AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 ಸಭೆಯಲ್ಲಿ ಭಾಗಿಯಾಗಲು ದೆಹಲಿಗೆ ಆಗಮಿಸಿದ್ದ ಚೀನಾ ನಿಯೋಗದ ಬಳಿ ಕಂಡುಬಂದಿತ್ತು ನಿಗೂಢ ಬ್ಯಾಗ್

ರಾಜತಾಂತ್ರಿಕ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ಭದ್ರತಾ ಸಿಬ್ಬಂದಿ ಬ್ಯಾಗ್‌ಗಳನ್ನು ಹೋಟೆಲ್‌ಗೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರು. ಆದರೆ ಚೀಲದೊಳಗೆ ಸಿಕ್ಕ ವಸ್ತುಗಳ ಬಗ್ಗೆ ಅನುಮಾನ ಬಂದಾಗ ಸಿಬ್ಬಂದಿ ತ್ವರಿತವಾಗಿ ಬ್ಯಾಗ್‌ಗಳನ್ನು ಸ್ಕ್ಯಾನ್ ಮಾಡಲು ನಿರ್ಧರಿಸಿದರು. ಆದರೆ ಚೀನೀ ನಿಯೋಗವು ತಪಾಸಣೆಯನ್ನು ವಿರೋಧಿಸಿದಾಗ ಅಲ್ಲಿ ಮಾತಿನ ಚಕಮಕಿ ಉಂಟಾಗಿದೆ.

G20 ಸಭೆಯಲ್ಲಿ ಭಾಗಿಯಾಗಲು ದೆಹಲಿಗೆ ಆಗಮಿಸಿದ್ದ ಚೀನಾ ನಿಯೋಗದ ಬಳಿ ಕಂಡುಬಂದಿತ್ತು ನಿಗೂಢ ಬ್ಯಾಗ್
ಜಿ20 ಶೃಂಗಸಭೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 14, 2023 | 1:30 PM

Share

ದೆಹಲಿ ಸೆಪ್ಟೆಂಬರ್ 14: G20 ಶೃಂಗಸಭೆ (G20 Summit) ಮುಗಿದಿದ್ದು, ಚೀನಾದ (China) ಅಧ್ಯಕ್ಷ ಷಿ ಜಿನ್‌ಪಿಂಗ್ (Xi Jinping) ಅವರ ಅನುಪಸ್ಥಿತಿಯು ರಾಜತಾಂತ್ರಿಕತೆಯ ವಲಯದಲ್ಲಿ ಪ್ರಮುಖ ಸುದ್ದಿಯಾಗಿತ್ತು.  ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ನಡೆದ ಜಿ20 ನಾಯಕರ ಶೃಂಗಸಭೆಯಲ್ಲಿ ಚೀನಾದ ಪ್ರಧಾನಿ ಲಿ ಕಿಯಾಂಗ್ (Li Qiang) ಭಾಗಿಯಾಗಿದ್ದರು. ಆದಾಗ್ಯೂ ಶೃಂಗಸಭೆಯ ಸಮಯದಲ್ಲಿ ಚೀನಾದ ಪ್ರತಿನಿಧಿಗಳು ತಂಗಿದ್ದ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ನಾಟಕೀಯ ಘಟನೆಗಳು ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ. ತಾಜ್ ಪ್ಯಾಲೇಸ್​​ಗೆ ಬಂದ ಚೀನಾದ ಪ್ರತಿನಿಧಿಗಳ ಕೈಯಲ್ಲಿದ್ದ ಬ್ಯಾಗ್ ಬಗ್ಗೆ ಅನುಮಾನವಿದೆ ಎಂದು ಅಲ್ಲಿನ ಭದ್ರತಾ ಸಿಬ್ಬಂದಿಗಳು ಹೇಳಿದ್ದರು ಎಂದು ವರದಿ ಉಲ್ಲೇಖಿಸಿದೆ. ಬ್ಯಾಗ್‌ಗಳು ಅಸಾಮಾನ್ಯ ಗಾತ್ರದ ಕಾರಣದಿಂದ ಹೋಟೆಲ್ ಸಿಬ್ಬಂದಿಯ ಗಮನ ಸೆಳೆದಿದ್ದು ಇದನ್ನು ಅವರು ಭದ್ರತಾ ಅಧಿಕಾರಿಗಳನ್ನು ಗಮನಕ್ಕೆ ತಂದಿದ್ದರು.

ರಾಜತಾಂತ್ರಿಕ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ಭದ್ರತಾ ಸಿಬ್ಬಂದಿ ಬ್ಯಾಗ್‌ಗಳನ್ನು ಹೋಟೆಲ್‌ಗೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರು. ಆದರೆ ಚೀಲದೊಳಗೆ ಸಿಕ್ಕ ವಸ್ತುಗಳ ಬಗ್ಗೆ ಅನುಮಾನ ಬಂದಾಗ ಸಿಬ್ಬಂದಿ ತ್ವರಿತವಾಗಿ ಬ್ಯಾಗ್‌ಗಳನ್ನು ಸ್ಕ್ಯಾನ್ ಮಾಡಲು ನಿರ್ಧರಿಸಿದರು. ಆದರೆ ಚೀನೀ ನಿಯೋಗವು ತಪಾಸಣೆಯನ್ನು ವಿರೋಧಿಸಿದಾಗ ಅಲ್ಲಿ ಮಾತಿನ ಚಕಮಕಿ ಉಂಟಾಗಿದೆ.

ಇದಲ್ಲದೆ, ಚೀನಾದ ನಿಯೋಗವು ಹೋಟೆಲ್‌ನಲ್ಲಿ ಪ್ರತ್ಯೇಕ ಮತ್ತು ‘ಖಾಸಗಿ’ ಇಂಟರ್ನೆಟ್ ಸಂಪರ್ಕವನ್ನು ವಿನಂತಿಸಿದೆ. ಆದರೆ ವಿನಂತಿಯನ್ನು ನಿರಾಕರಿಸಲಾಗಿದೆ ಎಂದು ವರದಿ ಹೇಳಿದೆ. ಈ ವಿಚಾರದಲ್ಲಿ ಸುಮಾರು 12 ಗಂಟೆಗಳ ಕಾಲ ಮಾತಿನ ಚಕಮಕಿ ಮುಂದುವರಿದಿದೆ. ಕೊನೆಗೆ ಚೀನಾದ ಭದ್ರತಾ ಸಿಬ್ಬಂದಿ ಹೋಟೆಲ್‌ನಿಂದ ಉಪಕರಣಗಳನ್ನು ತೆಗೆದುಹಾಕಲು ಮತ್ತು ಅದನ್ನು ರಾಯಭಾರ ಕಚೇರಿಗೆ ಸಾಗಿಸಲು ಒಪ್ಪಿಕೊಂಡರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ.

ಚೀನಾ ಪ್ರಧಾನಿ ಲಿ ಕಿಯಾಂಗ್ ಅವರ ಭಾರತ ಭೇಟಿಯನ್ನು ಕೊನೆಯ ಕ್ಷಣದಲ್ಲಿ ಘೋಷಿಸಲಾಯಿತು. ಆದಾಗ್ಯೂ, ಅವರು ಹಿರಿಯ ನಾಯಕರಿಗೆ ಗೊತ್ತುಪಡಿಸಿದ ಸಾಂಪ್ರದಾಯಿಕ ‘ವಿಶೇಷ ವಿಮಾನ’ದಲ್ಲಿ ಪ್ರಯಾಣಿಸದೇ ಇದ್ದುದು ಕೂಡಾ ಅನುಮಾನಕ್ಕೀಡು ಮಾಡಿತ್ತು.

ಇದನ್ನೂ ಓದಿ: G20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ

ಚೀನಾ ಇತ್ತೀಚೆಗೆ ನವದೆಹಲಿ ಜಿ 20 ಶೃಂಗಸಭೆಯಲ್ಲಿ ತನ್ನ ಮೌನ ಮುರಿದು, ಸದಸ್ಯ ರಾಷ್ಟ್ರಗಳು ಅಂಗೀಕರಿಸಿದ ಘೋಷಣೆಯು ಜಾಗತಿಕ ಸವಾಲುಗಳನ್ನು ನಿಭಾಯಿಸಲು ಮತ್ತು ವಿಶ್ವ ಆರ್ಥಿಕ ಚೇತರಿಕೆಗೆ ಉತ್ತೇಜನ ನೀಡಲು ಪ್ರಭಾವಿ ಗುಂಪು “ಒಟ್ಟಿಗೆ ಕೆಲಸ ಮಾಡುತ್ತಿದೆ” ಎಂಬ “ಸಕಾರಾತ್ಮಕ ಸಂಕೇತವನ್ನು” ಕಳುಹಿಸಿದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ