Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಜಿ-20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.8 ರಿಂದ 10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳು ಬಂದ್

ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆ.8ರಿಂದ ಸೆ.10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಆಯುಕ್ತರು ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸರ್ಕಾರಿ ರಜೆಯನ್ನು ಘೋಷಿಸಲು ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ.

ದೆಹಲಿ: ಜಿ-20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.8 ರಿಂದ 10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳು ಬಂದ್
ಪೊಲೀಸ್
Follow us
ನಯನಾ ರಾಜೀವ್
|

Updated on:Aug 23, 2023 | 8:46 AM

ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆ.8ರಿಂದ ಸೆ.10ರವರೆಗೆ ಶಾಲೆಗಳು, ಕಚೇರಿಗಳು, ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಆಯುಕ್ತರು ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10 ರವರೆಗೆ ಸರ್ಕಾರಿ ರಜೆಯನ್ನು ಘೋಷಿಸಲು ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆಗಳು ನಡೆದಿವೆ.

ವಿಶ್ವದ ಅತಿದೊಡ್ಡ ಆರ್ಥಿಕತೆಗಳ ನಾಯಕರ ಸಭೆಯಾದ G20 ಶೃಂಗಸಭೆಯು ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 10 ರಂದು ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯ ಪ್ರಗತಿ ಮೈದಾನದಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ಅತ್ಯಾಧುನಿಕ ಭಾರತ್ ಮಂಟಪದ ಸಮಾವೇಶ ಕೇಂದ್ರದಲ್ಲಿ ನಡೆಯಲಿದೆ.

ಟ್ರಾಫಿಕ್​ನ್ನು ನಿಭಾಯಿಸುವ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಜಿ-20 ಶೃಂಗಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡೆನ್, ಚೀನಾದ ಪ್ರಧಾನಿ ಕ್ಸಿ ಜಿನ್‌ಪಿಂಗ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸೇರಿದಂತೆ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಮತ್ತು ರಾಜತಾಂತ್ರಿಕರು ಆಗಮಿಸಲಿದ್ದಾರೆ. ವಿವಿಧ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಬಹು ತಂಡಗಳನ್ನು ನಿಯೋಜಿಸಲಾಗಿದೆ.

ಮತ್ತಷ್ಟು ಓದಿ: G20 Summit: ‘ವಿಶ್ವವೇ ಒಂದು ಕುಟುಂಬ’ ಜಿ-20 ಶೃಂಗಸಭೆಯಲ್ಲಿ ಏಕತೆಯ ಸಂದೇಶ ಸಾರಿದ ಭಾರತ

G20 ಶೃಂಗಸಭೆಯು ಜಾಗತಿಕ ಆರ್ಥಿಕ ಸಮಸ್ಯೆಗಳು, ಸಹಕಾರ ಮತ್ತು ನೀತಿ ಸಮನ್ವಯವನ್ನು ಚರ್ಚಿಸಲು ರಾಷ್ಟ್ರದ ಮುಖ್ಯಸ್ಥರು, ಆರ್ಥಿಕ ತಜ್ಞರು ಮತ್ತು ವಿವಿಧ ವಲಯಗಳ ಪ್ರತಿನಿಧಿಗಳು ಒಗ್ಗೂಡಲಿದ್ದಾರೆ.

ಇದಲ್ಲದೆ, ದೆಹಲಿ ಪೊಲೀಸರು ವಿಶೇಷ ರೀತಿಯ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಬುಲೆಟ್ ಪ್ರೂಫ್ ಜಾಕೆಟ್‌ಗಳು ಮತ್ತು ಎಕ್ಸ್-ರೇ ಯಂತ್ರಗಳನ್ನು ಸಂಗ್ರಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:45 am, Wed, 23 August 23

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ