AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Summit: ‘ವಿಶ್ವವೇ ಒಂದು ಕುಟುಂಬ’ ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ

ಭಾರತವು ಈ ವರ್ಷ 9 ನೇ ಅಂತರರಾಷ್ಟ್ರೀಯ ಯೋಗ ದಿನದ ಅಧ್ಯಕ್ಷತೆಯನ್ನು ವಹಿಸಿದೆ. ವಿಶ್ವಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು.

G20 Summit: 'ವಿಶ್ವವೇ ಒಂದು ಕುಟುಂಬ' ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ
ಜಿ20 ಸಭೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 11, 2023 | 1:44 PM

Share

ದೆಹಲಿ: ಭಾರತ ಆಯೋಜಿಸಿರುವ ಈ ವರ್ಷದ ಜಿ-20 ಶೃಂಗಸಭೆಯ (G20 Summit) ಟ್ಯಾಗ್‌ಲೈನ್‌ ವಸುದೈವ ಕುಟುಂಬಕಂ (Vasudhaiva Kutumbakam). ಇದರ ಅರ್ಥ, ಇಡೀ ವಿಶ್ವವೇ ಒಂದು ಕುಟುಂಬ. ಈ ಟ್ಯಾಗ್‌ಲೈನ್‌ನಿಂದ ಭಾರತವು ಇಡೀ ಜಗತ್ತಿಗೆ ಏಕತೆಯ ಸಂದೇಶವನ್ನು ಕಳುಹಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ. ಆದರೆ ಟ್ಯಾಗ್ ಲೈನ್ ಮೂಲಕ ಮಾತ್ರವಲ್ಲ, ಅಂತಾರಾಷ್ಟ್ರೀಯ ಯೋಗ ದಿನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಭಾರತವು ‘ಒಂದು ಕುಟುಂಬ’ ಎಂಬ ಸಂದೇಶವನ್ನು ನೀಡಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆ ನವದೆಹಲಿಯಲ್ಲಿ ನಡೆಯಲಿದೆ. ಇದಕ್ಕಾಗಿ ಜನವರಿಯಿಂದಲೇ ತಯಾರಿ ಶುರುವಾಗಿದೆ. ಎಲ್ಲಾ ಜಿ-20 ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಭಾರತದ ವಿವಿಧ ಭಾಗಗಳಲ್ಲಿ ಪ್ರತ್ಯೇಕ ಸಭೆಗಳನ್ನು ನಡೆಸಲಾಗುತ್ತಿದ್ದು ಕೇಂದ್ರ ಸರ್ಕಾರ ಪ್ರತಿ ಸಭೆಯ ಮೂಲಕ ಏಕತೆಯ ಸಂದೇಶವನ್ನು ಸಾರಲಿದೆ.

ಭಾರತವು ಈ ವರ್ಷ 9 ನೇ ಅಂತರರಾಷ್ಟ್ರೀಯ ಯೋಗ ದಿನದ ಅಧ್ಯಕ್ಷತೆಯನ್ನು ವಹಿಸಿದೆ. ವಿಶ್ವಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. 135 ಕ್ಕೂ ಹೆಚ್ಚು ದೇಶಗಳಿಂದ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವ ದಾಖಲೆಯನ್ನು ಸ್ಥಾಪಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ಮೋದಿ ಏಕತೆಯ ಸಂದೇಶವನ್ನೂ ನೀಡಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರವನ್ನು ವಿಸ್ತರಿಸಲು ಭಾರತದ ಪ್ರವಾಸೋದ್ಯಮ ಸಚಿವಾಲಯವು ಜಿ 20 ದೇಶಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಹಲವಾರು ಬಾರಿ ಸಭೆ ನಡೆಸಿದೆ. ಆ ಸಭೆಗಳಲ್ಲಿ, ದೇಶದ ಸಂಸ್ಕೃತಿಯನ್ನು ಜಾಗತಿಕ ವೇದಿಕೆಗೆ ತರುವ ಮೂಲಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಉಪಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಭಾರತದ ‘ವೈವಿಧ್ಯತೆಯಲ್ಲಿ ಏಕತೆ’ಯ ಸಂದೇಶವನ್ನು ಎತ್ತಿ ತೋರಿಸಲಾಯಿತು. ಮತ್ತೊಮ್ಮೆ, ಜಿ 20 ರ ಮೂರನೇ ಸಭೆಯಲ್ಲಿ ಜಾಗತಿಕ ಆರ್ಥಿಕತೆಯಲ್ಲಿ ಭಾರತದ ಪಾಲ್ಗೊಳ್ಳುವಿಕೆಯ ಬಗ್ಗೆ ಚರ್ಚಿಸಲಾಯಿತು. ಅಷ್ಟೇ ಅಲ್ಲ, ಪುರುಷರಿಗೆ ಸರಿಸಮಾನವಾಗಿ ಮಹಿಳೆಯರು ಕುಳಿತಿದ್ದಾರೆ ಎಂಬ ಅಂಶವೂ ‘ಮಹಿಳೆ-20 ಶೃಂಗಸಭೆ’ ಮೂಲಕ ಬೆಳಕಿಗೆ ಬಂದಿದೆ.

ಪ್ರಸ್ತುತ ‘ಜಾಗತಿಕ ತಾಪಮಾನ’ ತಡೆಯಲು ಪರಿಸರ ಸಂರಕ್ಷಣೆ, ಗಿಡ ನೆಡುವ ಬಗ್ಗೆ ಗಮನಹರಿಸುವುದು ಅತೀ ಅಗತ್ಯವಾಗಿದ್ದು, ಈ ವಿಚಾರದಲ್ಲಿ ಎಲ್ಲ ದೇಶಗಳು ಜಂಟಿಯಾಗಿ ಮುಂದೆ ಬರಬೇಕಿದೆ ಎಂದು ಜಿ-20 ಸಭೆಯಲ್ಲೂ ಗಮನ ಸೆಳೆದಿದೆ. ಮರಗಳನ್ನು ನೆಡುವ ಮೂಲಕ ಇಡೀ ಜಗತ್ತನ್ನು ಉಳಿಸುವ ಸಂದೇಶವನ್ನು ವಿಶ್ವ ಪರಿಸರ ದಿನದಂದು ಎತ್ತಿ ಹಿಡಿದಿರುವಂತೆ, ಜಿ-20 ಸಭೆಯಲ್ಲಿ ನೀರಿನ ಸಂರಕ್ಷಣೆಯ ವಿಷಯವೂ ಪ್ರಮುಖವಾಗಿದೆ.

ಇದನ್ನೂ ಓದಿ:Flood Crisis: ಪ್ರವಾಹ ಬಿಕ್ಕಟ್ಟು ಎದುರಿಸಲು ಹಿಮಾಚಲ, ಉತ್ತರಾಖಂಡ ಸರ್ಕಾರಕ್ಕೆ ಸೂಕ್ತ ಸಹಾಯದ ಭರವಸೆ ನೀಡಿದ ಪ್ರಧಾನಿ ಮೋದಿ

ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಹೈದರಾಬಾದ್‌ನಲ್ಲಿ ಮತ್ತೆ ವಿಶೇಷ ಸಭೆ ಆಯೋಜಿಸಲಾಗಿದೆ. ಆ ಸಭೆಯಲ್ಲಿ ರಾಗಿ ಆರ್ಥಿಕ ವರ್ಷವಾಗಿ ರಾಗಿಗೆ ಒತ್ತು ನೀಡಲಾಯಿತು. ಎಲ್ಲರಿಗೂ ಆಹಾರ, ಆರೋಗ್ಯ ಸೇವೆಗಳ ಸಮಸ್ಯೆಯನ್ನು ಮತ್ತೆ ಎತ್ತಿ ತೋರಿಸಲಾಗಿದೆ. ಈ ಬಾರಿಯ ಜಿ-20 ಶೃಂಗಸಭೆಯಲ್ಲಿ ದಕ್ಷಿಣ ಜಗತ್ತಿಗೆ ಅಭಿವೃದ್ಧಿಯೇ ಮುಖ್ಯ ವಿಷಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!