AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ

ಯುಎಸ್​​​ನ ಆಹಾರ ಮತ್ತು ಔಷಧ ಆಡಳಿತ ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಯಿಂದ ಅನುಮೋದನೆಗೊಂಡ ಯಾವುದೇ ಲಸಿಕೆ ಪಡೆದ ವಿದೇಶಿಯರು ನವೆಂಬರ್​ 8ರಿಂದ ಅಮೆರಿಕಕ್ಕೆ ಪ್ರಯಾಣ ಮಾಡಬಹುದು.

‘ಎರಡೂ ಡೋಸ್​ ಲಸಿಕೆ ಪಡೆದ ಭಾರತೀಯರು ಯುಎಸ್​ಗೆ ಪ್ರಯಾಣ ಮಾಡಬಹುದು’ -ಶ್ವೇತ ಭವನದಿಂದ ಹೊಸ ಮಾರ್ಗಸೂಚಿ ಘೋಷಣೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 16, 2021 | 10:53 AM

Share

ಕೊವಿಡ್​ 19 ಎರಡೂ ಡೋಸ್​ ಲಸಿಕೆ (Covid 19 Vaccine) ಪಡೆದ ಭಾರತೀಯರು ಅಮೆರಿಕಕ್ಕೆ ಪ್ರಯಾಣ ಮಾಡಬಹುದಾಗಿದೆ.  ಈ ಬಗ್ಗೆ ಶ್ವೇತಭವನ ಪ್ರಕಟಣೆ ಹೊರಡಿಸಿದ್ದು, ಎರಡೂ ಡೋಸ್​ ಲಸಿಕೆ (Corona Vaccine) ಪಡೆದ ವಿದೇಶಿ ಪ್ರಯಾಣಿಕರು ನವೆಂಬರ್​ 8ರಿಂದ ಯುಎಸ್​ಗೆ ಬರಬಹುದು ಎಂದು ಹೇಳಿದೆ. ಈ ಹೊಸ ಪ್ರಯಾಣ ಮಾರ್ಗಸೂಚಿಯನ್ನು ಸೆಪ್ಟೆಂಬರ್​​ನಲ್ಲಿಯೇ ರೂಪಿಸಲಾಗಿದೆ. ನವೆಂಬರ್​ ಪ್ರಾರಂಭದಿಂದ 33 ದೇಶಗಳ ಪ್ರಯಾಣಿಕರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆಗೆದುಹಾಕಲಾಗುತ್ತದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಈ ಹೊಸ ನೀತಿಯ ಎಲ್ಲ ತಾಂತ್ರಿಕ ಮತ್ತು ವ್ಯವಸ್ಥಾಪಕ ವಿವರಗಳನ್ನು ಇನ್ನೂ ಘೋಷಿಸಿಲ್ಲ.  .

ಯುಎಸ್​​​ನ ಆಹಾರ ಮತ್ತು ಔಷಧ ಆಡಳಿತ ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಯಿಂದ ಅನುಮೋದನೆಗೊಂಡ ಯಾವುದೇ ಲಸಿಕೆ ಪಡೆದ ವಿದೇಶಿಯರು ನವೆಂಬರ್​ 8ರಿಂದ ಅಮೆರಿಕಕ್ಕೆ ಪ್ರಯಾಣ ಮಾಡಬಹುದು.  ಭಾರತ, ಫ್ರಾನ್ಸ್​, ಇಟಲಿ, ಜರ್ಮನಿ, ಸ್ಪೇನ್​, ಚೀನಾ, ಇರಾನ್​, ಬ್ರೆಜಿಲ್​ ಇತರ ದೇಶಗಳ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗಿದೆ.  ಇನ್ನು ಭಾರತದಿಂದ ಅಮೆರಿಕಕ್ಕೆ ಹೋಗುವವರು ಏರ್​ಪೋರ್ಟ್​​ನಲ್ಲಿ ವಿಮಾನ ಹತ್ತುವ ಮೊದಲು ಅವರ ಎರಡೂ ಡೋಸ್​ ಲಸಿಕೆ ಪಡೆದ ಪ್ರಮಾಣಪತ್ರ ತೋರಿಸಬೇಕು. ಹಾಗೇ ಕೊವಿಡ್​ 19 ಟೆಸ್ಟ್​​​ ನೆಗೆಟಿವ್​ ರಿಪೋರ್ಟ್​​ ಸಲ್ಲಿಸಬೇಕು.

ಇದನ್ನೂ ಓದಿ: ದಾವಣಗೆರೆಯಲ್ಲಿ ಮಗುವಿನ ಮೇಲೆ ಹರಿದ ಕಾರು! ಮಗು ಸಾವು, ಗರ್ಭಿಣಿಗೆ ಗಾಯ

Karnataka Weather Today: ಕರ್ನಾಟಕದಲ್ಲಿ ಇಂದು ಹವಾಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ

Published On - 10:51 am, Sat, 16 October 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು