AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯದಲ್ಲಿರುವ ದೇಶಗಳ ಪ್ರಯಾಣಿಕರಿಗೆ ಡಿಸೆಂಬರ್ 20ರಿಂದ ಆರ್‌ಟಿ-ಪಿಸಿಆರ್ ಮುಂಗಡ ಬುಕಿಂಗ್ ಕಡ್ಡಾಯ

ಕಡ್ಡಾಯ ಆರ್‌ಟಿ-ಪಿಸಿಆರ್ ಮುಂಗಡ ಬುಕಿಂಗ್ ಡಿಸೆಂಬರ್ 19 ರಂದು ರಾತ್ರಿ 11:59 ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. “ಮೊದಲ ಹಂತದಲ್ಲಿ, ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್- ಆರು ಮೆಟ್ರೋ ನಗರಗಳಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಕಟಣೆ ಹೇಳಿದೆ.

ಅಪಾಯದಲ್ಲಿರುವ ದೇಶಗಳ ಪ್ರಯಾಣಿಕರಿಗೆ ಡಿಸೆಂಬರ್ 20ರಿಂದ ಆರ್‌ಟಿ-ಪಿಸಿಆರ್ ಮುಂಗಡ ಬುಕಿಂಗ್ ಕಡ್ಡಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 14, 2021 | 8:27 PM

Share

ದೆಹಲಿ: ಕೊವಿಡ್ -19 ರ ಒಮಿಕ್ರಾನ್ ರೂಪಾಂತರದ (Omicron variant) ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಆರು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ‘ಅಪಾಯದಲ್ಲಿರುವ’ ದೇಶಗಳಿಂದ ಬರುವ ಪ್ರಯಾಣಿಕರು ಡಿಸೆಂಬರ್ 20ರಿಂದ ಕಡ್ಡಾಯವಾಗಿ RT-PCR ಪರೀಕ್ಷೆಗಳನ್ನು ಮುಂಗಡವಾಗಿ ಕಾಯ್ದಿರಿಸಬೇಕಾಗುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ(ministry of civil aviation) ಮಂಗಳವಾರ ಹೇಳಿದೆ. ಪ್ರಯಾಣಿಕರು ಅಪಾಯದಲ್ಲಿರುವ  ದೇಶಗಳಿಂದ ಬರುತ್ತಿದ್ದರೆ ಅಥವಾ ಕಳೆದ 14 ದಿನಗಳಲ್ಲಿ ಅಂತಹ ದೇಶಗಳಿಗೆ ಭೇಟಿ ನೀಡಿದ್ದರೆ ಅವರು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂಗಡ ಕಾಯ್ದಿರಿಸಲು  ಏರ್ ಸುವಿಧಾ ಪೋರ್ಟಲ್ ಅನ್ನು ಮಾರ್ಪಡಿಸಲಾಗುವುದು. ಸಂಬಂಧಿತ ವಿಮಾನ ನಿಲ್ದಾಣದ ವೆಬ್‌ಸೈಟ್‌ಗೆ ಲಿಂಕ್ ಅನ್ನು ಏರ್ ಸುವಿಧಾ ಪ್ಲಾಟ್‌ಫಾರ್ಮ್‌ನಲ್ಲಿ ಒದಗಿಸಲಾಗುವುದು. ಇದು ಸ್ವಯಂ ಘೋಷಣೆ ಫಾರ್ಮ್ (SDF) ಅನ್ನು ಭರ್ತಿ ಮಾಡುವಾಗ ಪ್ರಯಾಣಿಕರಿಗೆ ಪ್ರದರ್ಶಿಸುತ್ತದೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದ ಸಚಿವಾಲಯ ಹೊರಡಿಸಿದ ಕಚೇರಿ ಜ್ಞಾಪಕ ಪತ್ರದಲ್ಲಿ ತಿಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ಕಡ್ಡಾಯ ಆರ್‌ಟಿ-ಪಿಸಿಆರ್ ಮುಂಗಡ ಬುಕಿಂಗ್ ಡಿಸೆಂಬರ್ 19 ರಂದು ರಾತ್ರಿ 11:59 ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. “ಮೊದಲ ಹಂತದಲ್ಲಿ, ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು ಮತ್ತು ಹೈದರಾಬಾದ್- ಆರು ಮೆಟ್ರೋ ನಗರಗಳಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಕಟಣೆ ಹೇಳಿದೆ.

ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ತಮ್ಮ ಪ್ರಯಾಣಿಕರ ಕೊವಿಡ್ -19 ಪರೀಕ್ಷೆಯ ಪೂರ್ವ-ಬುಕಿಂಗ್ ಅನ್ನು ಅವರು ವಿಮಾನ ಹತ್ತುವ ಮೊದಲು ಪರಿಶೀಲಿಸಲು ಸಲಹೆಯನ್ನು ನೀಡುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಗೆ ಸಚಿವಾಲಯ ನಿರ್ದೇಶನ ನೀಡಿದೆ. “ಮುಂಗಡ ಬುಕಿಂಗ್‌ನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗಿದ್ದರೆ ಅವರಿಗೆ ಬೋರ್ಡಿಂಗ್ ಅನ್ನು ನಿರಾಕರಿಸಲಾಗುವುದಿಲ್ಲ. ಆದಾಗ್ಯೂ, ಅಂತಹ ಪ್ರಯಾಣಿಕರನ್ನು ಗುರುತಿಸಲು ಮತ್ತು ಪರೀಕ್ಷೆಗಾಗಿ ವಿಮಾನ ನಿಲ್ದಾಣದ ನೋಂದಣಿ ಕೌಂಟರ್‌ಗೆ ಕರೆದೊಯ್ಯಲು ವಿಮಾನಯಾನ ಸಂಸ್ಥೆಯು ಜವಾಬ್ದಾರವಾಗಿರುತ್ತದೆ ಎಂದು ಅದು ಹೇಳಿದೆ.

ಒಮಿಕ್ರಾನ್ ಆತಂಕದ ನಡುವೆ ಭಾರತದ ‘ಅಪಾಯಕಾರಿ’ ಎಂದು ಗುರುತಿಸಿರುವ ದೇಶಗಳ ಪಟ್ಟಿಯು ಪ್ರಸ್ತುತ ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಬ್ರೆಜಿಲ್, ಚೀನಾ, ಘಾನಾ, ಹಾಂಗ್ ಕಾಂಗ್, ಇಸ್ರೇಲ್, ಮಾರಿಷಸ್, ನ್ಯೂಜಿಲೆಂಡ್, ತಾಂಜಾನಿಯಾ ಮತ್ತು ಜಿಂಬಾಬ್ವೆ ಮೊದಲಾದವುಗಳನ್ನು ಒಳಗೊಂಡಿದೆ.

ಒಮಿಕ್ರಾನ್ ನ ಹೊಸ ಪ್ರಯಾಣದ ನಿಯಮಗಳು ಡಿಸೆಂಬರ್ 1 ರಿಂದ ಜಾರಿಗೆ ಬಂದವು. ರೂಪಾಂತರದ ಹೊರಹೊಮ್ಮುವಿಕೆಯು ಸಾಮಾನ್ಯ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಪುನರಾರಂಭದಲ್ಲಿ ಮತ್ತಷ್ಟು ವಿಳಂಬಕ್ಕೆ ಕಾರಣವಾಯಿತು. ಕಳೆದ ವರ್ಷ ಮಾರ್ಚ್‌ನಿಂದ ರದ್ದಾಗಿದ್ದ ಸೇವೆಯನ್ನು ಡಿಸೆಂಬರ್ 15 ರಿಂದ ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಈಗ ನಿಷೇಧವನ್ನು ಮುಂದಿನ ವರ್ಷ ಕನಿಷ್ಠ ಜನವರಿ 31 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಕಳೆದ 7 ವರ್ಷಗಳಲ್ಲಿ 8.5 ಲಕ್ಷಕ್ಕೂ ಹೆಚ್ಚು ಭಾರತೀಯರು ಪೌರತ್ವ ತ್ಯಜಿಸಿದ್ದಾರೆ: ಸರ್ಕಾರ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ