AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಪ್ರತಿಭಟನಾ ನಿರತ ರೈತರಿಗಾಗಿ ಉಚಿತ ಶೂ ಪಾಲಿಷ್ ಸೇವೆ, ಕುಸ್ತಿ ಪಂದ್ಯಾವಳಿ!

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್​ ರೈತರು ತಮ್ಮ ದೆಹಲಿ ಚಲೋ ಪ್ರತಿಭಟನೆಯಿಂದ ಹಿಂದೆ ಸರಿಯುವ ಯಾವುದೇ ಸೂಚನೆ ತೋರುತ್ತಿಲ್ಲ. ಕೇಂದ್ರ ಸರ್ಕಾರದ ಜೊತೆ ಏಳು ಬಾರಿ ಮಾತುಕತೆ ವಿಫಲವಾಗಿದೆ. ಆದರೂ ಕೃಷಿ ಕಾಯ್ದೆಯನ್ನ ಸಂಪೂರ್ಣವಾಗಿ ರದ್ದುಪಡಿಸುವವರೆಗೂ ಧರಣಿ ವಾಪಸ್​ ಪಡೆಯೋದಿಲ್ಲ ಎಂದು ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Delhi Chalo ಪ್ರತಿಭಟನಾ ನಿರತ ರೈತರಿಗಾಗಿ ಉಚಿತ ಶೂ ಪಾಲಿಷ್ ಸೇವೆ, ಕುಸ್ತಿ ಪಂದ್ಯಾವಳಿ!
ರೈತರಿಗಾಗಿ ಉಚಿತ ಶೂ ಪಾಲಿಷ್, ಕುಸ್ತಿ ಪಂದ್ಯಾವಳಿ!
KUSHAL V
|

Updated on:Jan 10, 2021 | 11:56 PM

Share

ದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್​ ರೈತರು ತಮ್ಮ ದೆಹಲಿ ಚಲೋ ಪ್ರತಿಭಟನೆಯಿಂದ ಹಿಂದೆ ಸರಿಯುವ ಯಾವುದೇ ಸೂಚನೆ ತೋರುತ್ತಿಲ್ಲ. ಕೇಂದ್ರ ಸರ್ಕಾರದ ಜೊತೆ ಏಳು ಬಾರಿ ಮಾತುಕತೆ ವಿಫಲವಾಗಿದೆ. ಆದರೂ ಕೃಷಿ ಕಾಯ್ದೆಯನ್ನ ಸಂಪೂರ್ಣವಾಗಿ ರದ್ದುಪಡಿಸುವವರೆಗೂ ಧರಣಿ ವಾಪಸ್​ ಪಡೆಯೋದಿಲ್ಲ ಎಂದು ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇತ್ತ, ಘಾಜಿಪುರ್​ ಬಳಿ ಪ್ರತಿಭಟನಾ ನಿರತ ರೈತರ ನೆರವಿಗೆ ಹಲವರು ಮುಂದಾಗಿದ್ದಾರೆ. ಅನ್ನದಾತರ ಅಳಲನ್ನು ಸರ್ಕಾರ ಆಲಿಸುವವರೆಗೂ ತಮ್ಮ ಕೈಲಾದ ಅಳಿಲು ಸೇವೆಯನ್ನು ಮಾಡಲು ಸ್ವಸಹಾಯಕರು ಮುಂದಾಗಿದ್ದಾರೆ.

ಹಾಗಾಗಿ, ಇಂದು ರೈತರಿಗೆ ಹತ್ತಿರದ ಗುರುದ್ವಾರ ಸಿಸ್​ ಗಂಜ್​ ಸಾಹೀಬ್​ನ ಸ್ವಸಹಾಯಕರು ಉಚಿತ ಶೂ ಪಾಲಿಷ್​ ಸೇವೆಯನ್ನು ಒದಗಿಸಿದರು. ನಮ್ಮ ರೈತ ಬಾಂಧವರು ಬಲು ದೂರದಿಂದ ಮಳೆ, ಚಳಿಯನ್ನು ಲೆಕ್ಕಿಸದೆ ಇಲ್ಲಿಯವರೆಗೆ ನಡೆದುಕೊಂಡೇ ಬಂದು ಧರಣಿ ನಡೆಸುತ್ತಿದ್ದಾರೆ. ಹೀಗಾಗಿ, ಕೆಸರಿನಲ್ಲಿ ಕೊಳಕಾದ ಅವರ ಶೂಗಳನ್ನು ಸ್ವಚ್ಛಗೊಳಿಸಿ, ಪಾಲಿಷ್​ ಮಾಡಲು ಬಂದಿದ್ದೇವೆ ಎಂದು ಸ್ವಸಹಾಯಕರೊಬ್ಬರು ಹೇಳಿದರು. ಜೊತೆಗೆ, ಅನ್ನದಾತರ ಋಣ ತೀರಿಸಲು ನಾವು ಇದನ್ನು ಮಾಡುತ್ತಿದ್ದೇವೆ ಎಂದು ಸಹ ಹೇಳಿದರು.

ಇದಲ್ಲದೆ, ರೈತರ ಮನರಂಜನೆಗಾಗಿ ಇಂದು ಘಾಜಿಪುರ್ ಬಳಿ ಕುಸ್ತಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಕುಸ್ತಿಪಟುಗಳ ಜಬರ್​ದಸ್ತ್​ ದಂಗಲ್​ನ ವೀಕ್ಷಿಸಿದ ರೈತರು ಸಖತ್​ ಖುಷಿಪಟ್ಟರು.

Published On - 11:54 pm, Sun, 10 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ