AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ವಿಧಾನಸಭಾ ಸ್ಪೀಕರ್​ಗೆ ಬಾಂಬ್ ಬೆದರಿಕೆ, ಮೆಟ್ರೋ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬಂತು ಇ-ಮೇಲ್

ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ.

Bomb Threat: ವಿಧಾನಸಭಾ ಸ್ಪೀಕರ್​ಗೆ ಬಾಂಬ್ ಬೆದರಿಕೆ, ಮೆಟ್ರೋ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬಂತು ಇ-ಮೇಲ್
ವಿಜೇಂದರ್Image Credit source: Education News
ನಯನಾ ರಾಜೀವ್
|

Updated on: Mar 24, 2026 | 11:18 AM

Share

ನವದೆಹಲಿ, ಮಾರ್ಚ್​ 24: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರಿಗೂ ಬೆದರಿಕೆ ಹಾಕಲಾಗಿದೆ. ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬೆಳಗ್ಗೆ 7.49 ಕ್ಕೆ ಇಮೇಲ್ ಬಂದಿದ್ದು, ವಿಧಾನಸಭೆಗೆ ಬೆಳಗ್ಗೆ 7.28 ಕ್ಕೆ ಇಮೇಲ್ ಬಂದಿತು.ಬೆದರಿಕೆ ಕರೆ ಬಂದ ನಂತರ, ಭದ್ರತಾ ಸಿಬ್ಬಂದಿ ವಿಧಾನಸಭೆ ಸ್ಪೀಕರ್ ಕೊಠಡಿಗೆ ತೆರಳಿ ತನಿಖೆ ನಡೆಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಇಮೇಲ್‌ ನಲ್ಲಿ ಸರಣಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ದೆಹಲಿ ವಿಧಾನಸಭೆ ದೆಹಲಿ ಅಸೆಂಬ್ಲಿ, ಸಚಿವಾಲಯ, ಕೆಂಪುಕೋಟೆ ಮತ್ತು ಎರಡು ಶಾಲೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಭದ್ರತಾ ಪಡೆಗಳು ತೀವ್ರ ತಪಾಸಣೆ ನಂತರ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ದೃಢಪಟ್ಟಿತ್ತು.

ಮತ್ತಷ್ಟು ಓದಿ: ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ

ಕೆಲವು ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿಸಲು ಬಳಸಿದ ಐಪಿ ವಿಳಾಸ ಪತ್ತೆಗಾಗಿ ಸೈಬರ್ ತಂಡಗಳು ಪ್ರಯತ್ನಿಸುತ್ತಿವೆ. ಅಂತಹ ಅಪರಾಧಿಗಳು ಪೋಲೀಸ್ ತನಿಖೆಯನ್ನು ದಾರಿ ತಪ್ಪಿಸಲು ಇಮೇಲ್‌ ಕಳುಹಿಸಲು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (VPN) ಬಳಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ