AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ

ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಪಡಿತರ ಚೀಟಿ ಹೊಂದಿರುವವರಿಗೆ 5 ಕೆಜಿಯ ಉಚಿತ ಪಡಿತರ ಹಂಚಿಕೆ ಮುಂದಿನ 5 ವರ್ಷಗಳವರೆಗೆ ಮುಂದುವರಿಯುತ್ತದೆ. ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ 13.5 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿದೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಪ್ರಲ್ಹಾದ್ ಜೋಶಿ
ಸುಷ್ಮಾ ಚಕ್ರೆ
|

Updated on: Jul 11, 2024 | 6:47 PM

Share

ನೊಯ್ಡಾ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ 2013 (NFSA) ಪ್ರಕಾರ, ಪ್ರತಿ ಮನೆಗೆ 5 ಕೆಜಿ ಧಾನ್ಯವನ್ನು ಉಚಿತವಾಗಿ ನೀಡಲಾಗುತ್ತದೆ. ಇದರಿಂದ ದೇಶಾದ್ಯಂತ 80 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ಎಂದು ಅವರು ತಿಳಿಸಿದ್ದಾರೆ.

“ನಾವು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆಜಿಗಳಷ್ಟು ಧಾನ್ಯವನ್ನು ನೀಡುತ್ತೇವೆ. ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಹಿಂದಿನ ಸರ್ಕಾರವು ‘ಗರೀಬಿ ಹಟಾವೋ’ ಮತ್ತು ‘ರೋಟಿ ಕಪ್ಡಾ ಮಕಾನ್’ ಎಂಬ ಘೋಷಣೆಗಳನ್ನು ಹೊಂದಿತ್ತು. ಆದರೆ ಈ ದೇಶದಲ್ಲಿ ಈಗಲೂ ಪ್ರತಿಯೊಬ್ಬ ವ್ಯಕ್ತಿಯು 5 ಕೆಜಿಗಳಷ್ಟು ಧಾನ್ಯವನ್ನು ಪಡೆಯುತ್ತಿದ್ದಾನೆ. ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ 13.5 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ಕಿಡಿ

ಏಪ್ರಿಲ್ 2020ರಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಕೇಂದ್ರ ಸರ್ಕಾರವು ಪ್ರತಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಆಹಾರ ಧಾನ್ಯಗಳನ್ನು ಸಬ್ಸಿಡಿ ಬೆಲೆಯಲ್ಲಿ ಒದಗಿಸಲು PMGKAY ಅನ್ನು ಪರಿಚಯಿಸಿತು. ಪಡಿತರ ಚೀಟಿದಾರರಿಗೆ 5 ಕೆಜಿ ಆಹಾರ ಧಾನ್ಯ ನೀಡಲು ಮೋದಿ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 2020ರಿಂದ ಪಡಿತರ ಚೀಟಿದಾರರು ತಲಾ 10 ಕೆಜಿ ಪಡಿತರವನ್ನು ಪಡೆಯುತ್ತಿದ್ದಾರೆ. NFSA ಅಡಿಯಲ್ಲಿ ಸಬ್ಸಿಡಿ ದರದಲ್ಲಿ 5 ಕೆಜಿ ಮತ್ತು PMGKAY ಅಡಿಯಲ್ಲಿ 5 ಕೆಜಿ ಉಚಿತವಾಗಿ ಪಡಿತರ ನೀಡಲಾಗುತ್ತಿದೆ. ಅದರ ನಂತರ, ಜನವರಿ 2022ರಿಂದ ಕೇಂದ್ರ ಸರ್ಕಾರವು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಎಂದು ಬದಲಾಯಿಸಿತು. ಈ ಯೋಜನೆಯಡಿ ಪ್ರತಿ ಪಡಿತರ ಚೀಟಿದಾರರಿಗೆ 5 ಕೆಜಿ ಪಡಿತರವನ್ನು ಉಚಿತವಾಗಿ ನೀಡಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​