Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ

ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಪಡಿತರ ಚೀಟಿ ಹೊಂದಿರುವವರಿಗೆ 5 ಕೆಜಿಯ ಉಚಿತ ಪಡಿತರ ಹಂಚಿಕೆ ಮುಂದಿನ 5 ವರ್ಷಗಳವರೆಗೆ ಮುಂದುವರಿಯುತ್ತದೆ. ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ 13.5 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿದೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಪ್ರಲ್ಹಾದ್ ಜೋಶಿ

Updated on: Jul 11, 2024 | 6:47 PM

ನೊಯ್ಡಾ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ 2013 (NFSA) ಪ್ರಕಾರ, ಪ್ರತಿ ಮನೆಗೆ 5 ಕೆಜಿ ಧಾನ್ಯವನ್ನು ಉಚಿತವಾಗಿ ನೀಡಲಾಗುತ್ತದೆ. ಇದರಿಂದ ದೇಶಾದ್ಯಂತ 80 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ಎಂದು ಅವರು ತಿಳಿಸಿದ್ದಾರೆ.

“ನಾವು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆಜಿಗಳಷ್ಟು ಧಾನ್ಯವನ್ನು ನೀಡುತ್ತೇವೆ. ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಹಿಂದಿನ ಸರ್ಕಾರವು ‘ಗರೀಬಿ ಹಟಾವೋ’ ಮತ್ತು ‘ರೋಟಿ ಕಪ್ಡಾ ಮಕಾನ್’ ಎಂಬ ಘೋಷಣೆಗಳನ್ನು ಹೊಂದಿತ್ತು. ಆದರೆ ಈ ದೇಶದಲ್ಲಿ ಈಗಲೂ ಪ್ರತಿಯೊಬ್ಬ ವ್ಯಕ್ತಿಯು 5 ಕೆಜಿಗಳಷ್ಟು ಧಾನ್ಯವನ್ನು ಪಡೆಯುತ್ತಿದ್ದಾನೆ. ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ 13.5 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ಕಿಡಿ

ಏಪ್ರಿಲ್ 2020ರಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಕೇಂದ್ರ ಸರ್ಕಾರವು ಪ್ರತಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಆಹಾರ ಧಾನ್ಯಗಳನ್ನು ಸಬ್ಸಿಡಿ ಬೆಲೆಯಲ್ಲಿ ಒದಗಿಸಲು PMGKAY ಅನ್ನು ಪರಿಚಯಿಸಿತು. ಪಡಿತರ ಚೀಟಿದಾರರಿಗೆ 5 ಕೆಜಿ ಆಹಾರ ಧಾನ್ಯ ನೀಡಲು ಮೋದಿ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 2020ರಿಂದ ಪಡಿತರ ಚೀಟಿದಾರರು ತಲಾ 10 ಕೆಜಿ ಪಡಿತರವನ್ನು ಪಡೆಯುತ್ತಿದ್ದಾರೆ. NFSA ಅಡಿಯಲ್ಲಿ ಸಬ್ಸಿಡಿ ದರದಲ್ಲಿ 5 ಕೆಜಿ ಮತ್ತು PMGKAY ಅಡಿಯಲ್ಲಿ 5 ಕೆಜಿ ಉಚಿತವಾಗಿ ಪಡಿತರ ನೀಡಲಾಗುತ್ತಿದೆ. ಅದರ ನಂತರ, ಜನವರಿ 2022ರಿಂದ ಕೇಂದ್ರ ಸರ್ಕಾರವು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಎಂದು ಬದಲಾಯಿಸಿತು. ಈ ಯೋಜನೆಯಡಿ ಪ್ರತಿ ಪಡಿತರ ಚೀಟಿದಾರರಿಗೆ 5 ಕೆಜಿ ಪಡಿತರವನ್ನು ಉಚಿತವಾಗಿ ನೀಡಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us