AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯದಲ್ಲಿರುವ ದೇಶಗಳ ಪ್ರಯಾಣಿಕರಿಗೆ ಡಿಸೆಂಬರ್ 20ರಿಂದ ಆರ್‌ಟಿ-ಪಿಸಿಆರ್ ಮುಂಗಡ ಬುಕಿಂಗ್ ಕಡ್ಡಾಯ

ಕಡ್ಡಾಯ ಆರ್‌ಟಿ-ಪಿಸಿಆರ್ ಮುಂಗಡ ಬುಕಿಂಗ್ ಡಿಸೆಂಬರ್ 19 ರಂದು ರಾತ್ರಿ 11:59 ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. “ಮೊದಲ ಹಂತದಲ್ಲಿ, ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್- ಆರು ಮೆಟ್ರೋ ನಗರಗಳಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಕಟಣೆ ಹೇಳಿದೆ.

ಅಪಾಯದಲ್ಲಿರುವ ದೇಶಗಳ ಪ್ರಯಾಣಿಕರಿಗೆ ಡಿಸೆಂಬರ್ 20ರಿಂದ ಆರ್‌ಟಿ-ಪಿಸಿಆರ್ ಮುಂಗಡ ಬುಕಿಂಗ್ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 14, 2021 | 8:27 PM

Share

ದೆಹಲಿ: ಕೊವಿಡ್ -19 ರ ಒಮಿಕ್ರಾನ್ ರೂಪಾಂತರದ (Omicron variant) ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆರು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ‘ಅಪಾಯದಲ್ಲಿರುವ’ ದೇಶಗಳಿಂದ ಬರುವ ಪ್ರಯಾಣಿಕರು ಡಿಸೆಂಬರ್ 20ರಿಂದ ಕಡ್ಡಾಯವಾಗಿ RT-PCR ಪರೀಕ್ಷೆಗಳನ್ನು ಮುಂಗಡವಾಗಿ ಕಾಯ್ದಿರಿಸಬೇಕಾಗುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ(ministry of civil aviation) ಮಂಗಳವಾರ ಹೇಳಿದೆ. ಪ್ರಯಾಣಿಕರು ಅಪಾಯದಲ್ಲಿರುವ  ದೇಶಗಳಿಂದ ಬರುತ್ತಿದ್ದರೆ ಅಥವಾ ಕಳೆದ 14 ದಿನಗಳಲ್ಲಿ ಅಂತಹ ದೇಶಗಳಿಗೆ ಭೇಟಿ ನೀಡಿದ್ದರೆ ಅವರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂಗಡ ಕಾಯ್ದಿರಿಸಲು  ಏರ್ ಸುವಿಧಾ ಪೋರ್ಟಲ್ ಅನ್ನು ಮಾರ್ಪಡಿಸಲಾಗುವುದು. ಸಂಬಂಧಿತ ವಿಮಾನ ನಿಲ್ದಾಣದ ವೆಬ್‌ಸೈಟ್‌ಗೆ ಲಿಂಕ್ ಅನ್ನು ಏರ್ ಸುವಿಧಾ ಪ್ಲಾಟ್‌ಫಾರ್ಮ್‌ನಲ್ಲಿ ಒದಗಿಸಲಾಗುವುದು. ಇದು ಸ್ವಯಂ ಘೋಷಣೆ ಫಾರ್ಮ್ (SDF) ಅನ್ನು ಭರ್ತಿ ಮಾಡುವಾಗ ಪ್ರಯಾಣಿಕರಿಗೆ ಪ್ರದರ್ಶಿಸುತ್ತದೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದ ಸಚಿವಾಲಯ ಹೊರಡಿಸಿದ ಕಚೇರಿ ಜ್ಞಾಪಕ ಪತ್ರದಲ್ಲಿ ತಿಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ಕಡ್ಡಾಯ ಆರ್‌ಟಿ-ಪಿಸಿಆರ್ ಮುಂಗಡ ಬುಕಿಂಗ್ ಡಿಸೆಂಬರ್ 19 ರಂದು ರಾತ್ರಿ 11:59 ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. “ಮೊದಲ ಹಂತದಲ್ಲಿ, ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್- ಆರು ಮೆಟ್ರೋ ನಗರಗಳಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಕಟಣೆ ಹೇಳಿದೆ.

ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ತಮ್ಮ ಪ್ರಯಾಣಿಕರ ಕೊವಿಡ್ -19 ಪರೀಕ್ಷೆಯ ಪೂರ್ವ-ಬುಕಿಂಗ್ ಅನ್ನು ಅವರು ವಿಮಾನ ಹತ್ತುವ ಮೊದಲು ಪರಿಶೀಲಿಸಲು ಸಲಹೆಯನ್ನು ನೀಡುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಗೆ ಸಚಿವಾಲಯ ನಿರ್ದೇಶನ ನೀಡಿದೆ. “ಮುಂಗಡ ಬುಕಿಂಗ್‌ನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗಿದ್ದರೆ ಅವರಿಗೆ ಬೋರ್ಡಿಂಗ್ ಅನ್ನು ನಿರಾಕರಿಸಲಾಗುವುದಿಲ್ಲ. ಆದಾಗ್ಯೂ, ಅಂತಹ ಪ್ರಯಾಣಿಕರನ್ನು ಗುರುತಿಸಲು ಮತ್ತು ಪರೀಕ್ಷೆಗಾಗಿ ವಿಮಾನ ನಿಲ್ದಾಣದ ನೋಂದಣಿ ಕೌಂಟರ್‌ಗೆ ಕರೆದೊಯ್ಯಲು ವಿಮಾನಯಾನ ಸಂಸ್ಥೆಯು ಜವಾಬ್ದಾರವಾಗಿರುತ್ತದೆ ಎಂದು ಅದು ಹೇಳಿದೆ.

ಒಮಿಕ್ರಾನ್ ಆತಂಕದ ನಡುವೆ ಭಾರತದ ‘ಅಪಾಯಕಾರಿ’ ಎಂದು ಗುರುತಿಸಿರುವ ದೇಶಗಳ ಪಟ್ಟಿಯು ಪ್ರಸ್ತುತ ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಬ್ರೆಜಿಲ್, ಚೀನಾ, ಘಾನಾ, ಹಾಂಗ್ ಕಾಂಗ್, ಇಸ್ರೇಲ್, ಮಾರಿಷಸ್, ನ್ಯೂಜಿಲೆಂಡ್, ತಾಂಜಾನಿಯಾ ಮತ್ತು ಜಿಂಬಾಬ್ವೆ ಮೊದಲಾದವುಗಳನ್ನು ಒಳಗೊಂಡಿದೆ.

ಒಮಿಕ್ರಾನ್ ನ ಹೊಸ ಪ್ರಯಾಣದ ನಿಯಮಗಳು ಡಿಸೆಂಬರ್ 1 ರಿಂದ ಜಾರಿಗೆ ಬಂದವು. ರೂಪಾಂತರದ ಹೊರಹೊಮ್ಮುವಿಕೆಯು ಸಾಮಾನ್ಯ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಪುನರಾರಂಭದಲ್ಲಿ ಮತ್ತಷ್ಟು ವಿಳಂಬಕ್ಕೆ ಕಾರಣವಾಯಿತು. ಕಳೆದ ವರ್ಷ ಮಾರ್ಚ್‌ನಿಂದ ರದ್ದಾಗಿದ್ದ ಸೇವೆಯನ್ನು ಡಿಸೆಂಬರ್ 15 ರಿಂದ ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಈಗ ನಿಷೇಧವನ್ನು ಮುಂದಿನ ವರ್ಷ ಕನಿಷ್ಠ ಜನವರಿ 31 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಕಳೆದ 7 ವರ್ಷಗಳಲ್ಲಿ 8.5 ಲಕ್ಷಕ್ಕೂ ಹೆಚ್ಚು ಭಾರತೀಯರು ಪೌರತ್ವ ತ್ಯಜಿಸಿದ್ದಾರೆ: ಸರ್ಕಾರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ