AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಮುಕೇಶ್ ಅಂಬಾನಿ ಕುಟುಂಬಕ್ಕೆ ಮತ್ತೆ ಬೆದರಿಕೆ ; ಮೂರು ಗಂಟೆಯಲ್ಲಿ ಕೊಲೆ ಮಾಡುವುದಾಗಿ ಫೋನ್ ಕರೆ

Mukesh Ambani ಸೋಮವಾರ ಒಟ್ಟು ಎಂಟು ಬೆದರಿಕೆ ಕರೆಗಳು ಬಂದಿವೆ ಎಂದು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಅಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Breaking ಮುಕೇಶ್ ಅಂಬಾನಿ ಕುಟುಂಬಕ್ಕೆ ಮತ್ತೆ ಬೆದರಿಕೆ ; ಮೂರು ಗಂಟೆಯಲ್ಲಿ ಕೊಲೆ ಮಾಡುವುದಾಗಿ ಫೋನ್ ಕರೆ
ಮುಖೇಶ್ ಅಂಬಾನಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 15, 2022 | 1:06 PM

Share

ಉದ್ಯಮಿ ಮುಖೇಶ್ ಅಂಬಾನಿ (Mukesh Ambani) ಅವರ ಕುಟುಂಬಕ್ಕೆ ಸೋಮವಾರ ಬೆದರಿಕೆ ಕರೆಗಳು ಬಂದಿವೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ (Reliance Foundation Hospital)  ಡಿಸ್ಪ್ಲೇ ಸಂಖ್ಯೆಗೆ ಬೆದರಿಕೆ ಕರೆ ಮಾಡಲಾಗಿದೆ ಎಂದು ಮುಂಬೈ ಪೊಲೀಸರು (Mumbai police) ತಿಳಿಸಿದ್ದಾರೆ. ಸೋಮವಾರ ಒಟ್ಟು ಎಂಟು ಬೆದರಿಕೆ ಕರೆಗಳು ಬಂದಿವೆ ಎಂದು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಅಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾವು ಆಸ್ಪತ್ರೆಯವರಿಂದ ದೂರು ಸ್ವೀಕರಿಸಿದ್ದು ಅದನ್ನು ಪರಿಶೀಲಿಸುತ್ತಿದ್ದೇವೆ. ಆಸ್ಪತ್ರೆಯ ಡಿಸ್ಪ್ಲೇ ನಂಬರ್‌ಗೆ ಕರೆ ಮಾಡಲಾಗಿದೆ ಎಂದು ತೋರುತ್ತಿದೆ ಎಂದು ಮುಂಬೈ ಪೊಲೀಸರ ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಮಿಡ್ ಡೇ ವರದಿ ಮಾಡಿದೆ. ಮೂರು ಗಂಟೆಯೊಳಗೆ ಇಡೀ ಕುಟುಂಬವನ್ನು ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ

ಮುಖೇಶ್  ಅಂಬಾನಿ ಅವರಿಗೆ ಜೀವ ಬೆದರಿಕೆ ನೀಡುವ ಒಟ್ಟು  ಎಂಟು ಕರೆಗಳು ಬಂದಿವೆ. ಮುಂಬೈ ಪೊಲೀಸರಿಗೆ  ನಾನು ದೂರು ನೀಡಿದ್ದೇನೆ ಎಂದು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಸಿಇಒ ಡಾ ತರಂಗ್ ಗಿಯಾನ್ ಚಂದಾನಿ ಹೇಳಿದ್ದಾರೆ. ಇದಕ್ಕಿಂತ  ಮುನ್ನ  2021ರಲ್ಲಿ  ಅಂಬಾನಿ ಮನೆಯ ಬಳಿ ಸ್ಫೋಟಕವಿರಿಸಿದ್ದ ಎಸ್​ಯುವಿ ಕಾರು ಪತ್ತೆಯಾಗಿತ್ತು. ಆ ಕಾರಿನೊಳಗೆ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಅಂಬಾನಿ ಕುಟುಂಬಕ್ಕೆ ಬೆದರಿಕೆಯೊಡ್ಡಿರುವ ಪತ್ರವೂ ಇತ್ತು. ಈ ಬೆದರಿಕೆ ಹಿನ್ನಲೆಯಲ್ಲಿ ಮುಖೇಶ್ ಅವರಿಗೆ  ಜೆಡ್ ಪ್ಲಸ್ ಸುರಕ್ಷಾ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ. ಅದಾಗ್ಯೂ, ಇದರ ಖರ್ಚನ್ನು ಅಂಬಾನಿ ಅವರೇ ಭರಿಸುತ್ತಿದ್ದಾರೆ. ಅಂಬಾನಿ ಮತ್ತು ಅವರ ಕುಟುಂಬಕ್ಕೆ ನೀಡಿರುವ ಜೆಡ್ ಪ್ಲಸ್ ಸುರಕ್ಷಾ ವ್ಯವಸ್ಥೆಯನ್ನು ಹಿಂಪಡೆಯಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು 2020 ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ತಳ್ಳಿ ಹಾಕಿತ್ತು.

ಸಾಮಾನ್ಯವಾಗಿ ಸುರಕ್ಷಾ ವ್ಯವಸ್ಥೆಯು X, Y, Y-plus, Z, Z-plus ನಿಂದ SPG (Special Protection Group) ಹೀಗಿರುತ್ತದೆ. ಈ ರೀತಿಯ ಸುರಕ್ಷಾ ವ್ಯವಸ್ಥೆಯಲ್ಲಿ ವ್ಯಕ್ತಿಯೊಬ್ಬನಿಗೆ 55 ಮಂದಿ ಭದ್ರತಾ ಸಿಬ್ಬಂದಿಗಳಿರುತ್ತಾರೆ. ವಿಐಪಿ ಮತ್ತು ವಿವಿಐಪಿಗಳಿಗೆ ಜೆಡ್ ಪ್ಲಸ್ ಸುರಕ್ಷಾವ್ಯವಸ್ಥೆ ಕಲ್ಪಿಸಲಾಗುತ್ತಿದ್ದು ಎನ್ಎಸ್ ಜಿಗಳು ಭದ್ರತೆಗಿರುತ್ತಾರೆ. ಜೆಡ್ ಕೆಟಗರಿಯಲ್ಲಿ 22 ಭದ್ರತಾ ಸಿಬ್ಬಂದಿಗಳಿರುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಜೆಡ್ ಪ್ಲಸ್ ಮತ್ತು ಜೆಡ್ ಸುರಕ್ಷಾ ವ್ಯವಸ್ಥೆಯಲ್ಲಿ ಬೆಂಗಾವಲು ವಾಹನಗಳೂ ಇರುತ್ತವೆ.

ಮತ್ತಷ್ಟು  ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Mon, 15 August 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು