AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ

ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ. 

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ
ಭೂಪೇಶ್ ಬಾಘೇಲ್​
TV9 Web
| Edited By: |

Updated on:Mar 23, 2022 | 8:27 AM

Share

ತೈಲ ಮತ್ತು ಗೃಹಬಳಕೆ​ ಗ್ಯಾಸ್​ ಸಿಲಿಂಡರ್​ ಬೆಲೆ ಏರಿಕೆಯಾದ ಬೆನ್ನಲ್ಲೇ ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​ ಅವರು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಹೊಸದಾಗಿ ಅಧಿಕಾರ ಹಿಡಿದ ಖುಷಿಗೆ ಬಿಜೆಪಿ ದೇಶದ ಜನರಿಗೆ ನೀಡುತ್ತಿರುವ ಉಡುಗೊರೆ ಇದು ಎಂದು ಹೇಳಿದ್ದಾರೆ.  ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ಪೆಟ್ರೋಲ್​, ಡೀಸೆಲ್​ ಮತ್ತು ಗೃಹಬಳಕೆ ಸಿಲಿಂಡರ್ ಗ್ಯಾಸ್​ ಬೆಲೆ ಏರಿಕೆಯಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಅದರಂತೆ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಹಿಡಿದ ನಂತರ ಬಿಜೆಪಿ ಮೊದಲು ನೀಡುತ್ತಿರುವ ಉಡುಗೊರೆಯೇ ತೈಲ ಬೆಲೆ ಏರಿಕೆ ಮತ್ತು ಗ್ಯಾಸ್​ ಬೆಲೆ ಏರಿಕೆ ಎಂದು ಹೇಳಿದರು.

ಹಾಗೇ, ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ದೇಶದ ಹಲವು ನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ಬೆಲೆ 1000 ರೂಪಾಯಿ ತಲುಪಿದ್ದಕ್ಕೆ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು. ಇನ್ನು ಪೆಟ್ರೋಲ್​​-ಡೀಸೆಲ್​ ಬೆಲೆಯಲ್ಲೂ ಇನ್ನು ಮುಂದೆ ದೈನಂದಿನ ವಿಕಾಸ (ಪ್ರತಿ ದಿನ ಏರಿಕೆ) ಆಗುತ್ತದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ.

ನವೆಂಬರ್​​ಗೂ ಮೊದಲು ಪೆಟ್ರೋಲ್​-ಡೀಸೆಲ್​ ಬೆಲೆ ಪ್ರತಿದಿನ ಏರಿಕೆಯಾಗುತ್ತಿತ್ತು. ಆದರೆ ನವೆಂಬರ್​​ನಲ್ಲಿ ದೀಪಾವಳಿ ಉಡುಗೊರೆಯಾಗಿ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 10 ರೂ. ಮತ್ತು 5ರೂಪಾಯಿ ಕಡಿತಗೊಳಿಸಿತ್ತು. ಅಂದಿನಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ.  ಅದರ ಬೆನ್ನಲ್ಲೇ ನಿನ್ನೆ (ಮಾರ್ಚ್​ 22) ಪೆಟ್ರೋಲ್​-ಡೀಸೆಲ್​ ಬೆಲೆಯನ್ನು 80 ಪೈಸೆ ಹೆಚ್ಚಳ ಮಾಡಲಾಗಿತ್ತು. ಇಂದೂ ಕೂಡ ಹೆಚ್ಚಿಸಲಾಗಿದೆ.

ಇದನ್ನೂ ಓದಿ: IPL 2022: ಐಪಿಎಲ್ ಆರಂಭದಲ್ಲೇ ಮುಂಬೈಗೆ ಆಘಾತ! ಬಲಿಷ್ಠ ಡೆಲ್ಲಿ ಎದುರಿನ ಪಂದ್ಯಕ್ಕೆ ತಂಡದ ಸ್ಟಾರ್ ಬ್ಯಾಟರ್ ಅಲಭ್ಯ

Published On - 8:12 am, Wed, 23 March 22

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು