AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಗೆದ್ದರೆ ಅಯೋಧ್ಯೆಗೆ ಉಚಿತ ಯಾತ್ರೆ ನಡೆಸುತ್ತೇವೆ: ಅರವಿಂದ್ ಕೇಜ್ರಿವಾಲ್​ ಘೋಷಣೆ

Goa Assembly Election 2022: ಗೋವಾ ಚುನಾವಣೆ ಮೇಲೆ ಬರೀ ಆಪ್​ ಅಷ್ಟೇ ಅಲ್ಲ ಟಿಎಂಸಿ ಕೂಡ ಕಣ್ಣಿಟ್ಟಿದೆ. ಆದರೆ ಮಮತಾ ಬ್ಯಾನರ್ಜಿ ಧ್ಯೇಯ ಇಲ್ಲಿ ಬಿಜೆಪಿಯನ್ನು ಸೋಲಿಸುವುದು ಆಗಿದೆಯೇ ಹೊರತು ಅಧಿಕಾರ ಹಿಡಿಯುವುದಲ್ಲ.

ಗೋವಾದಲ್ಲಿ ಗೆದ್ದರೆ ಅಯೋಧ್ಯೆಗೆ ಉಚಿತ ಯಾತ್ರೆ ನಡೆಸುತ್ತೇವೆ: ಅರವಿಂದ್ ಕೇಜ್ರಿವಾಲ್​ ಘೋಷಣೆ
ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on: Nov 02, 2021 | 2:32 PM

Share

ಪಣಜಿ: ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ನಿಮಿತ್ತ ಅಲ್ಲಿಗೆ ಭೇಟಿ ಕೊಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ (​Arvind Kejriwal) ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದೆ. ಇವೆರಡರಲ್ಲಿ ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು.

ಗೋವಾದಲ್ಲಿ ರ್ಯಾಲಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್​, ತಾವು ಗೋವಾ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚನೆ ಮಾಡಿದರೆ ಹಿಂದುಗಳಿಗೆ ಅಯೋಧ್ಯೆಗೆ, ಕ್ರಿಶ್ಚಿಯನ್ನರಿಗೆ ವೆಲಕಣ್ಣಿ ಚರ್ಚ್​ಗೆ ಮತ್ತು ಮುಸ್ಲಿಮರಿಗೆ ಅಜ್ಮೇರ್​ ಶರೀಫ್​ಗೆ ಉಚಿತ ಯಾತ್ರೆ ನಡೆಸುತ್ತೇವೆ. ಅಲ್ಲದೆ ಸಾಯಿಬಾಬಾ ಅನುಯಾಯಿಗಳಿಗೆ ಶಿರಡಿ ದೇವಸ್ಥಾನಕ್ಕೆ ಪ್ರವಾಸವನ್ನೂ ಉಚಿತವಾಗಿ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ಹಿಂದೆ ಗೋವಾಕ್ಕೆ ಆಗಮಿಸಿದ್ದ ಅರವಿಂದ್​ ಕೇಜ್ರಿವಾಲ್​ 2022ರ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಹೇಳಿದ್ದರು. ಹಾಗೇ, ತಾವು ಸರ್ಕಾರ ರಚನೆ ಮಾಡಿದರೆ ಇಲ್ಲಿನ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು..ಪ್ರತಿಯೊಬ್ಬ ಯುವಕನಿಗೂ ಉದ್ಯೋಗ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ಕಳೆದ ಕೆಲವು ತಿಂಗಳುಗಳಿಂದ ಗೋವಾದಲ್ಲಿ ಆಪ್​ ಪಕ್ಷವನ್ನು ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚುತ್ತಿದೆ. ಅಲ್ಲಿನ ಪ್ರಮುಖ ಮಾಸ್​ ಲೀಡರ್​ಗಳಾದ ದಯಾನಂದ್​ ನರ್ವೇಕರ್​, ಬಾಬು ನಾನೋಸ್ಕರ್​, ಸತ್ಯವಿಜಯ್​ ನಾಯ್ಕ್​, ರಾಜದೀಪ್​ ನಾಯ್ಕ್​, ಗಣಪತ್​ ಗಾಂವಕರ್​, ಡೊಮಿನಿಕ್​ ಗಾಂವ್ಕರ್​, ರಿತೇಶ್​ ಛೋಡಂಕರ್​ ಮತ್ತು ಅಮಿತ್​ ಪಾಲೇಕರ್​ ಎಂಬುವರು ಆಪ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  ಗೋವಾ ಚುನಾವಣೆ ಮೇಲೆ ಬರೀ ಆಪ್​ ಅಷ್ಟೇ ಅಲ್ಲ ಟಿಎಂಸಿ ಕೂಡ ಕಣ್ಣಿಟ್ಟಿದೆ. ಆದರೆ ಮಮತಾ ಬ್ಯಾನರ್ಜಿ ಧ್ಯೇಯ ಇಲ್ಲಿ ಬಿಜೆಪಿಯನ್ನು ಸೋಲಿಸುವುದು ಆಗಿದೆಯೇ ಹೊರತು ಅಧಿಕಾರ ಹಿಡಿಯುವುದಲ್ಲ. 2022ರಲ್ಲಿ ಗೋವಾದಲ್ಲಷ್ಟೇ ಅಲ್ಲದೆ, ಪಂಜಾಬ್​, ಉತ್ತರ ಪ್ರದೇಶ, ಉತ್ತರಾಖಂಡ್​ ಮತ್ತು ಮಣಿಪುರಗಳಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

Chest Pain: ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿ ಎದೆ ನೋವಿನಿಂದ ಕುಸಿದು ಬಿದ್ದು ಸಾವು

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!