AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ಪ್ರತಿಭಟನಾ ನಿರತ ರೈತರಿಗಾಗಿ ಉಚಿತ ಶೂ ಪಾಲಿಷ್ ಸೇವೆ, ಕುಸ್ತಿ ಪಂದ್ಯಾವಳಿ!

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್​ ರೈತರು ತಮ್ಮ ದೆಹಲಿ ಚಲೋ ಪ್ರತಿಭಟನೆಯಿಂದ ಹಿಂದೆ ಸರಿಯುವ ಯಾವುದೇ ಸೂಚನೆ ತೋರುತ್ತಿಲ್ಲ. ಕೇಂದ್ರ ಸರ್ಕಾರದ ಜೊತೆ ಏಳು ಬಾರಿ ಮಾತುಕತೆ ವಿಫಲವಾಗಿದೆ. ಆದರೂ ಕೃಷಿ ಕಾಯ್ದೆಯನ್ನ ಸಂಪೂರ್ಣವಾಗಿ ರದ್ದುಪಡಿಸುವವರೆಗೂ ಧರಣಿ ವಾಪಸ್​ ಪಡೆಯೋದಿಲ್ಲ ಎಂದು ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Delhi Chalo ಪ್ರತಿಭಟನಾ ನಿರತ ರೈತರಿಗಾಗಿ ಉಚಿತ ಶೂ ಪಾಲಿಷ್ ಸೇವೆ, ಕುಸ್ತಿ ಪಂದ್ಯಾವಳಿ!
ರೈತರಿಗಾಗಿ ಉಚಿತ ಶೂ ಪಾಲಿಷ್, ಕುಸ್ತಿ ಪಂದ್ಯಾವಳಿ!
KUSHAL V
|

Updated on:Jan 10, 2021 | 11:56 PM

Share

ದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್​ ರೈತರು ತಮ್ಮ ದೆಹಲಿ ಚಲೋ ಪ್ರತಿಭಟನೆಯಿಂದ ಹಿಂದೆ ಸರಿಯುವ ಯಾವುದೇ ಸೂಚನೆ ತೋರುತ್ತಿಲ್ಲ. ಕೇಂದ್ರ ಸರ್ಕಾರದ ಜೊತೆ ಏಳು ಬಾರಿ ಮಾತುಕತೆ ವಿಫಲವಾಗಿದೆ. ಆದರೂ ಕೃಷಿ ಕಾಯ್ದೆಯನ್ನ ಸಂಪೂರ್ಣವಾಗಿ ರದ್ದುಪಡಿಸುವವರೆಗೂ ಧರಣಿ ವಾಪಸ್​ ಪಡೆಯೋದಿಲ್ಲ ಎಂದು ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇತ್ತ, ಘಾಜಿಪುರ್​ ಬಳಿ ಪ್ರತಿಭಟನಾ ನಿರತ ರೈತರ ನೆರವಿಗೆ ಹಲವರು ಮುಂದಾಗಿದ್ದಾರೆ. ಅನ್ನದಾತರ ಅಳಲನ್ನು ಸರ್ಕಾರ ಆಲಿಸುವವರೆಗೂ ತಮ್ಮ ಕೈಲಾದ ಅಳಿಲು ಸೇವೆಯನ್ನು ಮಾಡಲು ಸ್ವಸಹಾಯಕರು ಮುಂದಾಗಿದ್ದಾರೆ.

ಹಾಗಾಗಿ, ಇಂದು ರೈತರಿಗೆ ಹತ್ತಿರದ ಗುರುದ್ವಾರ ಸಿಸ್​ ಗಂಜ್​ ಸಾಹೀಬ್​ನ ಸ್ವಸಹಾಯಕರು ಉಚಿತ ಶೂ ಪಾಲಿಷ್​ ಸೇವೆಯನ್ನು ಒದಗಿಸಿದರು. ನಮ್ಮ ರೈತ ಬಾಂಧವರು ಬಲು ದೂರದಿಂದ ಮಳೆ, ಚಳಿಯನ್ನು ಲೆಕ್ಕಿಸದೆ ಇಲ್ಲಿಯವರೆಗೆ ನಡೆದುಕೊಂಡೇ ಬಂದು ಧರಣಿ ನಡೆಸುತ್ತಿದ್ದಾರೆ. ಹೀಗಾಗಿ, ಕೆಸರಿನಲ್ಲಿ ಕೊಳಕಾದ ಅವರ ಶೂಗಳನ್ನು ಸ್ವಚ್ಛಗೊಳಿಸಿ, ಪಾಲಿಷ್​ ಮಾಡಲು ಬಂದಿದ್ದೇವೆ ಎಂದು ಸ್ವಸಹಾಯಕರೊಬ್ಬರು ಹೇಳಿದರು. ಜೊತೆಗೆ, ಅನ್ನದಾತರ ಋಣ ತೀರಿಸಲು ನಾವು ಇದನ್ನು ಮಾಡುತ್ತಿದ್ದೇವೆ ಎಂದು ಸಹ ಹೇಳಿದರು.

ಇದಲ್ಲದೆ, ರೈತರ ಮನರಂಜನೆಗಾಗಿ ಇಂದು ಘಾಜಿಪುರ್ ಬಳಿ ಕುಸ್ತಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಕುಸ್ತಿಪಟುಗಳ ಜಬರ್​ದಸ್ತ್​ ದಂಗಲ್​ನ ವೀಕ್ಷಿಸಿದ ರೈತರು ಸಖತ್​ ಖುಷಿಪಟ್ಟರು.

Published On - 11:54 pm, Sun, 10 January 21

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು