AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಿಮೊಳಿಗೆ ಟಿಕೆಟ್‌ ವಿವಾದ; ಕೆಲಸ ಕಳೆದುಕೊಂಡ ತಮಿಳುನಾಡಿನ ಬಸ್ ಚಾಲಕಿಗೆ ಹೊಸ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್

ತಮ್ಮ ವಯಸ್ಸಿನ ಮಹಿಳೆಯರಿಗೆ ಉತ್ತಮ ಮಾದರಿಯಾಗಿರುವ ಶರ್ಮಿಳಾ ಅವರ ಬಗ್ಗೆ ಕೇಳಿದಾಗ ನನಗೆ ತುಂಬಾ ದುಃಖವಾಯಿತು. ಶರ್ಮಿಳಾ ಕೇವಲ ಚಾಲಕಿಯಾಗದೆ ಸಾವಿರಾರು ಶರ್ಮಿಳಾರನ್ನು ಸೃಷ್ಟಿಸಬೇಕು ಎಂದು ನಾನು ನಂಬುತ್ತೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಕನಿಮೊಳಿಗೆ ಟಿಕೆಟ್‌ ವಿವಾದ; ಕೆಲಸ ಕಳೆದುಕೊಂಡ ತಮಿಳುನಾಡಿನ ಬಸ್ ಚಾಲಕಿಗೆ ಹೊಸ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್
ಚೆಕ್ ಹಸ್ತಾಂತರಿಸಿದ ಕಮಲ್ ಹಾಸನ್
Follow us
ರಶ್ಮಿ ಕಲ್ಲಕಟ್ಟ
|

Updated on: Jun 26, 2023 | 3:59 PM

ಚೆನ್ನೈ: ಡಿಎಂಕೆ ಸಂಸದೆ ಕನಿಮೊಳಿ (DMK MP Kanimozhi) ಅವರಿಗೆ ಬಸ್ ಟಿಕೆಟ್ ನೀಡುವ ವಿಚಾರದಲ್ಲಿ ಉಂಟಾದ ವಿವಾದದಲ್ಲಿ ಇತ್ತೀಚೆಗೆ ಕೆಲಸ ಕಳೆದುಕೊಂಡ ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಅವರಿಗೆ ನಟ-ರಾಜಕಾರಣಿ ಮತ್ತು ಮಕ್ಕಳ್ ನೀಧಿ ಮೈಯಂ (Makkal Needhi Maiam-MNM) ಮುಖ್ಯಸ್ಥ ಕಮಲ್ ಹಾಸನ್ (Kamal Haasan)ಸೋಮವಾರ ಹೊಸ ಕಾರು ಉಡುಗೊರೆಯಾಗಿ ನೀಡಿದ್ದಾರೆ. ಕಮಲ್ ಹಾಸನ್ ಅವರು ಶರ್ಮಿಳಾ ಅವರನ್ನು ಅವರ ಕುಟುಂಬದೊಂದಿಗೆ ಸೋಮವಾರ ಬೆಳಿಗ್ಗೆ ಅಲ್ವಾರ್‌ಪೇಟ್‌ನಲ್ಲಿರುವ ಅವರ ಚೆನ್ನೈ ಕಚೇರಿಗೆ ಆಹ್ವಾನಿಸಿ, ಹೊಸ ಕಾರು ಖರೀದಿಗೆ ಮತ್ತು ಉದ್ಯಮಿಯಾಗಿ ಅವರ ಪ್ರಯಾಣವನ್ನು ಮುಂದುವರಿಸಲು ಚೆಕ್ ಅನ್ನು ಹಸ್ತಾಂತರಿಸಿದರು.

“ತಮ್ಮ ವಯಸ್ಸಿನ ಮಹಿಳೆಯರಿಗೆ ಉತ್ತಮ ಮಾದರಿಯಾಗಿರುವ ಶರ್ಮಿಳಾ ಅವರ ಬಗ್ಗೆ ಕೇಳಿದಾಗ ನನಗೆ ತುಂಬಾ ದುಃಖವಾಯಿತು. ಶರ್ಮಿಳಾ ಕೇವಲ ಚಾಲಕಿಯಾಗದೆ ಸಾವಿರಾರು ಶರ್ಮಿಳಾರನ್ನು ಸೃಷ್ಟಿಸಬೇಕು ಎಂದು ನಾನು ನಂಬುತ್ತೇನೆ. ಕಮಲ್ ಕಲ್ಚರಲ್ ಸೆಂಟರ್ ಶರ್ಮಿಳಾ ಅವರಿಗೆ ಉದ್ಯಮಿಯಾಗಿ ತಮ್ಮ ಪ್ರಯಾಣವನ್ನು ಪುನರಾರಂಭಿಸಲು ಹೊಸ ಕಾರನ್ನು ಉಡುಗೊರೆಯಾಗಿ ನೀಡಿತು ಎಂದು ಕಮಲ್ ಹಾಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏನಿದು ವಿವಾದ?

ಜೀವನೋಪಾಯಕ್ಕಾಗಿ ಬಸ್ ಓಡಿಸುತ್ತಿದ್ದ ಶರ್ಮಿಳಾ ಅವರು ಕನಿಮೊಳಿಗೆ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿದ್ದರು. ಇದಕ್ಕಾಗಿ ಮಹಿಳಾ ಬಸ್ ಕಂಡಕ್ಟರ್ ಜೊತೆ ವಾಗ್ವಾದಕ್ಕಿಳಿದಿದ್ದರು. ಈ ಕಾರಣದಿಂದಾ ಆಕೆಯನ್ನು ಮಾಲೀಕರು ಕೆಲಸದಿಂದ ವಜಾಗೊಳಿಸಿದ್ದರು. ಶರ್ಮಿಳಾ ಅವರನ್ನು ವಜಾಗೊಳಿಸಿರುವ ಕುರಿತು ತಿಳಿದ ಬಳಿಕ ಆಕೆಗೆ ದೂರವಾಣಿ ಕರೆ ಮಾಡಿದ ಕನಿಮೋಳಿ, ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಜತೆಗೆ, ವೃತ್ತಿ ಜೀವನಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಡಿಎಂಕೆ ಸಂಸದೆಗೆ ಬಸ್​​ನಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟದ್ದಕ್ಕೆ ತಮಿಳುನಾಡಿನ ಮೊದಲ ಬಸ್ ಚಾಲಕಿಯ ಉದ್ಯೋಗಕ್ಕೇ ಕುತ್ತು

ಕನಿಮೊಳಿ ಅವರನ್ನು ಸತ್ಕರಿಸಿ ಬಸ್ಸಿನಲ್ಲಿ ಉಚಿತವಾಗಿ ಕರೆದೊಯ್ದ ಸ್ವಲ್ಪ ಸಮಯದ ನಂತರ ಶರ್ಮಿಳಾಳನ್ನು ಖಾಸಗಿ ಸಾರಿಗೆ ಕಂಪನಿಯು ಕೆಲಸದಿಂದ ವಜಾಗೊಳಿಸಿತ್ತು.ಕನಿಮೋಳಿ ಅವರನ್ನು ಬಸ್ಸಿನಲ್ಲಿ ಕರೆದೊಯ್ಯುವ ಬಗ್ಗೆ ಚಾಲಕಿ, ನಿರ್ವಾಹಕಿ ಮಧ್ಯೆ ವಾಗ್ವಾದವೂ ನಡೆದಿತ್ತು ಎಂದು ಕೆಲವು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ