AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಗುಂಡಿನ ದಾಳಿ, ನಾಲ್ವರು ನಾಪತ್ತೆ, ಉಗ್ರರ ಕೈವಾಡ ಶಂಕೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ, ಬಿಷ್ಣುಪುರ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಿಷ್ಣುಪುರ ಜಿಲ್ಲೆಯ ಕುಂಬಿ ಮತ್ತು ತೌಬಲ್ ಜಿಲ್ಲೆಯ ವಾಂಗೂ ನಡುವೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆದ ಪ್ರದೇಶದ ಬಳಿ ಶುಂಠಿ ಕೊಯ್ಲು ಮಾಡಲು ಹೋದ ನಾಲ್ವರು ನಾಪತ್ತೆಯಾಗಿದ್ದಾರೆ. ಬಂದೂಕುಗಳಿಂದ ಗುಂಡು ಹಾರಿಸುವ ಮೊದಲು ಆರು ಸುತ್ತಿನ ಮಾರ್ಟರ್ ಫೈರಿಂಗ್ ನಡೆದಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ.

ಮಣಿಪುರದಲ್ಲಿ ಗುಂಡಿನ ದಾಳಿ, ನಾಲ್ವರು ನಾಪತ್ತೆ, ಉಗ್ರರ ಕೈವಾಡ ಶಂಕೆ
Image Credit source: India Today
ನಯನಾ ರಾಜೀವ್
|

Updated on: Jan 11, 2024 | 7:49 AM

Share

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ, ಬಿಷ್ಣುಪುರ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಿಷ್ಣುಪುರ ಜಿಲ್ಲೆಯ ಕುಂಬಿ ಮತ್ತು ತೌಬಲ್ ಜಿಲ್ಲೆಯ ವಾಂಗೂ ನಡುವೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆದ ಪ್ರದೇಶದ ಬಳಿ ಶುಂಠಿ ಕೊಯ್ಲು ಮಾಡಲು ಹೋದ ನಾಲ್ವರು ನಾಪತ್ತೆಯಾಗಿದ್ದಾರೆ. ಬಂದೂಕುಗಳಿಂದ ಗುಂಡು ಹಾರಿಸುವ ಮೊದಲು ಆರು ಸುತ್ತಿನ ಮಾರ್ಟರ್ ಫೈರಿಂಗ್ ನಡೆದಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ.

ನಾಪತ್ತೆಯಾದ ನಾಲ್ವರನ್ನು ಓಯಿನಮ್ ರೋಮೆನ್ ಮೈತಿ (45), ಅಹಾಂತೇಮ್ ದಾರಾ ಮೈತಿ (56), ತೌಡಮ್ ಇಬೊಮ್ಚಾ ಮೈತಿ (53) ಮತ್ತು ತೌದಮ್ ಆನಂದ್ ಮೈತಿ (27) ಎಂದು ಗುರುತಿಸಲಾಗಿದೆ. ಘಟನೆಯ ನಂತರ ಕುಂಬಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಲಾಗಿದೆ.

ಇದಕ್ಕೂ ಮೊದಲು ಜನವರಿ 1 ರಂದು ತೌಬಲ್‌ನ ಲಿಲಾಂಗ್ ಪ್ರದೇಶದಲ್ಲಿ ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮತ್ತು ಸ್ಥಳೀಯರ ನಡುವೆ ಘರ್ಷಣೆಗಳು ನಡೆದಿತ್ತು . ಪೊಲೀಸರ ಪ್ರಕಾರ, ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ನಡೆದ ನಂತರ ಕಳೆದ ಕೆಲವು ತಿಂಗಳುಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ, ಇದು ಇದುವರೆಗೆ 180 ಜೀವಗಳನ್ನು ಬಲಿ ತೆಗೆದುಕೊಂಡಿದೆ.

ಮತ್ತಷ್ಟು ಓದಿ: Manipur violence: ಮಣಿಪುರದ 5 ಜಿಲ್ಲೆಗಳಲ್ಲಿ ಕರ್ಫ್ಯೂ ವಾಪಸ್, ಇತರ ಜಿಲ್ಲೆಗಳಲ್ಲಿ ಕೆಲವು ಗಂಟೆಗಳ ಕಾಲ ಸಡಿಲಿಕೆ

ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ರಾಜ್ಯದ ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ ಆಯೋಜಿಸಿದ ನಂತರ ಘರ್ಷಣೆಗಳು ಭುಗಿಲೆದ್ದವು. ಹಿಂಸಾಚಾರದ ಮೊದಲು ಕುಕಿ ಗ್ರಾಮಸ್ಥರನ್ನು ಮೀಸಲು ಅರಣ್ಯ ಭೂಮಿಯಿಂದ ಹೊರಹಾಕುವ ಉದ್ವಿಗ್ನತೆ ಉಂಟಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ