AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 Summit: ‘ವಿಶ್ವವೇ ಒಂದು ಕುಟುಂಬ’ ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ

ಭಾರತವು ಈ ವರ್ಷ 9 ನೇ ಅಂತರರಾಷ್ಟ್ರೀಯ ಯೋಗ ದಿನದ ಅಧ್ಯಕ್ಷತೆಯನ್ನು ವಹಿಸಿದೆ. ವಿಶ್ವಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು.

G20 Summit: 'ವಿಶ್ವವೇ ಒಂದು ಕುಟುಂಬ' ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ
ಜಿ20 ಸಭೆ
ರಶ್ಮಿ ಕಲ್ಲಕಟ್ಟ
|

Updated on: Jul 11, 2023 | 1:44 PM

Share

ದೆಹಲಿ: ಭಾರತ ಆಯೋಜಿಸಿರುವ ಈ ವರ್ಷದ ಜಿ-20 ಶೃಂಗಸಭೆಯ (G20 Summit) ಟ್ಯಾಗ್‌ಲೈನ್‌ ವಸುದೈವ ಕುಟುಂಬಕಂ (Vasudhaiva Kutumbakam). ಇದರ ಅರ್ಥ, ಇಡೀ ವಿಶ್ವವೇ ಒಂದು ಕುಟುಂಬ. ಈ ಟ್ಯಾಗ್‌ಲೈನ್‌ನಿಂದ ಭಾರತವು ಇಡೀ ಜಗತ್ತಿಗೆ ಏಕತೆಯ ಸಂದೇಶವನ್ನು ಕಳುಹಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ. ಆದರೆ ಟ್ಯಾಗ್ ಲೈನ್ ಮೂಲಕ ಮಾತ್ರವಲ್ಲ, ಅಂತಾರಾಷ್ಟ್ರೀಯ ಯೋಗ ದಿನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಭಾರತವು ‘ಒಂದು ಕುಟುಂಬ’ ಎಂಬ ಸಂದೇಶವನ್ನು ನೀಡಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆ ನವದೆಹಲಿಯಲ್ಲಿ ನಡೆಯಲಿದೆ. ಇದಕ್ಕಾಗಿ ಜನವರಿಯಿಂದಲೇ ತಯಾರಿ ಶುರುವಾಗಿದೆ. ಎಲ್ಲಾ ಜಿ-20 ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಭಾರತದ ವಿವಿಧ ಭಾಗಗಳಲ್ಲಿ ಪ್ರತ್ಯೇಕ ಸಭೆಗಳನ್ನು ನಡೆಸಲಾಗುತ್ತಿದ್ದು ಕೇಂದ್ರ ಸರ್ಕಾರ ಪ್ರತಿ ಸಭೆಯ ಮೂಲಕ ಏಕತೆಯ ಸಂದೇಶವನ್ನು ಸಾರಲಿದೆ.

ಭಾರತವು ಈ ವರ್ಷ 9 ನೇ ಅಂತರರಾಷ್ಟ್ರೀಯ ಯೋಗ ದಿನದ ಅಧ್ಯಕ್ಷತೆಯನ್ನು ವಹಿಸಿದೆ. ವಿಶ್ವಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. 135 ಕ್ಕೂ ಹೆಚ್ಚು ದೇಶಗಳಿಂದ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವ ದಾಖಲೆಯನ್ನು ಸ್ಥಾಪಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ಮೋದಿ ಏಕತೆಯ ಸಂದೇಶವನ್ನೂ ನೀಡಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರವನ್ನು ವಿಸ್ತರಿಸಲು ಭಾರತದ ಪ್ರವಾಸೋದ್ಯಮ ಸಚಿವಾಲಯವು ಜಿ 20 ದೇಶಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಹಲವಾರು ಬಾರಿ ಸಭೆ ನಡೆಸಿದೆ. ಆ ಸಭೆಗಳಲ್ಲಿ, ದೇಶದ ಸಂಸ್ಕೃತಿಯನ್ನು ಜಾಗತಿಕ ವೇದಿಕೆಗೆ ತರುವ ಮೂಲಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಉಪಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಭಾರತದ ‘ವೈವಿಧ್ಯತೆಯಲ್ಲಿ ಏಕತೆ’ಯ ಸಂದೇಶವನ್ನು ಎತ್ತಿ ತೋರಿಸಲಾಯಿತು. ಮತ್ತೊಮ್ಮೆ, ಜಿ 20 ರ ಮೂರನೇ ಸಭೆಯಲ್ಲಿ ಜಾಗತಿಕ ಆರ್ಥಿಕತೆಯಲ್ಲಿ ಭಾರತದ ಪಾಲ್ಗೊಳ್ಳುವಿಕೆಯ ಬಗ್ಗೆ ಚರ್ಚಿಸಲಾಯಿತು. ಅಷ್ಟೇ ಅಲ್ಲ, ಪುರುಷರಿಗೆ ಸರಿಸಮಾನವಾಗಿ ಮಹಿಳೆಯರು ಕುಳಿತಿದ್ದಾರೆ ಎಂಬ ಅಂಶವೂ ‘ಮಹಿಳೆ-20 ಶೃಂಗಸಭೆ’ ಮೂಲಕ ಬೆಳಕಿಗೆ ಬಂದಿದೆ.

ಪ್ರಸ್ತುತ ‘ಜಾಗತಿಕ ತಾಪಮಾನ’ ತಡೆಯಲು ಪರಿಸರ ಸಂರಕ್ಷಣೆ, ಗಿಡ ನೆಡುವ ಬಗ್ಗೆ ಗಮನಹರಿಸುವುದು ಅತೀ ಅಗತ್ಯವಾಗಿದ್ದು, ಈ ವಿಚಾರದಲ್ಲಿ ಎಲ್ಲ ದೇಶಗಳು ಜಂಟಿಯಾಗಿ ಮುಂದೆ ಬರಬೇಕಿದೆ ಎಂದು ಜಿ-20 ಸಭೆಯಲ್ಲೂ ಗಮನ ಸೆಳೆದಿದೆ. ಮರಗಳನ್ನು ನೆಡುವ ಮೂಲಕ ಇಡೀ ಜಗತ್ತನ್ನು ಉಳಿಸುವ ಸಂದೇಶವನ್ನು ವಿಶ್ವ ಪರಿಸರ ದಿನದಂದು ಎತ್ತಿ ಹಿಡಿದಿರುವಂತೆ, ಜಿ-20 ಸಭೆಯಲ್ಲಿ ನೀರಿನ ಸಂರಕ್ಷಣೆಯ ವಿಷಯವೂ ಪ್ರಮುಖವಾಗಿದೆ.

ಇದನ್ನೂ ಓದಿ:Flood Crisis: ಪ್ರವಾಹ ಬಿಕ್ಕಟ್ಟು ಎದುರಿಸಲು ಹಿಮಾಚಲ, ಉತ್ತರಾಖಂಡ ಸರ್ಕಾರಕ್ಕೆ ಸೂಕ್ತ ಸಹಾಯದ ಭರವಸೆ ನೀಡಿದ ಪ್ರಧಾನಿ ಮೋದಿ

ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಹೈದರಾಬಾದ್‌ನಲ್ಲಿ ಮತ್ತೆ ವಿಶೇಷ ಸಭೆ ಆಯೋಜಿಸಲಾಗಿದೆ. ಆ ಸಭೆಯಲ್ಲಿ ರಾಗಿ ಆರ್ಥಿಕ ವರ್ಷವಾಗಿ ರಾಗಿಗೆ ಒತ್ತು ನೀಡಲಾಯಿತು. ಎಲ್ಲರಿಗೂ ಆಹಾರ, ಆರೋಗ್ಯ ಸೇವೆಗಳ ಸಮಸ್ಯೆಯನ್ನು ಮತ್ತೆ ಎತ್ತಿ ತೋರಿಸಲಾಗಿದೆ. ಈ ಬಾರಿಯ ಜಿ-20 ಶೃಂಗಸಭೆಯಲ್ಲಿ ದಕ್ಷಿಣ ಜಗತ್ತಿಗೆ ಅಭಿವೃದ್ಧಿಯೇ ಮುಖ್ಯ ವಿಷಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ