AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಗುಂಡಿನ ದಾಳಿ, ನಾಲ್ವರು ನಾಪತ್ತೆ, ಉಗ್ರರ ಕೈವಾಡ ಶಂಕೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ, ಬಿಷ್ಣುಪುರ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಿಷ್ಣುಪುರ ಜಿಲ್ಲೆಯ ಕುಂಬಿ ಮತ್ತು ತೌಬಲ್ ಜಿಲ್ಲೆಯ ವಾಂಗೂ ನಡುವೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆದ ಪ್ರದೇಶದ ಬಳಿ ಶುಂಠಿ ಕೊಯ್ಲು ಮಾಡಲು ಹೋದ ನಾಲ್ವರು ನಾಪತ್ತೆಯಾಗಿದ್ದಾರೆ. ಬಂದೂಕುಗಳಿಂದ ಗುಂಡು ಹಾರಿಸುವ ಮೊದಲು ಆರು ಸುತ್ತಿನ ಮಾರ್ಟರ್ ಫೈರಿಂಗ್ ನಡೆದಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ.

ಮಣಿಪುರದಲ್ಲಿ ಗುಂಡಿನ ದಾಳಿ, ನಾಲ್ವರು ನಾಪತ್ತೆ, ಉಗ್ರರ ಕೈವಾಡ ಶಂಕೆ
Image Credit source: India Today
ನಯನಾ ರಾಜೀವ್
|

Updated on: Jan 11, 2024 | 7:49 AM

Share

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ, ಬಿಷ್ಣುಪುರ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಬಿಷ್ಣುಪುರ ಜಿಲ್ಲೆಯ ಕುಂಬಿ ಮತ್ತು ತೌಬಲ್ ಜಿಲ್ಲೆಯ ವಾಂಗೂ ನಡುವೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆದ ಪ್ರದೇಶದ ಬಳಿ ಶುಂಠಿ ಕೊಯ್ಲು ಮಾಡಲು ಹೋದ ನಾಲ್ವರು ನಾಪತ್ತೆಯಾಗಿದ್ದಾರೆ. ಬಂದೂಕುಗಳಿಂದ ಗುಂಡು ಹಾರಿಸುವ ಮೊದಲು ಆರು ಸುತ್ತಿನ ಮಾರ್ಟರ್ ಫೈರಿಂಗ್ ನಡೆದಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ.

ನಾಪತ್ತೆಯಾದ ನಾಲ್ವರನ್ನು ಓಯಿನಮ್ ರೋಮೆನ್ ಮೈತಿ (45), ಅಹಾಂತೇಮ್ ದಾರಾ ಮೈತಿ (56), ತೌಡಮ್ ಇಬೊಮ್ಚಾ ಮೈತಿ (53) ಮತ್ತು ತೌದಮ್ ಆನಂದ್ ಮೈತಿ (27) ಎಂದು ಗುರುತಿಸಲಾಗಿದೆ. ಘಟನೆಯ ನಂತರ ಕುಂಬಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಲಾಗಿದೆ.

ಇದಕ್ಕೂ ಮೊದಲು ಜನವರಿ 1 ರಂದು ತೌಬಲ್‌ನ ಲಿಲಾಂಗ್ ಪ್ರದೇಶದಲ್ಲಿ ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮತ್ತು ಸ್ಥಳೀಯರ ನಡುವೆ ಘರ್ಷಣೆಗಳು ನಡೆದಿತ್ತು . ಪೊಲೀಸರ ಪ್ರಕಾರ, ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ನಡೆದ ನಂತರ ಕಳೆದ ಕೆಲವು ತಿಂಗಳುಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ, ಇದು ಇದುವರೆಗೆ 180 ಜೀವಗಳನ್ನು ಬಲಿ ತೆಗೆದುಕೊಂಡಿದೆ.

ಮತ್ತಷ್ಟು ಓದಿ: Manipur violence: ಮಣಿಪುರದ 5 ಜಿಲ್ಲೆಗಳಲ್ಲಿ ಕರ್ಫ್ಯೂ ವಾಪಸ್, ಇತರ ಜಿಲ್ಲೆಗಳಲ್ಲಿ ಕೆಲವು ಗಂಟೆಗಳ ಕಾಲ ಸಡಿಲಿಕೆ

ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ರಾಜ್ಯದ ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ ಆಯೋಜಿಸಿದ ನಂತರ ಘರ್ಷಣೆಗಳು ಭುಗಿಲೆದ್ದವು. ಹಿಂಸಾಚಾರದ ಮೊದಲು ಕುಕಿ ಗ್ರಾಮಸ್ಥರನ್ನು ಮೀಸಲು ಅರಣ್ಯ ಭೂಮಿಯಿಂದ ಹೊರಹಾಕುವ ಉದ್ವಿಗ್ನತೆ ಉಂಟಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ