Kochi Airport: ಶಾರ್ಜಾದಿಂದ ಬರುತ್ತಿದ್ದ ವಿಮಾನದಲ್ಲಿ ಸಮಸ್ಯೆ, ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತುಸ್ಥಿತಿ ಘೋಷಣೆ

ಕೊಚ್ಚಿ ವಿಮಾಣ ನಿಲ್ದಾಣದ ಅಧಿಕಾರಿಗಳು ಆತಂಕದಿಂದ ಗಮನಿಸುತ್ತಿರುವಂತೆಯೇ ವಿಮಾನವು ಭಾನುವಾರ ರಾತ್ರಿ 8:26ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಯಿತು.

Kochi Airport: ಶಾರ್ಜಾದಿಂದ ಬರುತ್ತಿದ್ದ ವಿಮಾನದಲ್ಲಿ ಸಮಸ್ಯೆ, ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತುಸ್ಥಿತಿ ಘೋಷಣೆ
ಕೊಚ್ಚಿ ವಿಮಾನ ನಿಲ್ದಾಣ
Follow us
| Edited By: ನಯನಾ ರಾಜೀವ್

Updated on: Jan 30, 2023 | 8:36 AM

ಕೊಚ್ಚಿ: ಶಾರ್ಜಾದಿಂದ ಬರುತ್ತಿದ್ದ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Cochin International Airport Limited – CIAL) ಭಾನುವಾರ ರಾತ್ರಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಅಧಿಕಾರಿಗಳು ಆತಂಕದಿಂದ ಗಮನಿಸುತ್ತಿರುವಂತೆಯೇ ವಿಮಾನವು ರಾತ್ರಿ 8:26ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ರಾತ್ರಿ 8:04ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತುರ್ತುಸ್ಥಿತಿ ಘೋಷಿಸಲಾಗಿತ್ತು.

‘ಶಾರ್ಜಾದಿಂದ ಕೊಚ್ಚಿಗೆ ಬರುತ್ತಿದ್ದ IX 412 ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದ ಅನುಮಾನ ಪೈಲಟ್‌ಗೆ ಬಂದಿತ್ತು. ಇದರಿಂದಾಗಿ ರಾತ್ರಿ 8:04ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. ವಿಮಾನವು ರಾತ್ರಿ 8:26ಕ್ಕೆ ಸುರಕ್ಷಿತವಾಗಿ ಲ್ಯಾಂಡ್ ಆಯಿತು’ ಎಂದು ಕೊಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರನ್‌ವೇ ಬಳಕೆಗೆ ಯಾವುದೇ ಸಮಸ್ಯೆ ಆಗಿಲ್ಲ. ವಿಮಾನ ನಿಲ್ದಾಣದ ಕಾರ್ಯಾಚರಣೆಗೂ ಯಾವುದೇ ತೊಂದರೆಯಾಗಿಲ್ಲ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆದ ನಂತರ ತುರ್ತುಪರಿಸ್ಥಿತಿಯನ್ನು ತೆರವುಗೊಳಿಸಲಾಯಿತು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಏರ್‌ ಇಂಡಿಯಾ ವಕ್ತಾರರು, ‘ಶಾರ್ಜಾ-ಕೊಚ್ಚಿ ವಿಮಾನವು ತುರ್ತು ಭೂಸ್ಪರ್ಶ ಮಾಡಿಲ್ಲ. ಹೈಡ್ರಾಲಿಕ್ ವ್ಯವಸ್ಥೆಯಲ್ಲಿ (Hydraulic Pressure System) ಸಮಸ್ಯೆಯಿರುವ ಕುರಿತು ಪೈಲಟ್‌ಗೆ ಅರಿವಾದ ತಕ್ಷಣ ಅವರು ವಿಮಾ ನಿಲ್ದಾಣ ನಿಯಂತ್ರಕರ (ATC) ಗಮನಕ್ಕೆ ತಂದರು. ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಂಡಿದ್ದರು. ಆದರೆ ವಿಮಾನವು ಸಹಜವಾಗಿಯೇ ಭೂಸ್ಪರ್ಶ ಮಾಡಿದೆ. ತುರ್ತು ಭೂಸ್ಪರ್ಶ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಚ್ಚಿಯಲ್ಲಿ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿಯೊಂದು ಅಪ್ಪಳಿಸಿದ ಕೆಲವೇ ಗಂಟೆಗಳಲ್ಲಿ ಏರ್‌ ಇಂಡಿಯಾ ವಿಮಾನದಲ್ಲಿ ಸಮಸ್ಯೆ ವರದಿಯಾಗಿತ್ತು. ಕೊಲ್ಕತ್ತಾಕ್ಕೆ ತೆರಳಲೆಂದು ಟೇಕಾಫ್ ಆಗಿದ್ದ ಏರ್‌ ಏಷ್ಯಾ ವಿಮಾನದಲ್ಲಿ 180 ಪ್ರಯಾಣಿಕರಿದ್ದರು. ಹಕ್ಕಿ ಅಪ್ಪಳಿಸಿದ ನಂತರ ವಿಮಾನವನ್ನು ಮತ್ತೆ ಕೊಚ್ಚಿ ನಿಲ್ದಾಣದಲ್ಲಿ ಇಳಿಸಿ ಸಂಪೂರ್ಣ ತಾಂತ್ರಿಕ ತಪಾಸಣೆ ನಡೆಸಲಾಯಿತು

ತಾಜಾ ಸುದ್ದಿ
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ