AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಎಂಐ ಮುಂದೂಡಿಕೆಗೆ ಕಾಲಮಿತಿ ವಿನಂತಿ: ಕೇಂದ್ರವೇ ಮೊರಾಟೋರಿಯಂ ವಿಚಾರ ನಿರ್ಧರಿಸಬೇಕೆಂದ ಸುಪ್ರೀಂಕೋರ್ಟ್​

ಮುಂದಿನ ಆರು ತಿಂಗಳ ಅವಧಿಗೆ ಅಥವಾ ದೇಶದಲ್ಲಿ ಕೊರೊನಾ ಪರಿಸ್ಥಿತಿ ಸುಧಾರಿಸಿ ಸಹಜಸ್ಥಿತಿ ನೆಲೆಗೊಳ್ಳುವವರೆಗೆ ಮಾರಾಟೋರಿಯಂಗೆ ಅವಕಾಶ ನೀಡಬೇಕು ಎಂದು ಅರ್ಜಿದಾರರು ವಿನಂತಿಸಿದ್ದರು.

ಇಎಂಐ ಮುಂದೂಡಿಕೆಗೆ ಕಾಲಮಿತಿ ವಿನಂತಿ: ಕೇಂದ್ರವೇ ಮೊರಾಟೋರಿಯಂ ವಿಚಾರ ನಿರ್ಧರಿಸಬೇಕೆಂದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್
TV9 Web
| Edited By: |

Updated on:Jun 11, 2021 | 10:28 PM

Share

ದೆಹಲಿ: ಭಾರತದ ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್ ಘೋಷಣೆ ಹಿನ್ನೆಲೆಯಲ್ಲಿ ಸಾಲಗಳ ಮಾಸಿಕ ಕಂತು (ಇಎಂಐ) ಮುಂದೂಡಿಕೆಗೆ ಅವಕಾಶ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​ ಶುಕ್ರವಾರ ವಿಚಾರಣೆ ನಡೆಸಿತು. ಮುಂದಿನ ಆರು ತಿಂಗಳ ಅವಧಿಗೆ ಅಥವಾ ದೇಶದಲ್ಲಿ ಕೊರೊನಾ ಪರಿಸ್ಥಿತಿ ಸುಧಾರಿಸಿ ಸಹಜಸ್ಥಿತಿ ನೆಲೆಗೊಳ್ಳುವವರೆಗೆ ಮಾರಾಟೋರಿಯಂಗೆ ಅವಕಾಶ ನೀಡಬೇಕು ಎಂದು ಅರ್ಜಿದಾರರು ವಿನಂತಿಸಿದ್ದರು.

ಇವೆಲ್ಲವೂ ಸರ್ಕಾರದ ನೀತಿಗೆ ಸಂಬಂಧಿಸಿದ ವಿಷಯಗಳು. ನಾವು ಹಣಕಾಸಿನ ವಿಷಯದಲ್ಲಿ ತಜ್ಞರಲ್ಲ. ಈ ಬಗ್ಗೆ ಈ ಮೊದಲೂ ಒಮ್ಮೆ ಆದೇಶ ನೀಡಿದ್ದೇವೆ. ಹಣಕಾಸಿನ ರಿಲೀಫ್, ಇತರೆ ಕ್ರಮಗಳು ಸರ್ಕಾರದ ವ್ಯಾಪ್ತಿಯಲ್ಲಿವೆ. ಹೀಗಾಗಿ ಭಾರತ ಸರ್ಕಾರವೇ ಪರಿಸ್ಥಿತಿ ಅವಲೋಕಿಸಿ ಸೂಕ್ತ ಆದೇಶ ಹೊರಡಿಸಲಿ ಎಂದು ಹೇಳಿತು.

ಮೊರಾಟೊರಿಯಂ ಕುರಿತು ಸುಪ್ರೀಂಕೋರ್ಟ್ ಯಾವುದೇ ನಿರ್ದೇಶನ ನೀಡುವುದಿಲ್ಲ ಎನ್ನುವ ಮೂಲಕ ಈ ವರ್ಷವೂ ಸಾಲ ಪಾವತಿಗೆ ಹೆಚ್ಚಿನ ಅವಧಿ ನೀಡುವ ಮಾರಾಟೊರಿಯಂ ಘೋಷಿಸಿ ಸುಪ್ರೀಂಕೋರ್ಟ್ ತನ್ನ ನಿಲುವು ವ್ಯಕ್ತಪಡಿಸಿತು. ಮೊರಾಟೊರಿಯಂ ಘೋಷಿಸುವ ಕುರಿತು ಕೇಂದ್ರ ಸರ್ಕಾರ ಈಗ ತನ್ನ ತೀರ್ಮಾನ ಪ್ರಕಟಿಸಬೇಕಿದೆ.

ಕಳೆದ ವರ್ಷ ಕೇಂದ್ರ ಸರ್ಕಾರವು ದೇಶವ್ಯಾಪಿ ಲಾಕ್​ಡೌನ್ ಘೋಷಿಸಿದ ನಂತರ ರಿಸರ್ವ್​ ಬ್ಯಾಂಕ್ ಸಾಲ ಮರುಪಾವತಿಗೆ ಅವಧಿ ರಿಯಾಯ್ತಿ ನೀಡುವ ಮೊರಾಟೊರಿಯಂ ಘೋಷಿಸಿತ್ತು. ಗೃಹ ಸಾಲ ಸೇರಿದಂತೆ ಎಲ್ಲ ರೀತಿಯ ಸಾಲಗಳ ಮರುಪಾವತಿಗೆ ಕಾಲಾವಕಾಶ ನೀಡಲಾಗಿತ್ತು. ಈ ವರ್ಷವು ಇಂಥದ್ದೋ ಅವಕಾಶ ನೀಡಬೇಕೆಂದು ಬೇಡಿಕೆ ವ್ಯಕ್ತವಾಗುತ್ತಿದೆ. ಸುಪ್ರೀಂಕೋರ್ಟ್ ಅಂಗಳದಿಂದ ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳಕ್ಕೆ ಬಿದ್ದಿದೆ. ಕೇಂದ್ರ ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

(Fresh Loan Moratorium Request Rejected by Supreme Court Govt of India have to decide now)

ಇದನ್ನೂ ಓದಿ: ಗಾಜಿನ ಮನೆಯಲ್ಲಿರುವವರು ಕಲ್ಲು ಹೊಡೆಯಬಾರದು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪರಮ್​ಸಿಂಗ್​ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ಇದನ್ನೂ ಓದಿ: ಎನ್ರಿಕಾ ಲೆಕ್ಸಿ ಪ್ರಕರಣ: ₹10 ಕೋಟಿ ಪರಿಹಾರ ನೀಡಿದ ಇಟಲಿ; ಇಟಾಲಿಯನ್ ನೌಕಾಪಡೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ರದ್ದು ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

Published On - 10:28 pm, Fri, 11 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ