AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ

ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಪಡಿತರ ಚೀಟಿ ಹೊಂದಿರುವವರಿಗೆ 5 ಕೆಜಿಯ ಉಚಿತ ಪಡಿತರ ಹಂಚಿಕೆ ಮುಂದಿನ 5 ವರ್ಷಗಳವರೆಗೆ ಮುಂದುವರಿಯುತ್ತದೆ. ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ 13.5 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿದೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಪ್ರಲ್ಹಾದ್ ಜೋಶಿ
ಸುಷ್ಮಾ ಚಕ್ರೆ
|

Updated on: Jul 11, 2024 | 6:47 PM

Share

ನೊಯ್ಡಾ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ 2013 (NFSA) ಪ್ರಕಾರ, ಪ್ರತಿ ಮನೆಗೆ 5 ಕೆಜಿ ಧಾನ್ಯವನ್ನು ಉಚಿತವಾಗಿ ನೀಡಲಾಗುತ್ತದೆ. ಇದರಿಂದ ದೇಶಾದ್ಯಂತ 80 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ಎಂದು ಅವರು ತಿಳಿಸಿದ್ದಾರೆ.

“ನಾವು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆಜಿಗಳಷ್ಟು ಧಾನ್ಯವನ್ನು ನೀಡುತ್ತೇವೆ. ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಹಿಂದಿನ ಸರ್ಕಾರವು ‘ಗರೀಬಿ ಹಟಾವೋ’ ಮತ್ತು ‘ರೋಟಿ ಕಪ್ಡಾ ಮಕಾನ್’ ಎಂಬ ಘೋಷಣೆಗಳನ್ನು ಹೊಂದಿತ್ತು. ಆದರೆ ಈ ದೇಶದಲ್ಲಿ ಈಗಲೂ ಪ್ರತಿಯೊಬ್ಬ ವ್ಯಕ್ತಿಯು 5 ಕೆಜಿಗಳಷ್ಟು ಧಾನ್ಯವನ್ನು ಪಡೆಯುತ್ತಿದ್ದಾನೆ. ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ 13.5 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ಕಿಡಿ

ಏಪ್ರಿಲ್ 2020ರಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಕೇಂದ್ರ ಸರ್ಕಾರವು ಪ್ರತಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಆಹಾರ ಧಾನ್ಯಗಳನ್ನು ಸಬ್ಸಿಡಿ ಬೆಲೆಯಲ್ಲಿ ಒದಗಿಸಲು PMGKAY ಅನ್ನು ಪರಿಚಯಿಸಿತು. ಪಡಿತರ ಚೀಟಿದಾರರಿಗೆ 5 ಕೆಜಿ ಆಹಾರ ಧಾನ್ಯ ನೀಡಲು ಮೋದಿ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 2020ರಿಂದ ಪಡಿತರ ಚೀಟಿದಾರರು ತಲಾ 10 ಕೆಜಿ ಪಡಿತರವನ್ನು ಪಡೆಯುತ್ತಿದ್ದಾರೆ. NFSA ಅಡಿಯಲ್ಲಿ ಸಬ್ಸಿಡಿ ದರದಲ್ಲಿ 5 ಕೆಜಿ ಮತ್ತು PMGKAY ಅಡಿಯಲ್ಲಿ 5 ಕೆಜಿ ಉಚಿತವಾಗಿ ಪಡಿತರ ನೀಡಲಾಗುತ್ತಿದೆ. ಅದರ ನಂತರ, ಜನವರಿ 2022ರಿಂದ ಕೇಂದ್ರ ಸರ್ಕಾರವು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಎಂದು ಬದಲಾಯಿಸಿತು. ಈ ಯೋಜನೆಯಡಿ ಪ್ರತಿ ಪಡಿತರ ಚೀಟಿದಾರರಿಗೆ 5 ಕೆಜಿ ಪಡಿತರವನ್ನು ಉಚಿತವಾಗಿ ನೀಡಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ