಗೆ ಭೇಟಿ ಕೊಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ (​Arvind Kejriwal) ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದೆ. ಇವೆರಡರಲ್ಲಿ ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು.

ಗೋವಾದಲ್ಲಿ ರ್ಯಾಲಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್​, ತಾವು ಗೋವಾ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚನೆ ಮಾಡಿದರೆ ಹಿಂದುಗಳಿಗೆ ಅಯೋಧ್ಯೆಗೆ, ಕ್ರಿಶ್ಚಿಯನ್ನರಿಗೆ ವೆಲಕಣ್ಣಿ ಚರ್ಚ್​ಗೆ ಮತ್ತು ಮುಸ್ಲಿಮರಿಗೆ ಅಜ್ಮೇರ್​ ಶರೀಫ್​ಗೆ ಉಚಿತ ಯಾತ್ರೆ ನಡೆಸುತ್ತೇವೆ. ಅಲ್ಲದೆ ಸಾಯಿಬಾಬಾ ಅನುಯಾಯಿಗಳಿಗೆ ಶಿರಡಿ ದೇವಸ್ಥಾನಕ್ಕೆ ಪ್ರವಾಸವನ್ನೂ ಉಚಿತವಾಗಿ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ಹಿಂದೆ ಗೋವಾಕ್ಕೆ ಆಗಮಿಸಿದ್ದ ಅರವಿಂದ್​ ಕೇಜ್ರಿವಾಲ್​ 2022ರ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಹೇಳಿದ್ದರು. ಹಾಗೇ, ತಾವು ಸರ್ಕಾರ ರಚನೆ ಮಾಡಿದರೆ ಇಲ್ಲಿನ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು..ಪ್ರತಿಯೊಬ್ಬ ಯುವಕನಿಗೂ ಉದ್ಯೋಗ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ಕಳೆದ ಕೆಲವು ತಿಂಗಳುಗಳಿಂದ ಗೋವಾದಲ್ಲಿ ಆಪ್​ ಪಕ್ಷವನ್ನು ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚುತ್ತಿದೆ. ಅಲ್ಲಿನ ಪ್ರಮುಖ ಮಾಸ್​ ಲೀಡರ್​ಗಳಾದ ದಯಾನಂದ್​ ನರ್ವೇಕರ್​, ಬಾಬು ನಾನೋಸ್ಕರ್​, ಸತ್ಯವಿಜಯ್​ ನಾಯ್ಕ್​, ರಾಜದೀಪ್​ ನಾಯ್ಕ್​, ಗಣಪತ್​ ಗಾಂವಕರ್​, ಡೊಮಿನಿಕ್​ ಗಾಂವ್ಕರ್​, ರಿತೇಶ್​ ಛೋಡಂಕರ್​ ಮತ್ತು ಅಮಿತ್​ ಪಾಲೇಕರ್​ ಎಂಬುವರು ಆಪ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  ಗೋವಾ ಚುನಾವಣೆ ಮೇಲೆ ಬರೀ ಆಪ್​ ಅಷ್ಟೇ ಅಲ್ಲ ಟಿಎಂಸಿ ಕೂಡ ಕಣ್ಣಿಟ್ಟಿದೆ. ಆದರೆ ಮಮತಾ ಬ್ಯಾನರ್ಜಿ ಧ್ಯೇಯ ಇಲ್ಲಿ ಬಿಜೆಪಿಯನ್ನು ಸೋಲಿಸುವುದು ಆಗಿದೆಯೇ ಹೊರತು ಅಧಿಕಾರ ಹಿಡಿಯುವುದಲ್ಲ. 2022ರಲ್ಲಿ ಗೋವಾದಲ್ಲಷ್ಟೇ ಅಲ್ಲದೆ, ಪಂಜಾಬ್​, ಉತ್ತರ ಪ್ರದೇಶ, ಉತ್ತರಾಖಂಡ್​ ಮತ್ತು ಮಣಿಪುರಗಳಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

Chest Pain: ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿ ಎದೆ ನೋವಿನಿಂದ ಕುಸಿದು ಬಿದ್ದು ಸಾವು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ