ಜಿ20 ಡಿಜಿಟಲ್ ಎಕಾನಮಿ ಸಚಿವರ ಸಭೆ; ಭಾರತದ ಪ್ರಮುಖ ಆದ್ಯತೆಗಳ ಬಗ್ಗೆ ಬೆಳಕುಚೆಲ್ಲಿದ ಅಶ್ವಿನಿ ವೈಷ್ಣವ್

G20 Digital Economy Ministers meeting; ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣದಲ್ಲಿ ಪ್ರಧಾನಿ ಮೋದಿ ನಂಬಿಕೆ ಇಟ್ಟಿದ್ದಾರೆ ಎಂದ ಅಶ್ವಿನಿ ವೈಷ್ಣವ್, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಕೆಲವು ಪ್ರವರ್ತಕ ಕಂಪನಿಗಳಿಗೆ ಸ್ಥಳಾವಕಾಶ ಒದಗಿಸುವ ಮೂಲಕ ಆವಿಷ್ಕಾರಗಳ ಕೇಂದ್ರವಾಗಿ ಬೆಂಗಳೂರು ಹೊರಹೊಮ್ಮಿರುವುದನ್ನು ಉಲ್ಲೇಖಿಸಿದರು.

ಜಿ20 ಡಿಜಿಟಲ್ ಎಕಾನಮಿ ಸಚಿವರ ಸಭೆ; ಭಾರತದ ಪ್ರಮುಖ ಆದ್ಯತೆಗಳ ಬಗ್ಗೆ ಬೆಳಕುಚೆಲ್ಲಿದ ಅಶ್ವಿನಿ ವೈಷ್ಣವ್
ಜಿ 20 ಡಿಜಿಟಲ್ ಎಕಾನಮಿ ಸದಸ್ಯರಾಷ್ಟ್ರಗಳ ಸಚಿವರ ಸಭೆಯಲ್ಲಿ ಅಶ್ವಿನಿ ವೈಷ್ಣವ್
Follow us
| Updated By: ಗಣಪತಿ ಶರ್ಮ

Updated on: Aug 19, 2023 | 4:58 PM

ಬೆಂಗಳೂರು, ಆಗಸ್ಟ್ 19: ಭಾರತದ ಜಿ20 (G20) ಅಧ್ಯಕ್ಷತೆಯಲ್ಲಿ ಡಿಜಿಟಲ್ ಎಕಾನಮಿ ವರ್ಕಿಂಗ್ ಗ್ರೂಪ್‌ ಆದ್ಯತೆಯ ಮೇರೆಗೆ ಪರಿಗಣಿಸಬೇಕಾಗಿರುವ ಪ್ರಮುಖ ಮೂರು ಕ್ಷೇತ್ರಗಳ ಬಗ್ಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಶನಿವಾರ ಪ್ರಸ್ತಾಪಿಸಿದರು. ಜಿ 20 ಡಿಜಿಟಲ್ ಎಕಾನಮಿ ಸದಸ್ಯರಾಷ್ಟ್ರಗಳ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್ (DPI), ಡಿಜಿಟಲ್ ಆರ್ಥಿಕತೆ ಭದ್ರತೆ ಮತ್ತು ಡಿಜಿಟಲ್ ಸ್ಕೇಲಿಂಗ್ ಸದ್ಯ ಪರಿಗಣಿಸಬೇಕಾಗಿರುವ ಪ್ರಮುಖ ಆದ್ಯತೆಯ ಕ್ಷೇತ್ರಗಳಾಗಿವೆ. ಇವು ಮೂರು ಸಹ ಪ್ರಧಾನಿ ನರೇಂದ್ರ ಮೋದಿಯವರ ಆದ್ಯತೆಗಳನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು.

ಈ ಆದ್ಯತೆಗಳು ಸುರಕ್ಷಿತ, ಎಲ್ಲರನ್ನೂ ಒಳಗೊಂಡ ಮತ್ತು ಎಲ್ಲರಿಗೂ ಸಮಾನವಾಗಿ ಡಿಜಿಟಲ್ ಆರ್ಥಿಕತೆಯನ್ನು ಬೆಳೆಸುವ ವಿಶಾಲ ಜಾಗತಿಕ ಕಾರ್ಯಸೂಚಿಯೊಂದಿಗೆ ಹೊಂದಾಣಿಕೆಯಾಗುತ್ತವೆ ಎಂದು ಅವರು ಹೇಳಿದರು.

ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣದಲ್ಲಿ ಪ್ರಧಾನಿ ಮೋದಿ ನಂಬಿಕೆ ಇಟ್ಟಿದ್ದಾರೆ ಎಂದ ಅಶ್ವಿನಿ ವೈಷ್ಣವ್, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಕೆಲವು ಪ್ರವರ್ತಕ ಕಂಪನಿಗಳಿಗೆ ಸ್ಥಳಾವಕಾಶ ಒದಗಿಸುವ ಮೂಲಕ ಆವಿಷ್ಕಾರಗಳ ಕೇಂದ್ರವಾಗಿ ಬೆಂಗಳೂರು ಹೊರಹೊಮ್ಮಿರುವುದನ್ನು ಉಲ್ಲೇಖಿಸಿದರು.

ಡಿಜಿಟಲ್ ಆರ್ಥಿಕತೆಯ ಬೆಳವಣಿಗೆಯನ್ನು ವ್ಯಾಖ್ಯಾನಿಸುವ ವಿಷಯಗಳ ಬಗ್ಗೆ ಉದ್ದೇಶಪೂರ್ವಕವಾಗಿ ನಾವು ಒಟ್ಟುಗೂಡಿದ್ದೇವೆ. ವಿಶ್ವದ ಕೆಲವು ಕಂಪನಿಗಳಿಗೆ ಬೆಂಗಳೂರು ನೆಲೆಯಾಗಿದೆ ಎಂದು ಅವರು ಹೇಳಿದರು.

ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿ20 ಡಿಜಿಟಲ್ ಎಕಾನಮಿ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಳೆದ 9 ವರ್ಷಗಳಲ್ಲಿ ಭಾರತದಲ್ಲಿ ಆಗಿರುವ ಅಭೂತಪೂರ್ವ ಡಿಜಿಟಲ್ ಪರಿವರ್ತನೆಗೆ 2015 ರಲ್ಲಿ ಆರಂಭಿಸಲಾಗಿದ್ದ ಡಿಜಿಟಲ್ ಇಂಡಿಯಾ ಉಪಕ್ರಮವೇ ಕಾರಣ ಎಂದು ಅವರು ಹೇಳಿದರು.

ಭಾರತದ ಡಿಜಿಟಲ್ ರೂಪಾಂತರವು ಹೊಸತನದ ಕುರಿತಾದ ಅಚಲ ನಂಬಿಕೆ, ತ್ವರಿತ ಅನುಷ್ಠಾನ ಮತ್ತ ಆ ನಿಟ್ಟಿನಲ್ಲಿ ದೇಶವು ಹೊಂದಿರುವ ಬದ್ಧತೆಯಿಂದ ಸಾಧ್ಯವಾಗಿದೆ ಎಂದೂ ಪ್ರಧಾನಿ ಹೇಳಿದರು.

ದೇಶದ 850 ಮಿಲಿಯನ್ ಇಂಟರ್ನೆಟ್ ಬಳಕೆದಾರರು ವಿಶ್ವದಲ್ಲೇ ಅತಿಕಡಿಮೆ ದರದ ಡೇಟಾ ಸೇವೆಯನ್ನು ಆನಂದಿಸುತ್ತಿದ್ದಾರೆ. ಇದು ಭಾರತದ ಡಿಜಿಟಲ್ ರೂಪಾಂತರದ ಪ್ರಮಾಣ, ವೇಗ ಮತ್ತು ವ್ಯಾಪ್ತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: 9 ವರ್ಷದಲ್ಲಿ “ಜನ್ ಧನ್ ಖಾತೆ”ಯ ಸದುಪಯೋಗ ಪಡೆದುಕೊಂಡ 50 ಕೋಟಿ ಜನ

ಜನ್ ಧನ್ ಬ್ಯಾಂಕ್ ಖಾತೆಗಳು, ಆಧಾರ್, ಯುಪಿಐ ಪಾವತಿ ವ್ಯವಸ್ಥೆಗಳಡಿ ಪ್ರತಿ ತಿಂಗಳು ಸುಮಾರು 10 ಶತಕೋಟಿ ವಹಿವಾಟುಗಳು ನಡೆಯುತ್ತವೆ. ಇದು ಜಾಗತಿಕ ಸಮುದಾಯದಲ್ಲಿ ನಡೆಯುವ ಒಟ್ಟು ಡಿಜಿಟಲ್ ಆರ್ಥಿಕ ವಹಿವಾಟಿನ ಶೇ 45 ರಷ್ಟಾಗಿದೆ ಎಂದು ಅವರು ತಿಳಿಸಿದರು.

ನೇರ ನಗದು ವರ್ಗಾವಣೆಯಿಂದಾಗಿ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪುತ್ತಿವೆ. ಸೋರಿಕೆಗೆ ತಡೆಯಾಗಿದೆ. ಸಂಪೂರ್ಣ ಡಿಜಿಟಲೀಕರಣಗೊಂಡ ತೆರಿಗೆ ವ್ಯವಸ್ಥೆಗಳು ಪಾರದರ್ಶಕತೆ ಮತ್ತು ಇ-ಆಡಳಿತವನ್ನು ಉತ್ತೇಜಿಸುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ