AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಪ್ವಾರ: ಗಡಿ ನಿಯಂತ್ರಣ ರೇಖೆ ಬಳಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ

ಆಪರೇಷನ್ ಸಿಂಧೂರ್(Operation Sindoor) ಬಳಿಕ ಮತ್ತೆ ಗಡಿಯಲ್ಲಿ ಪಾಕ್ ಸೇನೆಯ ಉಪಟಳ ಹೆಚ್ಚಿದೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಹಾಗೂ ಪಾಕ್​ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಆದರೆ ಈ ಘಟನೆ ಕನದ ವಿರಾಮ ಉಲ್ಲಂಘನೆಗೆ ಸಮವಲ್ಲ ಎಂದು ಸೇನೆ ಹೇಳಿದೆ. ಎಲ್‌ಒಸಿ ಉದ್ದಕ್ಕೂ ಎರಡೂ ಕಡೆಯಿಂದ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ಚಕಮಕಿ ನಡೆದಿದ್ದು, ಇದು ಕದನ ವಿರಾಮ ಉಲ್ಲಂಘನೆಯಲ್ಲ ಎಂದು ಮೂಲಗಳು ತಿಳಿಸಿವೆ.

ಕುಪ್ವಾರ: ಗಡಿ ನಿಯಂತ್ರಣ ರೇಖೆ ಬಳಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ
ಭಾರತೀಯ ಸೇನೆ
ನಯನಾ ರಾಜೀವ್
|

Updated on: Sep 21, 2025 | 10:53 AM

Share

ಕುಪ್ವಾರ, ಸೆಪ್ಟೆಂಬರ್ 21: ಆಪರೇಷನ್ ಸಿಂಧೂರ್(Operation Sindoor) ಬಳಿಕ ಮತ್ತೆ ಗಡಿಯಲ್ಲಿ ಪಾಕ್ ಸೇನೆಯ ಉಪಟಳ ಹೆಚ್ಚಿದೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಹಾಗೂ ಪಾಕ್​ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಆದರೆ ಈ ಘಟನೆ ಕನದ ವಿರಾಮ ಉಲ್ಲಂಘನೆಗೆ ಸಮವಲ್ಲ ಎಂದು ಸೇನೆ ಹೇಳಿದೆ. ಎಲ್‌ಒಸಿ ಉದ್ದಕ್ಕೂ ಎರಡೂ ಕಡೆಯಿಂದ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ಚಕಮಕಿ ನಡೆದಿದ್ದು, ಇದು ಕದನ ವಿರಾಮ ಉಲ್ಲಂಘನೆಯಲ್ಲ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಸಂಜೆ 6.15 ರ ಸುಮಾರಿಗೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಮತ್ತು ಸುಮಾರು ಒಂದು ಗಂಟೆ ಕಾಲ ನಿರಂತರವಾಗಿ ಮುಂದುವರೆಯಿತು, ನಂತದ ಸದ್ದಡಗಿತು. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಇಲ್ಲಿಯವರೆಗೆ, ಸೇನೆಯು ಘಟನೆಯ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಭಾರತ ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದಾಗಿನಿಂದ ಮೇ ತಿಂಗಳಲ್ಲಿ ಉದ್ವಿಗ್ನತೆ ಭುಗಿಲೆದ್ದ ತಿಂಗಳುಗಳ ನಂತರ ಗುಂಡಿನ ಚಕಮಕಿ ನಡೆದಿದೆ . ನಾಲ್ಕು ದಿನಗಳ ಸಂಘರ್ಷವು ಎರಡೂ ಕಡೆಯವರು ಕದನ ವಿರಾಮ ಒಪ್ಪಂದಕ್ಕೆ ಬರುವುದರೊಂದಿಗೆ ತ್ವರಿತವಾಗಿ ಕೊನೆಗೊಂಡಿತು.

ಮತ್ತಷ್ಟು ಓದಿ: ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಹೇಳಿಕೆ

ಸಂಘರ್ಷದ ಸಮಯದಲ್ಲಿ ಪಾಕಿಸ್ತಾನದಲ್ಲಿ ಹಲವಾರು ವಾಯುನೆಲೆಗಳು ಮತ್ತು ಒಂಬತ್ತು ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳು ನಾಶವಾದರೂ, ಭಾರತಕ್ಕೆ ಯಾವುದೇ ಗಮನಾರ್ಹ ಹಾನಿಯಾಗಿಲ್ಲ. ಕೊನೆಯ ಬಾರಿಗೆ ಎರಡೂ ದೇಶಗಳ ನಡುವೆ ಮೇ 10, 2025 ರಂದು ಕದನ ವಿರಾಮ ಉಲ್ಲಂಘನೆ ಸಂಭವಿಸಿದೆ.

ಆಗಸ್ಟ್ 5 ರಂದು, ಎರಡೂ ದೇಶಗಳ ನಡುವೆ ಕದನ ವಿರಾಮ ಉಲ್ಲಂಘನೆಯ ಕೆಲವು ವರದಿಗಳು ಹೊರಬಂದವು. ಆದಾಗ್ಯೂ, ಭಾರತೀಯ ಸೇನೆಯು ಪಾಕಿಸ್ತಾನದಿಂದ ಯಾವುದೇ ಕದನ ವಿರಾಮ ಉಲ್ಲಂಘನೆಯನ್ನು ನಿರಾಕರಿಸಿತು. ನೆರೆಯ ದೇಶದಿಂದ ಯಾವುದೇ ಅಪ್ರಚೋದಿತ ಗುಂಡಿನ ದಾಳಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಸೇನೆಯು ಹೇಳಿಕೆಯಲ್ಲಿ ಹೀಗೆ ಹೇಳಿದೆ.

ಪೂಂಚ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆಯ ಕುರಿತು ಕೆಲವು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ವರದಿಗಳು ಬಂದಿವೆ. ನಿಯಂತ್ರಣ ರೇಖೆಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ, ವಾಯುಪಡೆಯ ಮಾಜಿ ಸೈನಿಕರಿಗೆ ವಾಯುಪಡೆಯ ಮುಖ್ಯಸ್ಥರಾದ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್, ಭಯೋತ್ಪಾದನಾ ವಿರೋಧಿ ಉದ್ದೇಶಗಳನ್ನು ಸಾಧಿಸಿದ ತಕ್ಷಣ ಆಪರೇಷನ್ ಸಿಂಧೂರ್ ಕೊನೆಗೊಂಡಿತು ಎಂದು ಹೇಳಿದರು.

ನಾವು ಯುದ್ಧವನ್ನು ಬಹಳ ಬೇಗನೆ ನಿಲ್ಲಿಸಿದೆವು. ಹೌದು, ಅವರು ನಿಸ್ಸಂದೇಹವಾಗಿ ಹಿಂದೆ ಸರಿದರು, ಆದರೆ ನಮ್ಮ ಉದ್ದೇಶಗಳೇನು? ನಮ್ಮ ಉದ್ದೇಶ ಭಯೋತ್ಪಾದನೆಯ ವಿರೋಧಿಯಾಗಿತ್ತು. ನಾವು ಅವರ ಮೇಲೆ ದಾಳಿ ಮಾಡಬೇಕಾಗಿತ್ತು. ನಾವು ಹಾಗೆ ಮಾಡಿದ್ದೆವು. ಹಾಗಾದರೆ ನಮ್ಮ ಉದ್ದೇಶಗಳು ಈಡೇರಿದ್ದರೆ, ನಾವು ಸಂಘರ್ಷವನ್ನು ಏಕೆ ಕೊನೆಗೊಳಿಸಬಾರದು ಎಂದು ಪ್ರಶ್ನಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ