AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಟ್ನಾದಿಂದ ಅಯೋಧ್ಯೆಗೆ 20 ದಿನಗಳ ‘ಲವ್-ಕುಶ್ ಯಾತ್ರೆ’ ಆರಂಭಿಸಿದ ಬಿಜೆಪಿ

ಮಂಗಳವಾರ ಪಾಟ್ನಾದಿಂದ ಯಾತ್ರೆ ಆರಂಭವಾಗಿದೆ. ಬಿಜೆಪಿಯ ಕಾರ್ಯಕರ್ತರು ರಾಮ ಮತ್ತು ಸೀತೆಯ ಕಥೆಗೆ ಸಂಬಂಧಿಸಿದ ಜಿಲ್ಲೆಗಳ ಮೂಲಕ ಮತ್ತು ಕುರ್ಮಿ- ಕೊಯೆರಿ ಜನಸಂಖ್ಯೆಯನ್ನು ಹೊಂದಿರುವ ಜಿಲ್ಲೆಗಳಲ್ಲಿ ಸಂಚರಿಸುತ್ತಾರೆ. ಪಕ್ಷದ ಬಿಹಾರ ಅಧ್ಯಕ್ಷ ಸಾಮ್ರಾಟ್ ಚೌಧರಿ ಯಾತ್ರೆಗೆ ಚಾಲನೆ ನೀಡಿದ್ದು ಜನವರಿ 22ರಂದು ಅಯೋಧ್ಯೆಯಲ್ಲಿ ಯಾತ್ರೆ ಮುಕ್ತಾಯವಾಗಲಿದೆ.

ಪಾಟ್ನಾದಿಂದ ಅಯೋಧ್ಯೆಗೆ 20 ದಿನಗಳ ‘ಲವ್-ಕುಶ್ ಯಾತ್ರೆ’ ಆರಂಭಿಸಿದ ಬಿಜೆಪಿ
ಲವ್ ಕುಶ್ ಯಾತ್ರೆ
ರಶ್ಮಿ ಕಲ್ಲಕಟ್ಟ
|

Updated on: Jan 02, 2024 | 5:34 PM

Share

ಪಾಟ್ನಾ ಜನವರಿ 02: ಜನವರಿ 22 ರಂದು ರಾಮ ಮಂದಿರದಲ್ಲಿ (Ram mandir) ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಆಗಲಿದ್ದು, ಬಿಜೆಪಿ ಪಾಟ್ನಾ ಕಚೇರಿಯಿಂದ ಅಯೋಧ್ಯೆಗೆ 20 ದಿನಗಳ “ಲವ್-ಕುಶ್ ಯಾತ್ರೆ” (Luv-Kush Yatra) ಪ್ರಾರಂಭಿಸಿದೆ. ಇಂದು (ಮಂಗಳವಾರ) ಈ ಯಾತ್ರೆ ಆರಂಭವಾಗಿದ್ದು ರಾಮಮಂದಿರದಲ್ಲಿ ವಿಗ್ರಹದ ಪ್ರತಿಷ್ಠಾಪನೆ ಮತ್ತು ಬಿಹಾರದ (Bihar) ರಾಜಕೀಯ ಭಾಷೆಯಲ್ಲಿ “ಲವ್-ಕುಶ್” ಎಂದು ಕರೆಯಲ್ಪಡುವ ಕೊಯೆರಿ (ಕುಶ್ವಾಹಾ) ಮತ್ತು ಕುರ್ಮಿಗಳ ಪ್ರಭಾವಿ ಕೃಷಿಕ ಜಾತಿಗಳನ್ನು ತೊಡಗಿಸಿಕೊಳ್ಳುವ ಉದ್ದೇಶವನ್ನು ಹೊಂದಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯೊಂದಿಗೆ “ಲವ್-ಕುಶ್ ಯಾತ್ರೆ” ಮುಕ್ತಾಯಗೊಳ್ಳಲಿದೆ.

ಬಿಜೆಪಿಯ ಮಾಸ್ಟರ್ ಸ್ಟ್ರೋಕ್

ಬಿಹಾರದ ರಾಜಕೀಯ ಭಾಷೆಯಲ್ಲಿ, ಲವ್ ಒಬಿಸಿ ಕುರ್ಮಿ ಸಮುದಾಯ ಮತ್ತು ಕುಶ್ ಒಬಿಸಿ ಕುಶ್ವಾಹ (ಕೊಯೆರಿ) ಗುಂಪನ್ನು ಪ್ರತಿನಿಧಿಸುತ್ತದೆ. ಎರಡು ಜಾತಿ ಗುಂಪುಗಳನ್ನು ಒಟ್ಟಿಗೆ ‘ಲವ್-ಕುಶ್’ ಎಂದು ಕರೆಯಲಾಗುತ್ತದೆ. ಇದು ಬಿಹಾರದ ಜನಸಂಖ್ಯೆಯ ಸುಮಾರು 10 ಪ್ರತಿಶತವನ್ನು ಹೊಂದಿದೆ. ಬಿಜೆಪಿಯ “ಲವ್-ಕುಶ್ ಯಾತ್ರೆ” ನಡೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪ್ರಮುಖ ಅಸ್ತ್ರವಾದ ಲವ್-ಕುಶ್ ಅನ್ನು ವಿಭಜಿಸುವ ಪ್ರಯತ್ನ ಎಂದು ವಿಶ್ಲೇಷಕರು ವೀಕ್ಷಿಸಿದ್ದಾರೆ. ಇದು ಬಿಹಾರದಲ್ಲಿ ತನ್ನ ರಾಜಕೀಯ ನೆಲೆಯನ್ನು ಭದ್ರಪಡಿಸಿಕೊಳ್ಳಲು ಬಿಜೆಪಿಯ ಕಾರ್ಯತಂತ್ರದ ನಡೆ ಎಂದು ಪರಿಗಣಿಸಲಾಗಿದೆ.

ಲವ್-ಕುಶ್ ಸಮುದಾಯವು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಮಹತ್ವದ ಕ್ಷೇತ್ರವಾಗಿದೆ. ಈ ಯಾತ್ರೆಯನ್ನು ಆಯೋಜಿಸುವ ಮೂಲಕ, ಬಿಜೆಪಿಯು ಲವ್-ಕುಶ್ ಮತಬ್ಯಾಂಕ್ ಅನ್ನು ಕ್ರೋಢೀಕರಿಸುವ ಗುರಿಯನ್ನು ಹೊಂದಿದೆ. ಈ ಪ್ರಯಾಣವು ಹಿಂದೂ ದೇವತೆಗಳಾದ ರಾಮ ಮತ್ತು ಸೀತೆಯ ಐತಿಹಾಸಿಕ ಸಂಪರ್ಕಗಳೊಂದಿಗೆ ಪ್ರದೇಶಗಳನ್ನು ಸಂಚರಿಸುತ್ತದೆ. ಇವು ಕೊಯೆರಿ-ಕುರ್ಮಿ ಜನಸಂಖ್ಯೆಯನ್ನು ಹೊಂದಿರುವ ಪ್ರದೇಶಗಳಾಗಿವೆ

ಲವ್-ಕುಶ್ ನ ಮಹತ್ವವೇನು?

ಲವ್ ಮತ್ತು ಕುಶ್ ಹಿಂದೂ ದೇವತೆಗಳಾದ ರಾಮ ಮತ್ತು ಸೀತೆಯ ಪುತ್ರರು. ಬಿಹಾರದಲ್ಲಿ ಇದು ಕೊಯೆರಿ (ಕುಶ್ವಾಹ) ಮತ್ತು ಕುರ್ಮಿ ಕೃಷಿ ಜಾತಿಗಳ ನಡುವಿನ ಮೈತ್ರಿಗೆ ರಾಜಕೀಯ ಪದವಾಗಿದೆ.

ಇದನ್ನೂ  ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: CM ಸಿದ್ದರಾಮಯ್ಯಗೆ ಆಹ್ವಾನ ನೀಡದ ವಿಚಾರಕ್ಕೆ ಕೇಂದ್ರ ಸಚಿವ ಜೋಶಿ ಕೊಟ್ಟ ಸ್ಪಷ್ಟನೆ ಹೀಗಿದೆ

ಲವ್-ಕುಶ್ ಯಾತ್ರೆ

ಮಂಗಳವಾರ ಪಾಟ್ನಾದಿಂದ ಯಾತ್ರೆ ಆರಂಭವಾಗಿದೆ. ಬಿಜೆಪಿಯ ಕಾರ್ಯಕರ್ತರು ರಾಮ ಮತ್ತು ಸೀತೆಯ ಕಥೆಗೆ ಸಂಬಂಧಿಸಿದ ಜಿಲ್ಲೆಗಳ ಮೂಲಕ ಮತ್ತು ಕುರ್ಮಿ- ಕೊಯೆರಿ ಜನಸಂಖ್ಯೆಯನ್ನು ಹೊಂದಿರುವ ಜಿಲ್ಲೆಗಳಲ್ಲಿ ಸಂಚರಿಸುತ್ತಾರೆ. ಪಕ್ಷದ ಬಿಹಾರ ಅಧ್ಯಕ್ಷ ಸಾಮ್ರಾಟ್ ಚೌಧರಿ ಯಾತ್ರೆಗೆ ಚಾಲನೆ ನೀಡಿದರು. ಕೊಯೆರಿ -ಕುರ್ಮಿ ಜಾತಿಯ ಎಲ್ಲಾ ಸ್ಥಳೀಯ ಮುಖಂಡರು ಮತ್ತು ಸಂಸದರು ಮತ್ತು ಶಾಸಕರು ಸೇರಿದಂತೆ ಸ್ಥಳೀಯ ಪ್ರತಿನಿಧಿಗಳು ಯಾತ್ರೆಯ ಒಂದು ಭಾಗವಾಗಿ ಪಾಲ್ಗೊಳ್ಳುವ ರೀತಿಯಲ್ಲಿ ಯಾತ್ರೆಯನ್ನು ಆಯೋಜಿಸಲಾಗಿದೆ.

ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಹಲವಾರು ಧಾರ್ಮಿಕ ಸಂಘಟನೆಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳನ್ನು ಪಕ್ಷ ಆಹ್ವಾನಿಸಿದೆ. ಯಾತ್ರೆಯು ಎರಡು ರಥಗಳನ್ನು ಹೊಂದಿದ್ದು ಪ್ರತಿಯೊಂದೂ ‘ಹವನ ಕುಂಡ’ವನ್ನು ಹೊಂದಿದೆ. ಯಾತ್ರೆಯಲ್ಲಿ ‘ಸಬ್ ಕೇ ಸಿಯಾ, ಸಬ್ ಕೇ ರಾಮ್’ ಎಂಬ ಘೋಷಣೆ ಮೊಳಗಲಿದೆ.

ಲವ್-ಕುಶ್ ಯಾತ್ರೆ ಎಲ್ಲೆಲ್ಲಿ ಸಂಚರಿಸಲಿದೆ?

ವೈಶಾಲಿ, ಸೀತಾಮರ್ಹಿ, ವಾಲ್ಮೀಕಿ ನಗರ, ಪೂರ್ಣಿಯಾ, ಕಿಶನ್‌ಗಂಜ್, ಕತಿಹಾರ್, ನಾವಡಾ, ನಳಂದ ಮತ್ತು ಬಕ್ಸರ್ ಮೂಲಕ ಹಾದು ಹೋಗುವ ಯಾತ್ರೆಯ ಸಮಯದಲ್ಲಿ ನೆರೆಯ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮುಕ್ತಾಯಗೊಳ್ಳುವ ಮೊದಲು ಬಿಜೆಪಿ ಹವನಗಳು ಮತ್ತು ಸಾರ್ವಜನಿಕ ಸಭೆಗಳನ್ನು ಯೋಜಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು