AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಮ್ಮೆಗಳಿಗೆ ಡಿಕ್ಕಿ ಹೊಡೆದು ವಂದೇ ಭಾರತ್ ರೈಲಿನ ಮುಂಭಾಗಕ್ಕೆ ಹಾನಿ; 24 ಗಂಟೆಗಳಲ್ಲಿ ದುರಸ್ತಿ

ಹೊಸದಾಗಿ ಪ್ರಾರಂಭಿಸಲಾದ ಮುಂಬೈ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗಾಂಧಿನಗರಕ್ಕೆ ತೆರಳುತ್ತಿದ್ದಾಗ ಅಹಮದಾಬಾದ್ ಬಳಿ ಗುರುವಾರ ಬೆಳಿಗ್ಗೆ 11:15 ರ ಸುಮಾರಿಗೆ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ಮುಂಭಾಗಕ್ಕೆ ಹಾನಿಯಾಗಿತ್ತು.

ಎಮ್ಮೆಗಳಿಗೆ ಡಿಕ್ಕಿ ಹೊಡೆದು ವಂದೇ ಭಾರತ್ ರೈಲಿನ ಮುಂಭಾಗಕ್ಕೆ ಹಾನಿ; 24 ಗಂಟೆಗಳಲ್ಲಿ ದುರಸ್ತಿ
ವಂದೇ ಭಾರತ್ ಎಕ್ಸ್​​ಪ್ರೆಸ್
TV9 Web
| Edited By: |

Updated on:Oct 07, 2022 | 12:59 PM

Share

ಮುಂಬೈ: ಗುಜರಾತ್‌ನಲ್ಲಿ (Gujarat) ಎಮ್ಮೆಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಗಾದ ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನ ಮುಂಭಾಗವನ್ನು ರೈಲ್ವೆ ಅಧಿಕಾರಿಗಳು  ಬದಲಾಯಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ನಡೆದ 24 ಗಂಟೆಗಳಲ್ಲಿ ವಂದೇ ಭಾರತ್ ರೈಲನ್ನು ದುರಸ್ತಿ ಮಾಡಲಾಗಿದೆ. ಹೊಸದಾಗಿ ಪ್ರಾರಂಭಿಸಲಾದ ಮುಂಬೈ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗಾಂಧಿನಗರಕ್ಕೆ ತೆರಳುತ್ತಿದ್ದಾಗ ಅಹಮದಾಬಾದ್ ಬಳಿ ಗುರುವಾರ ಬೆಳಿಗ್ಗೆ 11:15 ರ ಸುಮಾರಿಗೆ ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ಮುಂಭಾಗಕ್ಕೆ ಹಾನಿಯಾಗಿತ್ತು. ಜಾನುವಾರುಗಳಿಗೆ ಗುದ್ದಿದ ನಂತರ ರೈಲಿನ ಡ್ರೈವರ್ ಕೋಚ್‌ನ ಮುಂಭಾಗದ ಕೋನ್ ಕವರ್ ಮತ್ತು ಅದರ ಮೌಂಟಿಂಗ್ ಬ್ರಾಕೆಟ್‌ಗಳಿಗೆ ಹಾನಿಯಾಗಿದೆ. ಆದಾಗ್ಯೂ, ರೈಲಿನ ಪ್ರಮುಖ ಭಾಗಗಳಿಗೆ ಏನೂ ಹಾನಿಯಾಗಿಲ್ಲ. ಹಾನಿಗೊಳಗಾದ ಮುಂಭಾಗವನ್ನು ಮುಂಬೈ ಸೆಂಟ್ರಲ್‌ನಲ್ಲಿರುವ ಕೋಚ್ ಕೇರ್ ಸೆಂಟರ್‌ನಲ್ಲಿ ಬದಲಾಯಿಸಲಾಯಿತು ಎಂದು ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ಹೇಳಿದ್ದಾರೆ. ರೈಲಿನ ಮುಂಭಾಗವನ್ನು FRP (ಫೈಬರ್ ರಿಇನ್​​​ಫೋರ್ಸ್ಡ್ ಪ್ಲಾಸ್ಟಿಕ್) ನಿಂದ ಮಾಡಲಾಗಿದೆ.

ಅಹಮದಾಬಾದ್‌ನ ವತ್ವಾ ಮತ್ತು ಮಣಿನಗರ ಪ್ರದೇಶಗಳ ನಡುವೆ ಈ ಘಟನೆ ಸಂಭವಿಸಿದೆ. ಘಟನೆ ಸಂಭವಿಸಿದ ನಂತರವೂ ರೈಲು ಗುರುವಾರ ಪ್ಯಾನೆಲ್ ಇಲ್ಲದೆ ಗಾಂಧಿನಗರ ಕ್ಯಾಪಿಟಲ್ ಸ್ಟೇಷನ್​​​​ಗೆ ತಲುಪಿ ಅಲ್ಲಿಂದ ಮುಂಬೈ ಸೆಂಟ್ರಲ್‌ಗೆ ಹಿಂತಿರುಗಿತು.

ಮುಂಭಾಗದ ಕವರ್ ಏನೇ ಆದರೂ ಇತರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ತಡೆದುಕೊಳ್ಳು ವಿನ್ಯಾಸಗೊಳಿಸಲಾಗಿದೆ. ಆದ್ದರಿಂದ ಇದನ್ನು ಬದಲಾಯಿಸಬಹುದಾಗಿದೆ ಎಂದು ಠಾಕೂರ್ ಹೇಳಿದ್ದಾರೆ. ಈ ರೀತಿಯ ಮುಂಭಾಗದ ಕವರ್​​ಗಳು ಹೆಚ್ಚುವರಿಯಾಗಿ ಇಡಲಾಗಿದೆ ಎಂದು ಅವರು ಹೇಳಿದ್ದಾರೆ.

ಹಾನಿಗೊಳಗಾದ ಭಾಗವನ್ನು ಮುಂಬೈ ಸೆಂಟ್ರಲ್ ಡಿಪೋದಲ್ಲಿ ಬದಲಾಯಿಸಲಾಗಿದೆ. ಯಾವುದೇ ಹೆಚ್ಚುವರಿ ಸಮಯ ವ್ಯಯಿಸದೆ ರೈಲು ಮತ್ತೆ ಸೇವೆ ಆರಂಭಿಸಿದೆ . ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ರೈಲು ಇಂದು ಮುಂಬೈನಿಂದ ಹೊರಟಿದೆ ಎಂದು ಅವರು ಹೇಳಿದ್ದಾರೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಪಶ್ಚಿಮ ರೈಲ್ವೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು. ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಸ್ವದೇಶಿ ವಿನ್ಯಾಸದ ಸೆಮಿ-ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರ ಕ್ಯಾಪಿಟಲ್‌ನಿಂದ ಚಾಲನೆ ನೀಡಿದ್ದರು.

ಇದನ್ನೂ ಓದಿ: Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಎಮ್ಮೆಗಳ ಹಿಂಡಿಗೆ ಡಿಕ್ಕಿ, ಇಂಜಿನ್‌ನ ಮುಂಭಾಗಕ್ಕೆ ಹಾನಿ

Published On - 12:57 pm, Fri, 7 October 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ