AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಂತರ್ ಮಂತರ್‌ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಮತ್ತೊಮ್ಮೆ ಗಲಭೆ ಸೃಷ್ಟಿಸಿದ್ದಾರೆ. ಪ್ರತಿಭಟನಾಕಾರರಲ್ಲಿ ದುಷ್ಕರ್ಮಿಗಳು ಆರ್‌ಎಎಫ್ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಎಸಿಪಿಗಳು ಸೇರಿದಂತೆ 5 ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ದುಷ್ಕರ್ಮಿಗಳ ದಾಳಿಯಲ್ಲಿ ಇದುವರೆಗೆ 5 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಎಸಿಪಿಗಳು, ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಸೇರಿದ್ದಾರೆ.

ಜಂತರ್ ಮಂತರ್‌ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ
Delhi Cjp ProtestImage Credit source: PTI
ಸುಷ್ಮಾ ಚಕ್ರೆ
|

Updated on:Jul 22, 2026 | 11:12 PM

Share

ನವದೆಹಲಿ, ಜುಲೈ 22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಜಂತರ್ ಮಂತರ್ ಬಳಿಯ ಕನ್ನಾಟ್ ಪ್ಲೇಸ್‌ನ ಟಾಲ್‌ಸ್ಟಾಯ್ ಮಾರ್ಗದಲ್ಲಿ ಇಂದು ರಾತ್ರಿ ಸುಮಾರು 8.30ಕ್ಕೆ ತೀವ್ರ ಉದ್ವಿಗ್ನತೆ ಉಂಟಾಗಿದೆ. ಪ್ರತಿಭಟನಾಕಾರರ ಗುಂಪೊಂದು ದೆಹಲಿ ಪೊಲೀಸರ ಮೇಲೆ ದಿಢೀರ್ ದಾಳಿ ನಡೆಸಿದೆ. ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದ ಗುಂಪು ದಿಢೀರನೆ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ಎಸೆಯಲಾರಂಭಿಸಿತು. ಈ ಹಿಂಸಾಚಾರದಲ್ಲಿ ಕನ್ನಾಟ್ ಪ್ಲೇಸ್ ವಿಭಾಗದ ಎಸಿಪಿ ವಿವೇಕ್ ಭಗತ್ ಅವರಿಗೆ ಗಾಯಗಳಾಗಿವೆ. ಹಿರಿಯ ಪೊಲೀಸ್ ಅಧಿಕಾರಿಗಳು ಗಾಯಗೊಂಡ ಅಧಿಕಾರಿಯನ್ನು ತಕ್ಷಣವೇ ಚಿಕಿತ್ಸೆಗಾಗಿ ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಟಾಲ್‌ಸ್ಟಾಯ್ ಮಾರ್ಗದಲ್ಲಿ ಗಲಭೆಕೋರರು ಪೊಲೀಸರು ಮತ್ತು ಆರ್‌ಎಎಫ್ ತಂಡಗಳ ಮೇಲೆ ದೊಡ್ಡ ಕಲ್ಲುಗಳನ್ನು ಎಸೆದರು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಲಾಠಿ ಪ್ರಹಾರ ನಡೆಸಿದರು. ಆಗ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸುವ ಮೂಲಕ ಪ್ರತಿಕ್ರಿಯಿಸಿದರು. ಕೊನೆಗೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. ಈ ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಘಟನೆಯ ಕುರಿತು ಸಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ಚಲೋ ಸಂಸದ್ ಪ್ರತಿಭಟನೆ ವೇಳೆ ಪೊಲೀಸರು- ಪ್ರತಿಭಟನಾಕಾರರ ನಡುವೆ ಕಲ್ಲು ತೂರಾಟ!

ಇಂಟರ್ನೆಟ್ ಸ್ಥಗಿತಗೊಂಡಿದ್ದರೂ ಸಂದೇಶ ರವಾನೆ:

ಮೂಲಗಳ ಪ್ರಕಾರ, ನವದೆಹಲಿಯಲ್ಲಿ ಇಂಟರ್ನೆಟ್ ಸ್ಥಗಿತಗೊಂಡಿದ್ದರೂ, ಜಂತರ್ ಮಂತರ್ ಮತ್ತು ಕನ್ನಾಟ್ ಪ್ಲೇಸ್ ಪ್ರದೇಶಗಳು, ವಿಶೇಷವಾಗಿ ಟಾಲ್‌ಸ್ಟಾಯ್ ಮಾರ್ಗ ಮತ್ತು ಜನಪಥ್ ಪ್ರದೇಶಗಳಲ್ಲಿ ಹೆಚ್ಚಿನ ಮೆಸೇಜುಗಳನ್ನು ಕಳುಹಿಸಲಾಗುತ್ತಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ನೆಟ್‌ವರ್ಕ್ ಸಂಪರ್ಕಗಳು ಮತ್ತು SMS ವಿನಿಮಯಗಳು ಕಂಡುಬರುತ್ತಿವೆ.

ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾಕಾರರು ನವದೆಹಲಿಯ ಇತರ ಭಾಗಗಳಲ್ಲಿರುವ ಪ್ರತಿಭಟನಾಕಾರರೊಂದಿಗೆ ಸಂವಹನ ನಡೆಸಲು ಎಸ್‌ಎಂಎಸ್ ಬಳಸಿದ್ದಾರೆಯೇ ಮತ್ತು ಈ ಸಂವಹನವು ಹಿಂಸಾಚಾರಕ್ಕೆ ಕಾರಣವಾಯಿತೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ತನಿಖೆ ಮುಂದುವರಿದಿದ್ದು, ಇನ್ನೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 pm, Wed, 22 July 26

Follow Us