AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಜಿ-20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.8 ರಿಂದ 10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳು ಬಂದ್

ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆ.8ರಿಂದ ಸೆ.10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಆಯುಕ್ತರು ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸರ್ಕಾರಿ ರಜೆಯನ್ನು ಘೋಷಿಸಲು ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ.

ದೆಹಲಿ: ಜಿ-20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.8 ರಿಂದ 10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳು ಬಂದ್
ಪೊಲೀಸ್
Follow us
ನಯನಾ ರಾಜೀವ್
|

Updated on:Aug 23, 2023 | 8:46 AM

ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆ.8ರಿಂದ ಸೆ.10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಆಯುಕ್ತರು ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸರ್ಕಾರಿ ರಜೆಯನ್ನು ಘೋಷಿಸಲು ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ.

ವಿಶ್ವದ ಅತಿದೊಡ್ಡ ಆರ್ಥಿಕತೆಗಳ ನಾಯಕರ ಸಭೆಯಾದ G20 ಶೃಂಗಸಭೆಯು ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 10 ರಂದು ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯ ಪ್ರಗತಿ ಮೈದಾನದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಅತ್ಯಾಧುನಿಕ ಭಾರತ್ ಮಂಟಪದ ಸಮಾವೇಶ ಕೇಂದ್ರದಲ್ಲಿ ನಡೆಯಲಿದೆ.

ಟ್ರಾಫಿಕ್​ನ್ನು ನಿಭಾಯಿಸುವ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಜಿ-20 ಶೃಂಗಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್, ಚೀನಾದ ಪ್ರಧಾನಿ ಕ್ಸಿ ಜಿನ್‌ಪಿಂಗ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸೇರಿದಂತೆ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಮತ್ತು ರಾಜತಾಂತ್ರಿಕರು ಆಗಮಿಸಲಿದ್ದಾರೆ. ವಿವಿಧ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಬಹು ತಂಡಗಳನ್ನು ನಿಯೋಜಿಸಲಾಗಿದೆ.

ಮತ್ತಷ್ಟು ಓದಿ: G20 Summit: ‘ವಿಶ್ವವೇ ಒಂದು ಕುಟುಂಬ’ ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ

G20 ಶೃಂಗಸಭೆಯು ಜಾಗತಿಕ ಆರ್ಥಿಕ ಸಮಸ್ಯೆಗಳು, ಸಹಕಾರ ಮತ್ತು ನೀತಿ ಸಮನ್ವಯವನ್ನು ಚರ್ಚಿಸಲು ರಾಷ್ಟ್ರದ ಮುಖ್ಯಸ್ಥರು, ಆರ್ಥಿಕ ತಜ್ಞರು ಮತ್ತು ವಿವಿಧ ವಲಯಗಳ ಪ್ರತಿನಿಧಿಗಳು ಒಗ್ಗೂಡಲಿದ್ದಾರೆ.

ಇದಲ್ಲದೆ, ದೆಹಲಿ ಪೊಲೀಸರು ವಿಶೇಷ ರೀತಿಯ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಬುಲೆಟ್ ಪ್ರೂಫ್ ಜಾಕೆಟ್‌ಗಳು ಮತ್ತು ಎಕ್ಸ್-ರೇ ಯಂತ್ರಗಳನ್ನು ಸಂಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Wed, 23 August 23

ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು