AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ

ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ. 

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ
ಭೂಪೇಶ್ ಬಾಘೇಲ್​
TV9 Web
| Updated By: Lakshmi Hegde|

Updated on:Mar 23, 2022 | 8:27 AM

Share

ತೈಲ ಮತ್ತು ಗೃಹಬಳಕೆ​ ಗ್ಯಾಸ್​ ಸಿಲಿಂಡರ್​ ಬೆಲೆ ಏರಿಕೆಯಾದ ಬೆನ್ನಲ್ಲೇ ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​ ಅವರು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಹೊಸದಾಗಿ ಅಧಿಕಾರ ಹಿಡಿದ ಖುಷಿಗೆ ಬಿಜೆಪಿ ದೇಶದ ಜನರಿಗೆ ನೀಡುತ್ತಿರುವ ಉಡುಗೊರೆ ಇದು ಎಂದು ಹೇಳಿದ್ದಾರೆ.  ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ಪೆಟ್ರೋಲ್​, ಡೀಸೆಲ್​ ಮತ್ತು ಗೃಹಬಳಕೆ ಸಿಲಿಂಡರ್ ಗ್ಯಾಸ್​ ಬೆಲೆ ಏರಿಕೆಯಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಅದರಂತೆ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಹಿಡಿದ ನಂತರ ಬಿಜೆಪಿ ಮೊದಲು ನೀಡುತ್ತಿರುವ ಉಡುಗೊರೆಯೇ ತೈಲ ಬೆಲೆ ಏರಿಕೆ ಮತ್ತು ಗ್ಯಾಸ್​ ಬೆಲೆ ಏರಿಕೆ ಎಂದು ಹೇಳಿದರು.

ಹಾಗೇ, ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ದೇಶದ ಹಲವು ನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ಬೆಲೆ 1000 ರೂಪಾಯಿ ತಲುಪಿದ್ದಕ್ಕೆ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು. ಇನ್ನು ಪೆಟ್ರೋಲ್​​-ಡೀಸೆಲ್​ ಬೆಲೆಯಲ್ಲೂ ಇನ್ನು ಮುಂದೆ ದೈನಂದಿನ ವಿಕಾಸ (ಪ್ರತಿ ದಿನ ಏರಿಕೆ) ಆಗುತ್ತದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ.

ನವೆಂಬರ್​​ಗೂ ಮೊದಲು ಪೆಟ್ರೋಲ್​-ಡೀಸೆಲ್​ ಬೆಲೆ ಪ್ರತಿದಿನ ಏರಿಕೆಯಾಗುತ್ತಿತ್ತು. ಆದರೆ ನವೆಂಬರ್​​ನಲ್ಲಿ ದೀಪಾವಳಿ ಉಡುಗೊರೆಯಾಗಿ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 10 ರೂ. ಮತ್ತು 5ರೂಪಾಯಿ ಕಡಿತಗೊಳಿಸಿತ್ತು. ಅಂದಿನಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ.  ಅದರ ಬೆನ್ನಲ್ಲೇ ನಿನ್ನೆ (ಮಾರ್ಚ್​ 22) ಪೆಟ್ರೋಲ್​-ಡೀಸೆಲ್​ ಬೆಲೆಯನ್ನು 80 ಪೈಸೆ ಹೆಚ್ಚಳ ಮಾಡಲಾಗಿತ್ತು. ಇಂದೂ ಕೂಡ ಹೆಚ್ಚಿಸಲಾಗಿದೆ.

ಇದನ್ನೂ ಓದಿ: IPL 2022: ಐಪಿಎಲ್ ಆರಂಭದಲ್ಲೇ ಮುಂಬೈಗೆ ಆಘಾತ! ಬಲಿಷ್ಠ ಡೆಲ್ಲಿ ಎದುರಿನ ಪಂದ್ಯಕ್ಕೆ ತಂಡದ ಸ್ಟಾರ್ ಬ್ಯಾಟರ್ ಅಲಭ್ಯ

Published On - 8:12 am, Wed, 23 March 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್