AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 Vaccine: ಮೇ 1ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ರಾಜ್ಯಗಳಲ್ಲಿ ಕೊವಿಡ್ ಲಸಿಕೆ ವಿತರಣೆ ಪ್ರಕ್ರಿಯೆ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಲಿದೆ.

Covid-19 Vaccine: ಮೇ 1ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 19, 2021 | 8:09 PM

Share

ದೆಹಲಿ: ಕೊರೊನಾವೈರಸ್ ಎರಡನೇ ಅಲೆಯಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹೊತ್ತಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಮೇ 1ರಿಂದ ಎಲ್ಲರಿಗೂ ಕೊವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಹೆಚ್ಚುವರಿ ಲಸಿಕೆ ಪ್ರಮಾಣವನ್ನು ನೇರವಾಗಿ ಉತ್ಪಾದಕರಿಂದ ಸಂಗ್ರಹಿಸಲು ರಾಜ್ಯಗಳಿಗೆ ಅಧಿಕಾರವಿದೆ, ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವರ್ಗದ ಜನರಿಗೆ ಲಸಿಕೆ ನೀಡಬಹುದು. ಲಸಿಕೆ ತಯಾರಕರು ತಮ್ಮ ಪೂರೈಕೆಯ ಶೇ 50ರಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಪೂರ್ವ ಘೋಷಿತ ಬೆಲೆಗೆ ಬಿಡುಗಡೆ ಮಾಡಬಹುದಾಗಿದೆ ಎಂದು ಸರ್ಕಾರ ಹೇಳಿದೆ.

ಭಾರತ ಸರ್ಕಾರವು ತನ್ನ ಪಾಲಿನಿಂದ, ಸೋಂಕಿನ ವ್ಯಾಪ್ತಿ (ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ) ಮತ್ತು ಕಾರ್ಯಕ್ಷಮತೆ (ಆಡಳಿತದ ವೇಗ) ದ ಆಧಾರದ ಮೇಲೆ ಲಸಿಕೆಗಳನ್ನು ರಾಜ್ಯ  ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಿದೆ.   ಆರೋಗ್ಯ ಮತ್ತು ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರು, 45 ವರ್ಷಕ್ಕಿಂತ ಮೇಲ್ಪಟ್ಟ  ಜನರಿಗೆ ಆದ್ಯತೆ  ಮೇರೆಗೆ ಎರಡನೇ ಡೋಸ್ ನೀಡಲಾಗುವುದು.

ವಿಶ್ವದ ಅತಿದೊಡ್ಡ ಲಸಿಕೆ ವಿತರಣೆ ಅಭಿಯಾನದ 3 ನೇ ಹಂತದಲ್ಲಿ ಖರೀದಿ, ಅರ್ಹತೆ, ಲಸಿಕೆಗಳ ನಿರ್ವಹಣೆಯನ್ನು ಸುಲಭವಾಗಿ  ಮಾಡಲಾಗುತ್ತಿದೆ. ಲಸಿಕೆ ಬೆಲೆಯ ಆಧಾರದ ಮೇಲೆ, ರಾಜ್ಯ ಸರ್ಕಾರಗಳು, ಖಾಸಗಿ ಆಸ್ಪತ್ರೆಗಳು, ಕೈಗಾರಿಕಾ ಸಂಸ್ಥೆಗಳು ಇತ್ಯಾದಿ ಉತ್ಪಾದಕರಿಂದ ಲಸಿಕೆ ಪ್ರಮಾಣವನ್ನು ಸಂಗ್ರಹಿಸಬಹುದು. ಖಾಸಗಿ ವ್ಯಾಕ್ಸಿನೇಷನ್ ಪೂರೈಕೆದಾರರು ತಮ್ಮ ಲಸಿಕೆಯ ಬೆಲೆಯನ್ನು ಪಾರದರ್ಶಕವಾಗಿ ಘೋಷಿಸಬೇಕು ಎಂದು ಸರ್ಕಾರ ಹೇಳಿದೆ.

ದೇಶದಲ್ಲಿ ಕಳೆದ 24ಗಂಟೆಯಲ್ಲಿ 2,73,810ಹೊಸ ಕೊರೊನಾ ಕೇಸ್​ಗಳು ದಾಖಲಾಗಿದ್ದು, 1,619 ಜನರು ಮೃತಪಟ್ಟಿದ್ದಾರೆ. ಹಾಗೇ 1,44,178 ಜನರು ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಅಲ್ಲಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ಅದರಲ್ಲಿ ಸಕ್ರಿಯ ಪ್ರಕರಣಗಳು 19,29,329. ಒಟ್ಟು ಚೇತರಿಕೆ ಕಂಡವರ ಸಂಖ್ಯೆ 1,29,53,821  ಮತ್ತು ಕೊರೊನಾದಿಂದ ಜೀವ ಕಳೆದುಕೊಂಡವರು 1,78,769  ಜನರು.

ಕೊರೊನಾ ಎರಡನೇ ಅಲೆಯಲ್ಲಿ ಹಿರಿಯ ನಾಗರಿಕರಿಗೆ ಹೋಲಿಸಿದರೆ ಯುವಜನರೇ ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಲಕ್ಷಣಗಳೂ ಸ್ವಲ್ಪ ವಿಭಿನ್ನವಾಗಿದ್ದು, ಬಾಯಿ ಒಣಗುವುದು, ಗ್ಯಾಸ್ಟ್ರಿಕ್​, ಲೂಸ್​ ಮೋಶನ್​, ಕೆಂಪು ಕಣ್ಣು, ತಲೆನೋವುಗಳು ಕಾಣಿಸಿಕೊಳ್ಳುತ್ತಿವೆ. ಈ ಬಾರಿ ಕೊರೊನಾ ಪಾಸಿಟಿವ್​ ಬಂದವರಿಗೆ ಎಲ್ಲರಿಗೂ ಜ್ವರ ಕಾಣಿಸಿಕೊಳ್ಳುತ್ತಿಲ್ಲ ಎಂದು ಜಿನೆಸ್ಟ್ರಿಂಗ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥರಾದ ಗೌರಿ ಅಗರ್​ವಾಲ್ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಚೇತರಿಕೆಯ ಪ್ರಮಾಣ 86.62ಕ್ಕೆ ಕುಸಿದಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 18,01,316 ಇದ್ದು, ಒಟ್ಟು ಸೋಂಕಿತರ ಸಂಖ್ಯೆಯ ಶೇ.12.18ರಷ್ಟಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು ಆಗಸ್ಟ್​ 7ರಂದು. 30 ಲಕ್ಷ ದಾಟಿದ್ದು ಆಗಸ್ಟ್​ 23ರಂದು, 40 ಲಕ್ಷ ದಾಟಿದ್ದು ಸೆಪ್ಟೆಂಬರ್​ 5 ಮತ್ತು 50 ಲಕ್ಷ ದಾಟಿದ್ದು ಸೆಪ್ಟೆಂಬ್ 16ರಂದು. ಕಳೆದ ಬಾರಿಗೆ ಹೋಲಿಸಿದರೆ ಸೋಂಕಿನ ಪ್ರಸರಣ ತುಂಬ ವೇಗವಾಗಿರುವುದು ಇನ್ನಷ್ಟು ಆತಂಕ ಮೂಡಿಸಿದೆ.

ಇದನ್ನೂ ಓದಿ:ದೇಶದಲ್ಲಿ 24 ಗಂಟೆಯಲ್ಲಿ 2,73,810 ಹೊಸ ಕೊರೊನಾ ಪ್ರಕರಣಗಳು; ಆತಂಕ ಹುಟ್ಟಿಸಿದ ಸೋಂಕಿನ ವಿಭಿನ್ನ ಲಕ್ಷಣಗಳು

(from May 1 Everyone above the age of 18 to be eligible to get corona vaccine says govt)

Published On - 7:54 pm, Mon, 19 April 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್