AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ

ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ. 

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ
ಭೂಪೇಶ್ ಬಾಘೇಲ್​
TV9 Web
| Edited By: |

Updated on:Mar 23, 2022 | 8:27 AM

Share

ತೈಲ ಮತ್ತು ಗೃಹಬಳಕೆ​ ಗ್ಯಾಸ್​ ಸಿಲಿಂಡರ್​ ಬೆಲೆ ಏರಿಕೆಯಾದ ಬೆನ್ನಲ್ಲೇ ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​ ಅವರು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಹೊಸದಾಗಿ ಅಧಿಕಾರ ಹಿಡಿದ ಖುಷಿಗೆ ಬಿಜೆಪಿ ದೇಶದ ಜನರಿಗೆ ನೀಡುತ್ತಿರುವ ಉಡುಗೊರೆ ಇದು ಎಂದು ಹೇಳಿದ್ದಾರೆ.  ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ಪೆಟ್ರೋಲ್​, ಡೀಸೆಲ್​ ಮತ್ತು ಗೃಹಬಳಕೆ ಸಿಲಿಂಡರ್ ಗ್ಯಾಸ್​ ಬೆಲೆ ಏರಿಕೆಯಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಅದರಂತೆ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಹಿಡಿದ ನಂತರ ಬಿಜೆಪಿ ಮೊದಲು ನೀಡುತ್ತಿರುವ ಉಡುಗೊರೆಯೇ ತೈಲ ಬೆಲೆ ಏರಿಕೆ ಮತ್ತು ಗ್ಯಾಸ್​ ಬೆಲೆ ಏರಿಕೆ ಎಂದು ಹೇಳಿದರು.

ಹಾಗೇ, ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ದೇಶದ ಹಲವು ನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ಬೆಲೆ 1000 ರೂಪಾಯಿ ತಲುಪಿದ್ದಕ್ಕೆ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು. ಇನ್ನು ಪೆಟ್ರೋಲ್​​-ಡೀಸೆಲ್​ ಬೆಲೆಯಲ್ಲೂ ಇನ್ನು ಮುಂದೆ ದೈನಂದಿನ ವಿಕಾಸ (ಪ್ರತಿ ದಿನ ಏರಿಕೆ) ಆಗುತ್ತದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ.

ನವೆಂಬರ್​​ಗೂ ಮೊದಲು ಪೆಟ್ರೋಲ್​-ಡೀಸೆಲ್​ ಬೆಲೆ ಪ್ರತಿದಿನ ಏರಿಕೆಯಾಗುತ್ತಿತ್ತು. ಆದರೆ ನವೆಂಬರ್​​ನಲ್ಲಿ ದೀಪಾವಳಿ ಉಡುಗೊರೆಯಾಗಿ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 10 ರೂ. ಮತ್ತು 5ರೂಪಾಯಿ ಕಡಿತಗೊಳಿಸಿತ್ತು. ಅಂದಿನಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ.  ಅದರ ಬೆನ್ನಲ್ಲೇ ನಿನ್ನೆ (ಮಾರ್ಚ್​ 22) ಪೆಟ್ರೋಲ್​-ಡೀಸೆಲ್​ ಬೆಲೆಯನ್ನು 80 ಪೈಸೆ ಹೆಚ್ಚಳ ಮಾಡಲಾಗಿತ್ತು. ಇಂದೂ ಕೂಡ ಹೆಚ್ಚಿಸಲಾಗಿದೆ.

ಇದನ್ನೂ ಓದಿ: IPL 2022: ಐಪಿಎಲ್ ಆರಂಭದಲ್ಲೇ ಮುಂಬೈಗೆ ಆಘಾತ! ಬಲಿಷ್ಠ ಡೆಲ್ಲಿ ಎದುರಿನ ಪಂದ್ಯಕ್ಕೆ ತಂಡದ ಸ್ಟಾರ್ ಬ್ಯಾಟರ್ ಅಲಭ್ಯ

Published On - 8:12 am, Wed, 23 March 22

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ