AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra: ಚಾರ್​ಧಾಮ್ ಯಾತ್ರೆಗೆ ಭೂಕುಸಿತದ ಆತಂಕ; ಬದರಿನಾಥದ ಹೆದ್ದಾರಿಯಲ್ಲಿ ಬಿರುಕು

ಜೋಶಿಮಠದಲ್ಲಿ ಇತ್ತೀಚೆಗೆ ಸಂಭವಿಸಿದ್ದ ಬಿರುಕಿಗೂ ಇದಕ್ಕೂ ಸಂಬಂಧವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಿದೆ ಎಂದು ಹಿರಿಯ ಭೂವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.

Char Dham Yatra: ಚಾರ್​ಧಾಮ್ ಯಾತ್ರೆಗೆ ಭೂಕುಸಿತದ ಆತಂಕ; ಬದರಿನಾಥದ ಹೆದ್ದಾರಿಯಲ್ಲಿ ಬಿರುಕು
ಜೋಶಿಮಠದಲ್ಲಿ ರಸ್ತೆಯೊಂದು ಬಿರುಕು ಬಿಟ್ಟಿರುವುದರ ಸಂಗ್ರಹ ಚಿತ್ರ (ಪಿಟಿಐ ಸಂಗ್ರಹ ಚಿತ್ರ)Image Credit source: PTI
ಗಣಪತಿ ಶರ್ಮಾ
|

Updated on: Feb 20, 2023 | 8:13 AM

Share

ಡೆಹ್ರಾಡೂನ್: ಚಾರ್​ಧಾಮ್ ಯಾತ್ರೆ (Char Dham Yatra) ದಿನಾಂಕವನ್ನು ಉತ್ತರಾಖಂಡ ಸರ್ಕಾರ ಘೋಷಿಸಿದ ಬೆನ್ನಲ್ಲೇ ಬದರಿನಾಥದ (Badrinath) ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಭೂಕುಸಿತದ ಆತಂಕ ಎದುರಾಗಿದೆ. ಇದೀಗ ಜೋಶಿಮಠ (Joshimath) ಸಮೀಪ ಬದರಿನಾಥದ ಹೆದ್ದಾರಿಯಲ್ಲಿ 10 ಕಡೆ ದೊಡ್ಡ ಮಟ್ಟದ ಬಿರುಕು ಕಾಣಿಸಿಕೊಂಡಿದೆ. ಜೋಶಿಮಠ ಮತ್ತು ಮರ್​ವಾರಿ ಮಾರ್ಗ ಮಧ್ಯೆ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹೆದ್ದಾರಿಯು ದೇಗುಲ ಪಟ್ಟಣವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. 10 ಕಡೆ ಹೊಸ ಬಿರುಕುಗಳು ಕಾಣಿಸಿಕೊಂಡಿವೆ. ಈ ಮೊದಲು ಕಾಣಿಸಿದ್ದ ಬಿರುಕುಗಳು ದೊಡ್ಡದಾಗುತ್ತಿವೆ ಎಂದು ‘ಜೋಶಿಮಠ ಉಳಿಸಿ ಸಂಘರ್ಷ ಸಮಿತಿ’ಯ ಕಾರ್ಯಕರ್ತ ಸಂಜಯ್ ಉನಿಯಾಲ್ ತಿಳಿಸಿದ್ದಾರೆ. ಈ ಹಿಂದೆ ಕಾಣಿಸಿಕೊಂಡಿದ್ದ ಬಿರುಕುಗಳನ್ನು ಮುಚ್ಚುವ ಕೆಲಸವನ್ನು ಆಡಳಿತ ಮಾಡಿತ್ತು. ಆದರೆ, ಅವುಗಳು ಮತ್ತೆ ಬಿರುಕುಬಿಟ್ಟಿದ್ದು, ದೊಡ್ಡದಾಗುತ್ತಿವೆ ಎಂದು ಉನಿಯಾಲ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಜೋಶಿಮಠದಲ್ಲಿ ಇತ್ತೀಚೆಗೆ ಸಂಭವಿಸಿದ್ದ ಬಿರುಕಿಗೂ ಇದಕ್ಕೂ ಸಂಬಂಧವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಿದೆ ಎಂದು ಹಿರಿಯ ಭೂವಿಜ್ಞಾನಿಯೊಬ್ಬರು ತಿಳಿಸಿದ್ದಾರೆ. ಬಿರುಕಿಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Kedarnath Temple: ಶಿವನ ದರ್ಶನಕ್ಕೆ ಶುಭ ಮುಹೂರ್ತ ಫೀಕ್ಸ್, ಕೇದಾರನಾಥ ದೇವಾಲಯದ ಬಾಗಿಲು ಏಪ್ರಿಲ್ 25ಕ್ಕೆ ಓಪನ್

ಜೋಶಿಮಠ ಪಟ್ಟಣದ ಹಲವೆಡೆಗಳಲ್ಲಿ ಇತ್ತೀಚೆಗೆ ಭೂಕುಸಿತ ಕಂಡುಬಂದಿದ್ದು ಸುಮಾರು 500 ಕುಟುಂಬಗಳನ್ನು ಸ್ಥಳಾಂತರಗೊಳಿಸಲಾಗಿತ್ತು.

ಫೆಬ್ರವರಿ 25ರಿಂದ ಕೇದಾರನಾಥನ ದರ್ಶನ

ಕೇದಾರನಾಥ ಧಾಮದ ಬಾಗಿಲು ಏಪ್ರಿಲ್ 25ಕ್ಕೆ ತೆರೆಯಲಾಗುತ್ತದೆ ಎಂದು ಉತ್ತರಾಖಂಡ ಸರ್ಕಾರ ಶನಿವಾರ ಘೋಷಿಸಿತ್ತು. ಈ ವರ್ಷ ಮೇಘ ಲಗ್ನದಲ್ಲಿ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಿದೆ. ಏಪ್ರಿಲ್ 25ರಂದು ಬೆಳಗ್ಗೆ 6.20ಕ್ಕೆ ದೇವಸ್ಥಾನದ ಬಾಗಿಲು ತೆರೆಯಲಿದೆ ಎಂದು ಉತ್ತರಾಖಂಡ ಸರ್ಕಾರ ಶನಿವಾರ ತಿಳಿಸಿತ್ತು. ಕೇದಾರನಾಥ ದೇಗುಲದ ಬಾಗಿಲು ತೆರೆಯುವುದರೊಂದಿಗೆ ಚಾರ್​​ಧಾಮ್ ಯಾತ್ರೆ ಆರಂಭವಾಗಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ