AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.1 ರಿಂದ ಡ್ರೈವಿಂಗ್ ಲೈಸೆನ್ಸ್, ಆಧಾರ್ ಸಂಖ್ಯೆ ಬದಲಾವಣೆ, ಸರ್ಕಾರಿ ಉದ್ಯೋಗ ಪಡೆಯಲು ಜನನ ಪ್ರಮಾಣಪತ್ರ ಒಂದೇ ದಾಖಲೆ

ಅಕ್ಟೋಬರ್ 1ರಿಂದ, ಶಿಕ್ಷಣ ಸಂಸ್ಥೆಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯುವುದು, ಮತದಾರರ ಪಟ್ಟಿ ತಿದ್ದುಪಡಿ, ಆಧಾರ್ ಸಂಖ್ಯೆ, ಮದುವೆ ನೋಂದಣಿ, ಸರ್ಕಾರಿ ಉದ್ಯೋಗ ನೇಮಕಾತಿ ಇತ್ಯಾದಿ ಸೇರಿದಂತೆ ಹಲವಾರು ನಿರ್ಣಾಯಕ ಸೇವೆಗಳನ್ನು ಪಡೆಯಲು ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆಯಾಗಿರುತ್ತದೆ.

ಅ.1 ರಿಂದ ಡ್ರೈವಿಂಗ್ ಲೈಸೆನ್ಸ್, ಆಧಾರ್ ಸಂಖ್ಯೆ ಬದಲಾವಣೆ, ಸರ್ಕಾರಿ ಉದ್ಯೋಗ ಪಡೆಯಲು ಜನನ ಪ್ರಮಾಣಪತ್ರ ಒಂದೇ ದಾಖಲೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 15, 2023 | 2:01 PM

Share

ದೆಹಲಿ. ಸೆ.15: ಅಕ್ಟೋಬರ್ 1ರಿಂದ, ಶಿಕ್ಷಣ ಸಂಸ್ಥೆಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯುವುದು, ಮತದಾರರ ಪಟ್ಟಿ ತಿದ್ದುಪಡಿ, ಆಧಾರ್ ಸಂಖ್ಯೆ, ಮದುವೆ ನೋಂದಣಿ, ಸರ್ಕಾರಿ ಉದ್ಯೋಗ ನೇಮಕಾತಿ ಇತ್ಯಾದಿ ಸೇರಿದಂತೆ ಹಲವಾರು ನಿರ್ಣಾಯಕ ಸೇವೆಗಳನ್ನು ಪಡೆಯಲು ಜನನ ಪ್ರಮಾಣಪತ್ರವನ್ನು (birth certificate)ಒಂದೇ ದಾಖಲೆಯಾಗಿರುತ್ತದೆ. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯಿದೆ, 2023ರ ಅನುಷ್ಠಾನವನ್ನು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ. ಇದು ಜನನ ಮತ್ತು ಮರಣಗಳ ಡೇಟಾಬೇಸ್ ರಚಿಸಲು ಸಹಾಯ ಮಾಡುತ್ತದೆ ಮತ್ತು ಸಾರ್ವಜನಿಕ ಸೇವೆಗಳು, ಸಾಮಾಜಿಕ ಪ್ರಯೋಜನಗಳು ಹಾಗೂ ಡಿಜಿಟಲ್ ನೋಂದಣಿಯ, ಪಾರದರ್ಶಕವಾದ ದಾಖಲೆಗಳನ್ನು ನೀಡುವ ಸಲುವಾಗಿ ಈ ಕ್ರಮವನ್ನು ತರಲಾಗಿದೆ.

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯಿದೆ, 2023 (2023 ರ 20) ನ ಕ್ರಮ 1 ಮತ್ತು ಉಪ-ಕ್ರಮ (2) ರ ಆಧಾರದ ಮೇಲೆ, ಈ ಕಾಯಿದೆ ಅನುಷ್ಠಾನವನ್ನು ತರಲಾಗುವುದು. ಜತೆಗೆ ಈ ಪ್ರಕ್ರಿಯೆಗೆ ನೂತನ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಹೇಳಿದೆ. ಕೇಂದ್ರ ಸರ್ಕಾರವು ಅಕ್ಟೋಬರ್ 1ರಿಂದ ಈ ಕಾಯಿದೆ ಜಾರಿಗೆ ಬರಲಿದೆ ಎಂದು ಹೇಳಿದೆ.

ಇನ್ನು ಈ ಮಸೂದೆಯನ್ನು ಸಂಸತ್ತಿನ ಮಾನ್ಸೂನ್ ಅಧಿವೇಶನದ ಕೊನೆ ದಿನದಂದು ಎರಡೂ ಸದನಗಳು ಅಂಗೀಕರಿಸಿತ್ತು. ರಾಜ್ಯಸಭೆಯು ಆಗಸ್ಟ್ 7 ರಂದು ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಿದೆ ಮತ್ತು ಲೋಕಸಭೆಯು ಆಗಸ್ಟ್ 1 ರಂದು ಅಂಗೀಕರಿಸಿದೆ.

ಇದನ್ನೂ ಓದಿ:ಲೋಕಸಭೆಯಲ್ಲಿ ಜನನ ಪ್ರಮಾಣಪತ್ರವನ್ನು ಸರ್ವ ಉದ್ದೇಶಗಳಿಗೆ ಏಕೈಕ ದಾಖಲೆಯಾಗಿ ಬಳಸಲು ಅನುಮತಿಸುವ ಮಸೂದೆ ಮಂಡನೆ

ಈ ಕಾಯಿದೆಯ ಪ್ರಮುಖ ಅಂಶಗಳು:

1. ಈ ಕಾಯಿದೆಯು ಜನನ ಮತ್ತು ಮರಣಗಳ ರಾಷ್ಟ್ರೀಯ ನೋಂದಣಿಯನ್ನು ಮೇಲ್ವಿಚಾರಣೆ ಮಾಡಲು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾಗೆ ಅಧಿಕಾರವನ್ನು ನೀಡುತ್ತದೆ. ರಾಜ್ಯದಿಂದ ನೇಮಕಗೊಂಡ ಮುಖ್ಯ ರಿಜಿಸ್ಟ್ರಾರ್‌ಗಳು ಮತ್ತು ರಿಜಿಸ್ಟ್ರಾರ್‌ಗಳು ಈ ರಾಷ್ಟ್ರೀಯ ಡೇಟಾಬೇಸ್‌ಗೆ ಡೇಟಾವನ್ನು ನೀಡುತ್ತಾರೆ. ಆದರೆ ಮುಖ್ಯ ರಿಜಿಸ್ಟ್ರಾರ್‌ಗಳು ರಾಜ್ಯ ಮಟ್ಟದ ಡೇಟಾಬೇಸ್‌ಗಳನ್ನು ನಿರ್ವಹಿಸುತ್ತಾರೆ.

2. ಈ ಹಿಂದೆ, ಕೆಲವು ವ್ಯಕ್ತಿಗಳು ಜನನ ಮತ್ತು ಮರಣಗಳನ್ನು ರಿಜಿಸ್ಟ್ರಾರ್‌ಗೆ ವರದಿ ಮಾಡುವ ಅವಶ್ಯಕತೆ ಇತ್ತು.

3. ಉದಾಹರಣೆಗೆ, ಮಗುವಿನ ಜನನದ ಆಸ್ಪತ್ರೆಯ ಉಸ್ತುವಾರಿ ವೈದ್ಯಕೀಯ ಅಧಿಕಾರಿಯು ಜನನವನ್ನು ವರದಿ ಮಾಡಬೇಕು. ಇದಲ್ಲದೆ, ಪೋಷಕರು ಮತ್ತು ಮಾಹಿತಿದಾರರ ಆಧಾರ್ ಸಂಖ್ಯೆಯನ್ನು ಒದಗಿಸಬೇಕಾಗಿದೆ. ಜೈಲು, ಹೋಟೆಲ್ ಅಥವಾ ಲಾಡ್ಜ್‌ನಲ್ಲಿ ಹೆರಿಗೆಯಾದ ಪ್ರಕರಣಕ್ಕೂ ಈ ನಿಯಮ ಅನ್ವಯಿಸುತ್ತದೆ. ಇಲ್ಲಿ, ಜೈಲರ್ ಮತ್ತು ಹೋಟೆಲ್ ಮ್ಯಾನೇಜರ್ ಎಲ್ಲಾ ಸಂಬಂಧಿತ ಮಾಹಿತಿಯನ್ನು ಒದಗಿಸಬೇಕಾಗುತ್ತದೆ.

4. ಹೊಸ ಕಾಯಿದೆಯ ಅಡಿಯಲ್ಲಿ, ಇದನ್ನು ಮತ್ತಷ್ಟು ವಿಸ್ತರಣೆ ಮಾಡಲಾಗಿದೆ. ದತ್ತು ಪಡೆದ ಪೋಷಕರು, ಬಾಡಿಗೆ ತಾಯ್ತನದ ಮೂಲಕ ಜನಿಸಿದ ಮಗು ಮತ್ತು ಒಂಟಿ ಪೋಷಕರಿಗೆ ಅಥವಾ ಅವಿವಾಹಿತ ತಾಯಿ ಮಗುವಿನ ಜನನದ ಸಂದರ್ಭದಲ್ಲಿ ಯಾರು ಪೋಷಕರು ಇರುತ್ತಾರೆ ಅವರ ದಾಖಲೆಗಳನ್ನು ನೀಡಬಹುದು.

5.ಹೊಸ ಶಾಸನವು ಕೇಂದ್ರ ಸರ್ಕಾರದ ಅನುಮೋದನೆಗೆ ಒಳಪಟ್ಟು ಜನಸಂಖ್ಯೆಯ ನೋಂದಣಿಗಳು, ಮತದಾರರ ಪಟ್ಟಿಗಳು ಮತ್ತು ಇತರ ಅಧಿಕೃತ ಪ್ರಾಧಿಕಾರಗಳೊಂದಿಗೆ ರಾಷ್ಟ್ರೀಯ ಡೇಟಾಬೇಸ್​​ನ್ನು ಹಂಚಿಕೊಳ್ಳಲು ಅನುಮತಿ ನೀಡಲಾಗಿದೆ. ಜತೆಗೆ ರಾಜ್ಯದ ಡೇಟಾಬೇಸ್‌ಗಳನ್ನು ರಾಜ್ಯ-ಅನುಮೋದಿತ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಬಹುದು.

6.ಕಾಯಿದೆಯ ಪ್ರಕಾರ, ರಿಜಿಸ್ಟ್ರಾರ್ ಅಥವಾ ಜಿಲ್ಲಾ ರಿಜಿಸ್ಟ್ರಾರ್‌ರ ಸರಿಯಾಗಿ ಪ್ರಕ್ರಿಯೆ ಅಥವಾ ಮನವಿಯನ್ನು ಸ್ವೀಕರಿಸದಿದ್ದರೆ, ಜಿಲ್ಲಾ ರಿಜಿಸ್ಟ್ರಾರ್ ಅಥವಾ ಮುಖ್ಯ ರಿಜಿಸ್ಟ್ರಾರ್‌ಗೆ ಮೇಲ್ಮನವಿ ಸಲ್ಲಿಸಬಹುದು. ಈ ಮನವಿಯನ್ನು 30 ದಿನಗಳಲ್ಲಿ ಮಾಡಬೇಕು. ಜಿಲ್ಲಾ ನೋಂದಣಾಧಿಕಾರಿ ಅಥವಾ ಮುಖ್ಯ ನೋಂದಣಾಧಿಕಾರಿಗಳು ಮೇಲ್ಮನವಿ ಸಲ್ಲಿಸಿದ ದಿನಾಂಕದಿಂದ 90 ದಿನಗಳ ಒಳಗಾಗಿ ಇದಕ್ಕೆ ಪ್ರಕ್ರಿಯೆ ನೀಡಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ