AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಮಾಧ್ಯಮಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಯತ್ನ ವಿರೋಧಿಸಿ ದೆಹಲಿ ಹೈಕೋರ್ಟ್​ಗೆ ಅರ್ಜಿ

Freedom of Media: ಡಿಜಿಟಲ್ ಮಾಧ್ಯಮಗಳಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯ ಕಿತ್ತುಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಹಲವು ಪತ್ರಕರ್ತರು, ವಕೀಲರು ಮತ್ತು ಚಳಿವಳಿಗಾರರು ಆರೋಪಿಸಿದ್ದರು.

ಡಿಜಿಟಲ್ ಮಾಧ್ಯಮಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಯತ್ನ ವಿರೋಧಿಸಿ ದೆಹಲಿ ಹೈಕೋರ್ಟ್​ಗೆ ಅರ್ಜಿ
ದೆಹಲಿ ಹೈಕೋರ್ಟ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 09, 2021 | 9:52 PM

ದೆಹಲಿ: ಡಿಜಿಟಲ್ ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ನಿಯಂತ್ರಣ ಹೇರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಆನ್​ಲೈನ್​ ನ್ಯೂಸ್​ ಪೋರ್ಟಲ್​ಗಳಾದ ‘ದಿ ವೈರ್’ ಮತ್ತು ‘ದಿ ನ್ಯೂಸ್​ ಮಿನಟ್’ ಮಂಗಳವಾರ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿವೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ಬುಧವಾರ (ಮಾರ್ಚ್ 10) ಈ ಸಂಬಂಧ ವಿಚಾರಣೆ ನಡೆಸಲಿದೆ.

‘ದಿ ವೈರ್​’ ಜಾಲತಾಣದ ಮಾಲೀಕತ್ವ ಹೊಂದಿರುವ ‘ಫೌಂಡೇಶನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸ್ಟ್’ ಅರ್ಜಿ ಸಲ್ಲಿಸಿದೆ. ದಿ ನ್ಯೂಸ್ ಮಿನಟ್​ನ ಪ್ರಧಾನ ಸಂಪಾದಕಿ ಧನ್ಯ ರಾಜೇಂದ್ರನ್ ಮತ್ತು ದಿ ವೈರ್​ನ ಸಂಸ್ಥಾಪಕ ಸಂಪಾದಕ ಎಂ.ಕೆ.ವೇಣು ಅರ್ಜಿಗೆ ಸಹಿ ಹಾಕಿದ್ದಾರೆ.

ಕೇಂದ್ರ ಸರ್ಕಾರವು ಫೆ.25ರಂದು ‘ಮಾಹಿತಿ ತಂತ್ರಜ್ಞಾನ (ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ಮತ್ತು ಮಾರ್ಗದರ್ಶಿ ಸೂತ್ರಗಳು) ನಿಯಮಗಳು 2021’ ಘೋಷಿಸಿತ್ತು. ದಶಕಗಳಷ್ಟು ಹಳೆಯದಾದ ಮಾಹಿತಿ ತಂತ್ರಜ್ಞಾನ ಕಾಯ್ದೆ (2000) ಆಧರಿಸಿ ನೀತಿ ಸಂಹಿತೆ ಮತ್ತು ಮೂರು ಹಂತದ ಕಂಟೆಂಟ್ ನಿಯಂತ್ರಣ ವ್ಯವಸ್ಥೆಯನ್ನು ರೂಪಿಸಲಾಗಿತ್ತು.

ಡಿಜಿಟಲ್ ಮಾಧ್ಯಮಗಳಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯ ಕಿತ್ತುಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಹಲವು ಪತ್ರಕರ್ತರು, ವಕೀಲರು ಮತ್ತು ಚಳಿವಳಿಗಾರರು ಆರೋಪಿಸಿದ್ದರು. ಸಂಪಾದಕರ ಒಕ್ಕೂಟ (ಎಡಿಟರ್ಸ್​ ಗಿಲ್ಡ್​) ಸಹ ಈ ನಿಯಮಗಳನ್ನು ಹಿಂಪಡೆಯುವಂತೆ ಆಗ್ರಹಿಸಿತ್ತು.

ಆದರೆ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಟೀಕೆಗಳನ್ನು ತಳ್ಳಿಹಾಕಿದ್ದರು. ನಾಗರಿಕರನ್ನು ರಕ್ಷಿಸಲು ಇಂಥ ಕಾಯ್ದೆಗಳು ಅನಿವಾರ್ಯ ಎಂದು ಹೇಳಿದ್ದರು. ಸಂಬಂಧಿಸಿದವರೊಡನೆ ಸಮಾಲೋಚನೆ ನಡೆಸಿದ ನಂತರ ಈ ನಿಯಮಗಳನ್ನು ರೂಪಿಸಲಾಗಿದೆ ಎಂದು ಹೇಳಿದ್ದರು.

ಕೇಂದ್ರ ಸರ್ಕಾರವು ರೂಪಿಸಿರುವ ನಿಯಮಗಳ ಬಗೆಗಿನ ಭೀತಿಯ ಬಗ್ಗೆ ಪ್ರತಿಕ್ರಿಯಿಸಿದ್ದ ವಾರ್ತಾ ಮತ್ತು ಪ್ರಸಾರ ಇಲಾಖೆ ಕಾರ್ಯದರ್ಶಿ ಅಮಿತ್ ಖರೆ, ‘ಈ ಕುರಿತು ಕೆಲವರು ಅನಗತ್ಯವಾಗಿ ಭಯಬಿತ್ತುವ ಯತ್ನ ಮಾಡುತ್ತಿದ್ದಾರೆ. ಕತ್ತಲಕೋಣೆಯೊಂದರಲ್ಲಿ ಕಪ್ಪುಬೆಕ್ಕು ಹುಡುಕಲು ಅವರು ಯತ್ನಿಸುತ್ತಿದ್ದಾರೆ. ವಾಸ್ತವವಾಗಿ ಆ ಕೋಣೆಯಲ್ಲಿ ಬೆಕ್ಕೇ ಇಲ್ಲ’ ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾ, ಒಟಿಟಿ, ಡಿಜಿಟಲ್ ಕಂಟೆಂಟ್ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ನಿಯಮ: ನೀವು ತಿಳಿಯಬೇಕಾದ 10 ಅಂಶಗಳು

Published On - 9:51 pm, Tue, 9 March 21

ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್