AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಜಿ20 ಶೃಂಗಸಭೆಗಾಗಿ ಸಿದ್ಧತೆ: ಧೌಲಾ ಕುವಾನ್‌ನಲ್ಲಿ ಶಿವಲಿಂಗ ಆಕಾರದ ಕಾರಂಜಿ ಸ್ಥಾಪಿಸಿದ್ದಕ್ಕೆ ಬಿಜೆಪಿ-ಎಎಪಿ ನಡುವೆ ವಾಕ್ಸಮರ

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಭಾರತ್ ರಾಷ್ಟ್ರ ಸಮಿತಿ (BRS) ನಾಯಕ ವೈ ಸತೀಶ್ ರೆಡ್ಡಿ ಮೋದಿ ಸರ್ಕಾರ ಶಿವಲಿಂಗವನ್ನು ಜಿ20 ಶೃಂಗಸಭೆಗಾಗಿ ಕಾರಂಜಿಯಾಗಿ ಬಳಸುತ್ತಿರುವುದು ಹಿಂದೂ ಧರ್ಮದ ಅಪಹಾಸ್ಯ. ಶಿವಲಿಂಗದ ಪವಿತ್ರತೆಯನ್ನು ವಿನೋದಕ್ಕಾಗಿ ಕ್ಷುಲ್ಲಕಗೊಳಿಸಲಾಗುತ್ತಿದೆಯೇ? ಇದು ನಾಚಿಕೆಗೇಡಿನ ಸಂಗತಿಯಾಗಿದೆ.ಇದನ್ನು ಬೇಗನೆ ತೆಗೆದುಹಾಕಬೇಕು ಎಂದಿದ್ದಾರೆ.

ದೆಹಲಿಯಲ್ಲಿ ಜಿ20 ಶೃಂಗಸಭೆಗಾಗಿ ಸಿದ್ಧತೆ: ಧೌಲಾ ಕುವಾನ್‌ನಲ್ಲಿ ಶಿವಲಿಂಗ ಆಕಾರದ ಕಾರಂಜಿ ಸ್ಥಾಪಿಸಿದ್ದಕ್ಕೆ ಬಿಜೆಪಿ-ಎಎಪಿ ನಡುವೆ ವಾಕ್ಸಮರ
ಶಿವಲಿಂಗ ಆಕಾರದ ಕಾರಂಜಿ
ರಶ್ಮಿ ಕಲ್ಲಕಟ್ಟ
|

Updated on:Sep 01, 2023 | 3:53 PM

Share

ದೆಹಲಿ ಸೆಪ್ಟೆಂಬರ್ 01: ದೆಹಲಿ ಜಿ20 ಶೃಂಗಸಭೆಗಾಗಿ (G20 Summit) ಸಿದ್ಧವಾಗಿದೆ. ಇದಕ್ಕಾಗಿ ನಡೆಯುತ್ತಿರುವ ಸೌಂದರ್ಯೀಕರಣದ ಭಾಗವಾಗಿ, ರಾಷ್ಟ್ರ ರಾಜಧಾನಿಯ ಧೌಲಾ ಕುವಾನ್‌ನಲ್ಲಿ (Dhaula Kuan) ಸ್ಥಾಪಿಸಲಾದ ಶಿವಲಿಂಗ (Shivling) ಆಕಾರದ ಕಾರಂಜಿಗಳು ವಿವಾದವನ್ನು ಹುಟ್ಟುಹಾಕಿದೆ. ‘ಶಿವಲಿಂಗ’ಕ್ಕೆ ಅಗೌರವ ತೋರಿದ ಮತ್ತು ಅದನ್ನು ಅಲಂಕಾರಿಕ ಉದ್ದೇಶಕ್ಕಾಗಿ ಬಳಸಿದ್ದಕ್ಕಾಗಿ ಎಎಪಿ (AAP) ಸರ್ಕಾರವನ್ನು ಬಿಜೆಪಿ (BJP) ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಮಿತಿಯ ಚಾರು ಪ್ರಗ್ಯಾ, ಶಿವಲಿಂಗವು ಅಲಂಕಾರಕ್ಕಾಗಿ ಅಲ್ಲ. ಧೌಲಾ ಕುವಾನ್ ಜ್ಞಾನವಾಪಿ ಅಲ್ಲ. ದೆಹಲಿಯ ಎಎಪಿ ಸರ್ಕಾರವು ಧೌಲಾ ಕುವಾನ್‌ನಲ್ಲಿ ಶಿವಲಿಂಗ ಆಕಾರದ ಕಾರಂಜಿಗಳನ್ನು ಸ್ಥಾಪಿಸಿದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಎಎಪಿ ಸಂಸದ ಸಂಜಯ್ ಸಿಂಗ್ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿಕೆ ಸಕ್ಸೇನಾ ಶಿವಲಿಂಗಗಳನ್ನು ಅಗೌರವಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಕ್ಷಮೆಯಾಚಿಸಬೇಕು ಮತ್ತು ದೆಹಲಿ ಎಲ್‌ಜಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಂಗ್ ಒತ್ತಾಯಿಸಿದ್ದಾರೆ.

ಮೋದಿ ಜಿ ನಾಯಕತ್ವದಲ್ಲಿ ಶಿವಲಿಂಗವನ್ನು ಅವಮಾನಿಸಲಾಗಿದೆ ಮತ್ತು ನಾಚಿಕೆಯಿಲ್ಲದ ಬಿಜೆಪಿ ಜನರು ಮೋದಿಯನ್ನು ಹೊಗಳುತ್ತಿದ್ದಾರೆ. ದೆಹಲಿಯ ಎಲ್ ಜಿ ಶಿವಲಿಂಗಕ್ಕೆ ಅಗೌರವ ತೋರುವ ಮೂಲಕ ಹೆಮ್ಮೆ ಪಡುತ್ತಿದ್ದಾರೆ. ಬಿಜೆಪಿ ದೇಶದ ಕ್ಷಮೆ ಯಾಚಿಸಬೇಕು, ಎಲ್‌ಜಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಎಪಿ ನಾಯಕ ಹೇಳಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಭಾರತ್ ರಾಷ್ಟ್ರ ಸಮಿತಿ (BRS) ನಾಯಕ ವೈ ಸತೀಶ್ ರೆಡ್ಡಿ ಮೋದಿ ಸರ್ಕಾರ ಶಿವಲಿಂಗವನ್ನು ಜಿ20 ಶೃಂಗಸಭೆಗಾಗಿ ಕಾರಂಜಿಯಾಗಿ ಬಳಸುತ್ತಿರುವುದು ಹಿಂದೂ ಧರ್ಮದ ಅಪಹಾಸ್ಯ. ಶಿವಲಿಂಗದ ಪವಿತ್ರತೆಯನ್ನು ವಿನೋದಕ್ಕಾಗಿ ಕ್ಷುಲ್ಲಕಗೊಳಿಸಲಾಗುತ್ತಿದೆಯೇ? ಇದು ನಾಚಿಕೆಗೇಡಿನ ಸಂಗತಿಯಾಗಿದೆ.ಇದನ್ನು ಬೇಗನೆ ತೆಗೆದುಹಾಕಬೇಕು ಎಂದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಜಿ 20 ಶೃಂಗಸಭೆಗಾಗಿ ದೆಹಲಿಯಲ್ಲಿ ಸೌಂದರ್ಯೀಕರಣ ಯೋಜನೆಗಳಿಗೆ ಹಣ ನೀಡುವ ಬಗ್ಗೆ ಬಿಜೆಪಿ ಮತ್ತು ಎಎಪಿ ನಡುವೆ ಮಾತಿನ ಸಮರ ನಡೆಯುತ್ತಿದೆ.

ಸೋಮವಾರ, ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು ದೆಹಲಿಯಲ್ಲಿನ ಯೋಜನೆಗಳಿಗೆ ಹಣ ಮಂಜೂರು ಮಾಡಲು ಲೆಫ್ಟಿನೆಂಟ್ ಜನರಲ್ ವಿಕೆ ಸಕ್ಸೇನಾ ಅವರಿಗೆ ಸಂವಿಧಾನವು ಅಧಿಕಾರವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಪಿಡಬ್ಲ್ಯೂಡಿ ಮತ್ತು ಎಂಸಿಡಿ ಮಾಡುವ ಯಾವುದೇ ಕೆಲಸವನ್ನು ತೆರಿಗೆದಾರರ ಹಣವನ್ನು ಬಳಸಿ ಮಾಡಲಾಗುತ್ತದೆ. ಪಿಡಬ್ಲ್ಯುಡಿಗೆ ಕೇಂದ್ರದಿಂದ ಒಂದು ಪೈಸೆಯೂ ಬಂದಿಲ್ಲ. ಪಿಡಬ್ಲ್ಯುಡಿಯಿಂದ ಒಟ್ಟು 89 ರಸ್ತೆಗಳನ್ನು ಸುಂದರಗೊಳಿಸಲಾಗಿದೆ. ಸ್ವಚ್ಛತೆ, ಮರಗಳನ್ನು ನೆಡುವುದು ಮತ್ತು ಅವುಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯವನ್ನು ಇದು ಒಳಗೊಂಡಿದೆ ಎಂದು ಎಎಪಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: 7 ಲಕ್ಷ ಅಲಂಕಾರಿಕ ಸಸ್ಯಗಳು, ರಸ್ತೆ ಬದಿಯಲ್ಲಿ ಲಂಗೂರ್ ಕಟೌಟ್: ಜಿ20 ಶೃಂಗಸಭೆಗೆ ದೆಹಲಿ ಹೇಗೆ ಸಿದ್ಧತೆ ನಡೆಸುತ್ತಿದೆ?

ಅವರಿಗೆ ಪ್ರತಿಕ್ರಿಯಿಸಿದ ಎಲ್‌ಜಿ ಸಕ್ಸೇನಾ, ಮಾಡಿದ ಕೆಲಸಕ್ಕೆ ಯಾರಾದರೂ ಕ್ರೆಡಿಟ್ ತೆಗೆದುಕೊಳ್ಳಲು ಬಯಸಿದರೆ, ಅವರು ಮಾಡಬಹುದು, ಆದರೆ ಇಲ್ಲಿರುವ ಸನ್ನಿವೇಶ ನೋಡಿದರ ಕೇಂದ್ರವು ಉತ್ತಮ ಕೆಲಸ ಮಾಡುತ್ತಿದೆ ಎಂದು ಅರ್ಥ. “ನಾನು ಅದರ ಬಗ್ಗೆ ಹೆಚ್ಚು ಕಾಮೆಂಟ್ ಮಾಡಲು ಬಯಸುವುದಿಲ್ಲ. ಆದರೆ ನಾವು ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ ಎಂದು ಮಾತ್ರ ಹೇಳಲು ಬಯಸುತ್ತೇನೆ. ಯಾರಾದರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಬಯಸಿದರೆ, ಅವರು ಮಾಡಬಹುದು. ನಾನು ಈ ವಿಷಯದಿಂದ ತೃಪ್ತನಾಗಿದ್ದೇನೆ, ನಾನು ಕೆಲವು ಕೆಲಸಗಳನ್ನು ಮಾಡುತ್ತಿದ್ದೇನೆ. ಯಾರಾದರೂ ಅದರ ಕ್ರೆಡಿಟ್ ಪಡೆಯಲು ಬಯಸಿದರೆ, ನಾವು ಒಳ್ಳೆಯದನ್ನು ಮಾಡುತ್ತಿದ್ದೇವೆ ಎಂದು ಅರ್ಥ ಎಂದ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ದೆಹಲಿಯಲ್ಲಿ G20 ಶೃಂಗಸಭೆಯು ಸೆಪ್ಟೆಂಬರ್ 9 ರಂದು ಪ್ರಾರಂಭವಾಗದ್ದು, ಸದಸ್ಯ ರಾಷ್ಟ್ರಗಳು ಮತ್ತು ಅತಿಥಿ ರಾಷ್ಟ್ರಗಳ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Fri, 1 September 23

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು