AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ

ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ. 

ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್​ ಬೆಲೆ ಜಾಸ್ತಿಯಾಯ್ತು: ಛತ್ತೀಸ್​ಗಢ ಸಿಎಂ
ಭೂಪೇಶ್ ಬಾಘೇಲ್​
TV9 Web
| Edited By: |

Updated on:Mar 23, 2022 | 8:27 AM

Share

ತೈಲ ಮತ್ತು ಗೃಹಬಳಕೆ​ ಗ್ಯಾಸ್​ ಸಿಲಿಂಡರ್​ ಬೆಲೆ ಏರಿಕೆಯಾದ ಬೆನ್ನಲ್ಲೇ ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​ ಅವರು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಹೊಸದಾಗಿ ಅಧಿಕಾರ ಹಿಡಿದ ಖುಷಿಗೆ ಬಿಜೆಪಿ ದೇಶದ ಜನರಿಗೆ ನೀಡುತ್ತಿರುವ ಉಡುಗೊರೆ ಇದು ಎಂದು ಹೇಳಿದ್ದಾರೆ.  ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ಪೆಟ್ರೋಲ್​, ಡೀಸೆಲ್​ ಮತ್ತು ಗೃಹಬಳಕೆ ಸಿಲಿಂಡರ್ ಗ್ಯಾಸ್​ ಬೆಲೆ ಏರಿಕೆಯಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಅದರಂತೆ ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಹಿಡಿದ ನಂತರ ಬಿಜೆಪಿ ಮೊದಲು ನೀಡುತ್ತಿರುವ ಉಡುಗೊರೆಯೇ ತೈಲ ಬೆಲೆ ಏರಿಕೆ ಮತ್ತು ಗ್ಯಾಸ್​ ಬೆಲೆ ಏರಿಕೆ ಎಂದು ಹೇಳಿದರು.

ಹಾಗೇ, ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೂಡ ಇಂಧನ ಮತ್ತು ಗ್ಯಾಸ್​ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ದೇಶದ ಹಲವು ನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ಬೆಲೆ 1000 ರೂಪಾಯಿ ತಲುಪಿದ್ದಕ್ಕೆ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು. ಇನ್ನು ಪೆಟ್ರೋಲ್​​-ಡೀಸೆಲ್​ ಬೆಲೆಯಲ್ಲೂ ಇನ್ನು ಮುಂದೆ ದೈನಂದಿನ ವಿಕಾಸ (ಪ್ರತಿ ದಿನ ಏರಿಕೆ) ಆಗುತ್ತದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೈಗೆಟಕುವ ಅಂಶಗಳೆಂದರೆ ಕೋಮುವಾದ ಮತ್ತು ದ್ವೇಷ. ಉಳಿದಿದ್ದೆಲ್ಲ ದುಬಾರಿ ಎಂದು ವ್ಯಂಗ್ಯ ಮಾಡಿದ್ದಾರೆ.

ನವೆಂಬರ್​​ಗೂ ಮೊದಲು ಪೆಟ್ರೋಲ್​-ಡೀಸೆಲ್​ ಬೆಲೆ ಪ್ರತಿದಿನ ಏರಿಕೆಯಾಗುತ್ತಿತ್ತು. ಆದರೆ ನವೆಂಬರ್​​ನಲ್ಲಿ ದೀಪಾವಳಿ ಉಡುಗೊರೆಯಾಗಿ ಕೇಂದ್ರ ಸರ್ಕಾರ ಪೆಟ್ರೋಲ್​-ಡೀಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 10 ರೂ. ಮತ್ತು 5ರೂಪಾಯಿ ಕಡಿತಗೊಳಿಸಿತ್ತು. ಅಂದಿನಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ.  ಅದರ ಬೆನ್ನಲ್ಲೇ ನಿನ್ನೆ (ಮಾರ್ಚ್​ 22) ಪೆಟ್ರೋಲ್​-ಡೀಸೆಲ್​ ಬೆಲೆಯನ್ನು 80 ಪೈಸೆ ಹೆಚ್ಚಳ ಮಾಡಲಾಗಿತ್ತು. ಇಂದೂ ಕೂಡ ಹೆಚ್ಚಿಸಲಾಗಿದೆ.

ಇದನ್ನೂ ಓದಿ: IPL 2022: ಐಪಿಎಲ್ ಆರಂಭದಲ್ಲೇ ಮುಂಬೈಗೆ ಆಘಾತ! ಬಲಿಷ್ಠ ಡೆಲ್ಲಿ ಎದುರಿನ ಪಂದ್ಯಕ್ಕೆ ತಂಡದ ಸ್ಟಾರ್ ಬ್ಯಾಟರ್ ಅಲಭ್ಯ

Published On - 8:12 am, Wed, 23 March 22

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ