AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pegasus Spyware: ನ್ಯೂಯಾರ್ಕ್​ ಟೈಮ್ಸ್ ವರದಿ ಬೆನ್ನಲ್ಲೇ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ವಕೀಲ; ಎಫ್​ಐಆರ್​ ದಾಖಲಿಸಲು ಆಗ್ರಹ

ನಿನ್ನೆ ನ್ಯೂಯಾರ್ಕ್​ ಟೈಮ್ಸ್ ವರದಿಯೊಂದನ್ನು ಮಾಡಿದೆ. The Battle for the World’s Most Powerful Cyberweapon ಎಂಬ ಹೆಡ್​​ಲೈನ್​​ನಲ್ಲಿ ವರದಿ ಪ್ರಕಟಿಸಿದೆ. 2017ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಸ್ರೇಲ್​ಗೆ ಭೇಟಿ ಕೊಟ್ಟಿದ್ದ ವೇಳೆ ನಡೆದ ಒಪ್ಪಂದದ ಭಾಗವಾಗಿ ಪೆಗಾಸಸ್​ ಸ್ಪೈವೇರ್​ ಖರೀದಿಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

Pegasus Spyware: ನ್ಯೂಯಾರ್ಕ್​ ಟೈಮ್ಸ್ ವರದಿ ಬೆನ್ನಲ್ಲೇ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ವಕೀಲ; ಎಫ್​ಐಆರ್​ ದಾಖಲಿಸಲು ಆಗ್ರಹ
ಸುಪ್ರೀಂಕೋರ್ಟ್​
TV9 Web
| Updated By: Lakshmi Hegde|

Updated on: Jan 30, 2022 | 3:11 PM

Share

2017ರಲ್ಲಿ ಕೇಂದ್ರ ಸರ್ಕಾರ ಇಸ್ರೇಲ್​​ನೊಂದಿಗೆ ಮಾಡಿಕೊಂಡ ಒಂದು ಆಧುನಿಕ ಶಸ್ತ್ರಾಸ್ತ್ರಗಳ ಒಪ್ಪಂದದ ಭಾಗವಾಗಿ ಪೆಗಾಸಸ್​ ಸ್ಪೈವೇರ್ (Pegasus spyware)​​ನ್ನು ಖರೀದಿ ಮಾಡಿತ್ತು ಎಂದು ನಿನ್ನೆ ನ್ಯೂಯಾರ್ಕ್​ ಟೈಮ್ಸ್​ ವರದಿ ಮಾಡಿದ ಬೆನ್ನಲ್ಲೇ, ಹಿರಿಯ ವಕೀಲರೊಬ್ಬರು ಸುಪ್ರೀಂಕೋರ್ಟ್​ಗೆ ಹೊಸದಾಗಿ ಅರ್ಜಿ ಸಲ್ಲಿಸಿ, ಈ ವಿಚಾರವನ್ನು ಸುಪ್ರೀಂಕೋರ್ಟ್ ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಹೇಳಿದ್ದಾರೆ. ಅಂದಹಾಗೇ, ಈಗ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಹಿರಿಯ ವಕೀಲರ ಹೆಸರು ಎಂ.ಎಲ್​. ಶರ್ಮಾ ಎಂದಾಗಿದ್ದು, ಪೆಗಾಸಸ್​​ ಸ್ಪೈವೇರ್ ಖರೀದಿಯಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳು, ಆಡಳಿತಗಳ ವಿರುದ್ಧ ಕೂಡಲೇ ಎಫ್​ಐಆರ್​ ದಾಖಲು ಮಾಡಬೇಕು. ತನಿಖೆಯೂ ಪ್ರಾರಂಭವಾಗಬೇಕು ಎಂದೂ ಆಗ್ರಹಿಸಿದ್ದಾರೆ. 

ಈ ಪೆಗಾಸಸ್​ ಸ್ಪೈವೇರ್​​  2021ರಲ್ಲಿ ಭರ್ಜರಿ ಸುದ್ದಿ ಮಾಡಿತ್ತು. ಭಾರತದಲ್ಲಿ ಇಸ್ರೇಲಿ ಮೂಲದ ಪೆಗಾಸಸ್​ ಬಳಸಿ, ರಾಜಕಾರಣಿಗಳು, ಪತ್ರಕರ್ತರು, ಮತ್ತಿತರ ಗಣ್ಯರೆಲ್ಲ ಸೇರಿ 300ಕ್ಕೂ ಹೆಚ್ಚು ಜನರ ಫೋನ್​ ಟ್ಯಾಪ್​ ಮಾಡಲಾಗಿದೆ ಎಂದು ದಿ ವೈರ್​ ಪ್ರಕಟಿಸಿತ್ತು. ಹಾಗೇ ಬಹುಮುಖ್ಯವಾಗಿ ಯಾರೆಲ್ಲರ ಫೋನ್​ ಟ್ಯಾಪ್​ ಆಗಿದೆ ಎಂಬ ಹೆಸರುಗಳನ್ನೂ ಬಹಿರಂಗಪಡಿಸಲಾಗಿತ್ತು. ಅದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​ ಸೇರಿ ಅನೇಕರ ಹೆಸರುಗಳು ಇದ್ದವು.  ಪೆಗಾಸಸ್​ ಸ್ನೂಪಿಂಗ್​ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್​​ನಿಂದ ಸಮಿತಿ ರಚಿಸಲಾಗಿದ್ದು, ತನಿಖೆ ನಡೆಯುತ್ತಲೂ ಇದೆ.

ಇದೆಲ್ಲದರ ಮಧ್ಯೆ ನಿನ್ನೆ ನ್ಯೂಯಾರ್ಕ್​ ಟೈಮ್ಸ್ ವರದಿಯೊಂದನ್ನು ಮಾಡಿದೆ. The Battle for the World’s Most Powerful Cyberweapon ಎಂಬ ಹೆಡ್​​ಲೈನ್​​ನಲ್ಲಿ ವರದಿ ಪ್ರಕಟಿಸಿದೆ. 2017ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಸ್ರೇಲ್​ಗೆ ಭೇಟಿ ಕೊಟ್ಟಿದ್ದರು. ಇಸ್ರೇಲ್​ಗೆ ಭೇಟಿ ನೀಡಿದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಎಂಬ ಹೆಗ್ಗಳಿಕೆಯೊಂದಿಗೆ ಇತಿಹಾಸ ಸೃಷ್ಟಿಸಿದರು. ಇದೇ ಭೇಟಿ ವೇಳೆ ಭಾರತ -ಇಸ್ರೇಲ್​ ನಡುವೆ 2 ಬಿಲಿಯನ್ ಯುಎಸ್​​ ಡಾಲರ್​ ಮೊತ್ತದ ರಕ್ಷಣಾ ಒಪ್ಪಂದ ನಡೆಯಿತು. ಅದಕ್ಕೆ ಎರಡೂ ದೇಶಗಳು ಸಹಿ ಹಾಕಿದವು. ಇದೇ ವೇಳೆ ಪೆಗಾಸಸ್​ ಸ್ಪೈವೇರ್​​ನ್ನು ಕೂಡ ಭಾರತದ ಕೇಂದ್ರ ಸರ್ಕಾರ ಇಸ್ರೇಲ್​​ನಿಂದ ಖರೀದಿ ಮಾಡಿದೆ. ಈ ಸ್ಪೈವೇರ್​​ನ್ನು ಎನ್ಎಸ್​ಒ ಎಂಬ ಇಸ್ರೇಲ್​ ಸಂಸ್ಥೆ ಉತ್ಪಾದಿಸಿದ್ದು, ಇದು ಮಿಲಿಟರಿ ದರ್ಜೆಯ ಸಾಫ್ಟ್​ವೇರ್​ ಆಗಿದೆ ಎಂದು ವಿವರಿಸಿದೆ.

ಪೆಗಾಸಸ್​ ಬಗ್ಗೆ ಹೀಗೊಂದು ವರದಿ ಹೊರಬೀಳುತ್ತಿದ್ದಂತೆ ಪ್ರತಿಪಕ್ಷಗಳೂ ಕೂಡ ಮತ್ತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿವೆ. ನಿನ್ನೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ ಸೇರಿ ಅನೇಕರು ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶದ್ರೋಹವನ್ನು ಎಸಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಕನ್ನಡಿಗನ ಕಥೆಯಲ್ಲಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್​? ಅಕ್ಕಿ ಪಾಲಿಗೆ ಮತ್ತೊಂದು ಬಯೋಪಿಕ್

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?