AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನಂದಿಗ್ರಾಮದ ಹಿನ್ನಡೆ ಬೆನ್ನಲ್ಲೇ ಉಪಚುನಾವಣೆಯಿಂದ ಟಿಎಂಸಿ ಅಭ್ಯರ್ಥಿ ಔಟ್!

ಪಶ್ಚಿಮ ಬಂಗಾಳ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ನಂದಿಗ್ರಾಮ ಕ್ಷೇತ್ರದಲ್ಲಿ ಎದುರಾದ ಹಿನ್ನಡೆಯ ಬೆನ್ನಲ್ಲೇ ಇದೀಗ ರೆಜಿನಗರ ವಿಧಾನಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ರಬಿಯುಲ್ ಚೌಧರಿ ಸ್ಪರ್ಧೆಯಿಂದ ಹಿಂದೆ ಸರಿದು ನಾಮಪತ್ರ ಹಿಂಪಡೆದಿದ್ದಾರೆ. ಈ ಬೆಳವಣಿಗೆ ಪಶ್ಚಿಮ ಬಂಗಾಳದ ರಾಜಕೀಯ ಅಂಗಳದಲ್ಲಿ ಕಾವು ಹೆಚ್ಚಿಸಿದೆ.

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನಂದಿಗ್ರಾಮದ ಹಿನ್ನಡೆ ಬೆನ್ನಲ್ಲೇ ಉಪಚುನಾವಣೆಯಿಂದ ಟಿಎಂಸಿ ಅಭ್ಯರ್ಥಿ ಔಟ್!
ಮಮತಾ ಬ್ಯಾನರ್ಜಿ ಮತ್ತು ರಬಿಯುಲ್ ಚೌಧರಿ
ಭಾವನಾ ಹೆಗಡೆ
|

Updated on: Sep 19, 2026 | 2:00 PM

Share

ಮುಖ್ಯಾಂಶಗಳು

  • ನಂದಿಗ್ರಾಮದ ಬಳಿಕ ರೆಜಿನಗರದ ಟಿಎಂಸಿ ಅಭ್ಯರ್ಥಿ ರಬಿಯುಲ್ ಚೌಧರಿ ಕಣದಿಂದ ಹೊರಕ್ಕೆ.
  • ಪಶ್ಚಿಮ ಬಂಗಾಳ ಉಪಚುನಾವಣೆ ಹೊತ್ತಲ್ಲೇ ಸಿಎಂ ಮಮತಾ ಬ್ಯಾನರ್ಜಿಗೆ ಸರಣಿ ಆಘಾತ.
  • ಆಂತರಿಕ ಭಿನ್ನಾಭಿಪ್ರಾಯದಿಂದ ಟಿಎಂಸಿ ಅಭ್ಯರ್ಥಿಗಳ ನಾಮಪತ್ರ ಹಿಂತೆಗೆತ, ವಿಪಕ್ಷಗಳಿಂದ ವಾಗ್ದಾಳಿ.

ಕೋಲ್ಕತ್ತಾ, ಸೆಪ್ಟೆಂಬರ್ 19: ಪಶ್ಚಿಮ ಬಂಗಾಳದ ಉಪಚುನಾವಣೆಯ ಕಣದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸಾಲು ಸಾಲು ಹಿನ್ನಡೆಗಳು ಎದುರಾಗುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ನಂದಿಗ್ರಾಮ ಕ್ಷೇತ್ರದಲ್ಲಿ ಎದುರಾದ ಹಿನ್ನಡೆಯ ಬೆನ್ನಲ್ಲೇ, ಇದೀಗ ರೆಜಿನಗರ ವಿಧಾನಸಭಾ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ರಬಿಯುಲ್ ಚೌಧರಿ ಚುನಾವಣೆಯಿಂದ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಈ ದಿಢೀರ್ ಬೆಳವಣಿಗೆಗೆ ಕಾರಣವೇನು?

ಸ್ಥಳೀಯ ಮಟ್ಟದಲ್ಲಿ ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಹಾಗೂ ನಾಯಕತ್ವದ ನಿರ್ಧಾರಗಳ ವಿರುದ್ಧ ಕಾರ್ಯಕರ್ತರಲ್ಲಿ ಉಂಟಾಗಿರುವ ತೀವ್ರ ಅಸಮಾಧಾನವೇ ಈ ದಿಢೀರ್ ಬೆಳವಣಿಗೆಗೆ ಮುಖ್ಯ ಕಾರಣ ಎನ್ನಲಾಗಿದೆ. ಉಪಚುನಾವಣೆ ಹತ್ತಿರವಾಗುತ್ತಿರುವ ವೇಳೆಯಲ್ಲೇ ಪ್ರಮುಖ ಅಭ್ಯರ್ಥಿಗಳು ಒಂದಾದ ಮೇಲೊಂದರಂತೆ ಕಣದಿಂದ ಹಿಂದೆ ಸರಿಯುತ್ತಿರುವುದು ತೃಣಮೂಲ ಕಾಂಗ್ರೆಸ್ ಪಕ್ಷದ ವರಿಷ್ಠರಲ್ಲಿ ತೀವ್ರ ಆತಂಕ ಮೂಡಿಸಿದೆ.

ವಿಪಕ್ಷಗಳ ವಾಗ್ದಾಳಿ

ಈ ಬೆಳವಣಿಗೆಯನ್ನು ಆಧಾರವಾಗಿಟ್ಟುಕೊಂಡು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೇಸ್, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ” ಕಾಂಗ್ರೆಸ್ ಪಕ್ಷದ ಮೇಲಿನ ಸಾರ್ವಜನಿಕರ ಹಾಗೂ ಸ್ವತಃ ಪಕ್ಷದ ನಾಯಕರ ನಂಬಿಕೆ ಸಂಪೂರ್ಣವಾಗಿ ಕುಸಿದಿದೆ. ಮಮತಾ ಬ್ಯಾನರ್ಜಿ ಅವರ ಏಕಪಕ್ಷೀಯ ಆಡಳಿತ ವೈಖರಿಯಿಂದಾಗಿ ಅವರದೇ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ” ಎಂದು ವಿಪಕ್ಷ ನಾಯಕರು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ ‘ಹೆದರಿ ತಲೆಬಾಗಲ್ಲ, ತಿರುಗಿಬೀಳುತ್ತೇವೆ’; ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಕ್ಷದ ವರಿಷ್ಠರ ತುರ್ತು ಸಭೆ

ಒಂದೆಡೆ ನಂದಿಗ್ರಾಮ, ಮತ್ತೊಂದೆಡೆ ರೆಜಿನಗರ ಕ್ಷೇತ್ರದಲ್ಲಿ ಉಂಟಾಗಿರುವ ಹಿನ್ನಡೆಯಿಂದ ಎಚ್ಚೆತ್ತುಕೊಂಡಿರುವ ಟಿಎಂಸಿ ಹೈಕಮಾಂಡ್, ಪರಿಸ್ಥಿತಿಯನ್ನು ತಿಳಿಗೊಳಿಸಲು ತುರ್ತು ಸಭೆ ಕರೆದಿದೆ. ಉಪಚುನಾವಣೆಯಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಅಥವಾ ಪರ್ಯಾಯ ತಂತ್ರ ರೂಪಿಸುವ ಕುರಿತು ಸಮಾಲೋಚನೆ ನಡೆಸಲಾಗುತ್ತಿದೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಎದುರಾಗಿರುವ ಈ ಬೆಳವಣಿಗೆ ಪಶ್ಚಿಮ ಬಂಗಾಳದ ರಾಜಕೀಯ ಅಂಗಳದಲ್ಲಿ ಕಾವು ಹೆಚ್ಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ